ಮೇ.17 ರವರೆಗೆ ನಿಷೇಧಾಜ್ಞೆ ಜಾರಿ – ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ

ದೊಡ್ಡಬಳ್ಳಾಪುರ : ಕರೊನಾ ವೈರಸ್ (ಕೋವಿಡ್-19) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಮೇ 03 ರ ಮಧ್ಯರಾತ್ರಿ 12.00 ಗಂಟೆಯಿಂದ ಮೇ.17 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಕೇಂದ್ರ ಗೃಹ ಮಂತ್ರಾಲಯದಿಂದ ಹೊರಡಿಸಿರುವ ಆದೇಶದನ್ವಯ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144(1) ರಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರವೀಂದ್ರ ಪಿ.ಎನ್. ಅವರು ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಎಲ್ಲಾ ಜೋನ್‌ಗಳಲ್ಲಿ, ಎಲ್ಲಾ ಸ್ಥಳೀಯ ಹಾಗೂ ಅಂತರರಾಷ್ಟ್ರೀಯ ಸಾರ್ವಜನಿಕ ವೈಮಾನಿಕ ಸೇವೆ, ವೈದ್ಯಕೀಯ ಸೇವೆ ಹಾಗೂ ಎಂ.ಹೆಚ್.ಎ ರಿಂದ ಅನುಮತಿಸಲಾದ ಉದ್ದೇಶಗಳಿಗೆ ಹೊರತುಪಡಿಸಿ, ರೈಲುಗಳ ಮುಖಾಂತರ ಸಾರ್ವಜನಿಕ ಸಂಚಾರ, ಎಂ.ಹೆಚ್.ಎ ರವರಿಂದ ಅನುಮತಿಸಲಾದ ಉದ್ದೇಶಗಳಿಗೆ ಹೊರತುಪಡಿಸಿ, ಅಂತರ್‌ರಾಜ್ಯ ಬಸ್ಸು ಸೇವೆ, ಎಂ.ಹೆಚ್.ಎ ರವರಿಂದ ಅನುಮತಿಸಲಾದ ಉದ್ದೇಶಗಳಿಗೆ ಹೊರತುಪಡಿಸಿ, ಮೆಟ್ರೋ ರೈಲು ಸೇವೆ, ಎಂ.ಹೆಚ್.ಎ ರವರಿಂದ ಅನುಮತಿಸಲಾದ ಉದ್ದೇಶಗಳಿಗೆ ಹೊರತುಪಡಿಸಿ, ಸಾರ್ವಜನಿಕರ ಅಂತರ್‌ರಾಜ್ಯ ಓಡಾಟಗಳು, ವೈದ್ಯಕೀಯ ಹಾಗೂ ಎಂ.ಹೆಚ್.ಎ ರವರಿಂದ ಅನುಮತಿಸಲಾದ ಉದ್ದೇಶಗಳಿಗೆ ಹೊರತುಪಡಿಸಿ, ಎಲ್ಲಾ ಶಾಲಾ, ಕಾಲೇಜು, ಶೈಕ್ಷಣಿಕ/ ತರಬೇತಿ / ತರಬೇತಿ ಸಂಸ್ಥೆಗಳು ಇತರೆ, ಆದರೆ ಆನ್‌ಲೈನ್ / ಅಂತರದ ಕಲಿಕೆಗಳಿಗೆ ಹೊರತುಪಡಿಸಿ, ಎಲ್ಲಾ ಸರ್ಕಾರೇತರ ಆತಿಥ್ಯ ಸೇವೆಗಳು, ಕ್ವಾರಂಟೀನ್ ಸೌಲಭ್ಯಗಳನ್ನು ಹೊರತುಪಡಿಸಿ, ಎಲ್ಲಾ ಚಿತ್ರಮಂದಿಗಳು, ಶಾಪಿಂಗ್ ಮಾಲ್‌ಗಳು, ಜೀಮ್, ಕ್ರೀಡಾ ಸಂಕೀರ್ಣ, ಈಜುಕೊಳಗಳು, ಮನರಂಜನಾ ಪಾರ್ಕ್‌ಗಳು, ಸಭಾಂಗಣಗಳು, ಆಸೆಂಬ್ಲಿ ಹಾಲ್‌ಗಳು ಹಾಗೂ ಮುಂತಾದವುಗಳು, ಎಲ್ಲಾ ಸಾಮಾಜಿಕ / ರಾಜಕೀಯ / ಕ್ರೀಡಾ / ಮನರಂಜನಾ / ಶೈಕ್ಷಣಿಕ / ಸಾಂಸ್ಕತಿಕ / ಧಾರ್ಮಿಕ ಸಮಾರಂಭಗಳು, ಎಲ್ಲಾ ಧಾರ್ಮಿಕ ಸ್ಥಳಗಳಿಗೆ ಸಾರ್ವಜನಿಕರ ಭೇಟಿ ನಿಷೇಧಿಸಿ, ನಿರ್ಬಂಧಿಸಲಾಗಿರುತ್ತದೆ.

ಸಾರ್ವಜನಿಕರ ಸುರಕ್ಷತೆಗಾಗಿ, ಎಲ್ಲಾ ಸಾರ್ವಜನಿಕ ಅನಗತ್ಯ ಓಡಾಟಗಳು ಬೆಳಗ್ಗೆ 7 ರಿಂದ ಸಂಜೆ 7 ರ ವರೆಗೆ ನಿರ್ಬಂಧಿಸಲಾಗಿದೆ. ಸ್ಥಳೀಯ ಪ್ರಾಧಿಕಾರಗಳು ಸಿಆರ್‌ಪಿಸಿ ಸೆಕ್ಷನ್ 145 ರಡಿಯಲ್ಲಿ ಕರ್ಪ್ಯೂ ವಿಧಿಸಿ ನಿಯಮಾನುಸಾರ ಸೂಕ್ತ ಮಾರ್ಗದರ್ಶಿಗಳನ್ನು ಹೊರಡಿಸುವುದು ಹಾಗೂ ಅನುಪಾಲನೆಯನ್ನು ಖಾತರಿಪಡಿಸುವುದು. ಎಲ್ಲಾ ಜೋನ್‌ಗಳಲ್ಲಿ 65 ವರ್ಷ ಮೀರಿದ ವ್ಯಕ್ತಿಗಳು, ಗರ್ಭಿಣಿಯರು ಹಾಗೂ 10 ವರ್ಷದ ಕೆಳಪಟ್ಟ ಮಕ್ಕಳು ಮನೆಯಲ್ಲಿಯೇ ಇರಬೇಕು. ಅತ್ಯಗತ್ಯ ಹಾಗೂ ವೈದ್ಯಕೀಯ ಉದ್ದೇಶಗಳಿಗೆ ಹೊರತುಪಡಿಸಿ, ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಹೊರರೋಗಿ ವಿಭಾಗಗಳನ್ನು ತೆರೆಯುವಂತಿಲ್ಲ. ಆದರೆ, ಕೆಂಪು, ಕಿತ್ತಳೆ, ಹಸಿರು ವಲಯಗಳಲ್ಲಿ ಮಾತ್ರ ಇವುಗಳನ್ನು ತೆರೆಯುವುದು.ಕಟ್ಟುನಿಟ್ಟಾದ ಪರಿವಿಧಿಯ ಪಾಲನೆ, ಸ್ಪಷ್ಟ ಪ್ರವೇಶ ಹಾಗೂ ನಿರ್ಗಮನಗಳನ್ನು ನಿರ್ವಹಿಸುವುದು, ಸರಕು ಹಾಗೂ ವೈದ್ಯಕೀಯ ಸೇವೆಗಳನ್ನು ತಲುಪಿಸಲು ಮಾತ್ರ ಓಡಾಟಕ್ಕೆ ಅನುಮತಿಸುವುದು, ತಪಾಸಣೆ ಮಾಡದೆ ಯಾರನ್ನು ಒಳಹೋಗಲು ಅನುಮತಿಸುವಂತಿಲ್ಲ, ಒಳಹೋಗುವ ಹಾಗೂ ಹೊರಬರುವ ವ್ಯಕ್ತಿಗಳ ವಿವರಗಳನ್ನು ಕಡ್ಡಾಯಾಗಿ ದಾಖಲಿಸುವುದು ಕಂಟೈನ್‌ಮೆಂಟ್ ಜೋನ್‌ನ ಚಟುವಟಿಕೆಗಳಾಗಿದೆ.

ರೆಡ್ ಜೋನ್‌ನ ಚಟುವಟಿಕೆಗಳಲ್ಲಿ(ಕನ್‌ಟೈನ್‌ಮೆಂಟ್ ಜೋನ್‌ನ ಹೊರವಲಯಗಳಲ್ಲಿ), ಸೈಕಲ್ ರಿಕ್ಷಾ ಹಾಗೂ ಆಟೋ ರಿಕ್ಷಾಗಳ ಬಳಕೆ, ಟ್ಯಾಕ್ಸಿ ಹಾಗೂ ಕ್ಯಾಬ್‌ಗಳ ಬಳಕೆ, ಜಿಲ್ಲೆಯ ಒಳಗಡೆ ಹಾಗೂ ಹೊರಗಡೆ ಬಸ್ಸುಗಳ ಸಂಚಾರ, ಕ್ಷೌರಿಕ ಅಂಗಡಿಗಳು, ಸ್ಪಾ ಹಾಗೂ ಸಲೂನ್‌ಗಳ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.ವೈಯುಕ್ತಿಕ ಹಾಗೂ ವಾಹನಗಳು ಅನುಮತಿಸಿದ ಚಟುವಟಿಕೆಗಳಿಗೆ ಹೊರತುಪಡಿಸಿ ಓಡಾಡುವಂತಿಲ್ಲ(ದ್ವಿಚಕ್ರ ವಾಹನದಲ್ಲಿ ಒಬ್ಬರಿಗೆ ಮಾತ್ರ ಹಾಗೂ ನಾಲ್ಕು ಚಕ್ರದ ವಾಹನದಲ್ಲಿ ಡೈವರ್ ಹೊರತುಪಡಿಸಿ ಇಬ್ಬರಿಗೆ ಮಾತ್ರ). ನಗರ ಪ್ರದೇಶಗಳಲ್ಲಿನ ಕೈಗಾರಿಕಾ ಚಟುವಟಿಕೆಗಳನ್ನು ಕೇವಲ Special Economic Zones (SEZs), Export oriented unit (EOUs), ಅತ್ಯಗತ್ಯ ವಸ್ತುಗಳನ್ನು ತಯಾರಿಸುವ ಘಟಕಗಳು, ಔಷಧಿ ತಯಾರಿಸುವ ಮತ್ತು ವೈದ್ಯಕೀಯ ಸಲಕರಣೆಗಳನ್ನು ತಯಾರಿಸುವ ಘಟಕಗಳು, ಗ್ರಾಮೀಣ ಪ್ರದೇಶದಲ್ಲಿನ ಎಲ್ಲಾ ಕೈಗಾರಿಕಾ ಚಟುವಟಿಕೆಗಳು ನಡೆಸಬಹುದಾಗಿದೆ.

ನಗರ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಕೇವಲ ಸ್ಥಳೀಯವಾಗಿ ಲಭ್ಯವಿರುವ ಕಾರ್ಮಿಕರನ್ನು ಬಳಸಿಕೊಂಡು ಕಟ್ಟಡ ನಿರ್ಮಾಣ ಕೈಗೊಳ್ಳಬಹುದಾಗಿದೆ. ಬೇರೆ ಕಡೆಯಿಂದ ಕಾರ್ಮಿಕರನ್ನು ಕರೆತರಲು ಅವಕಾಶವಿರುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಕಟ್ಟಡ ನಿರ್ಮಾಣ ಕಾರ್ಯವನ್ನು ಅನುಮತಿಸಿದೆ.ನಗರ ಪ್ರದೇಶಗಳಲ್ಲಿ ಮಾಲ್‌ಗಳು, ಸಂತೇ, ಮಾರುಕಟ್ಟೆ ಸಂಕೀರ್ಣಗಳಲ್ಲಿ ವ್ಯಾಪಾರವನ್ನು ನಿಷೇಧಿಸಿದೆ, ಅದ್ವೀತಿಯ (ಸಿಂಗಲ್) ಅಂಗಡಿಗಳನ್ನು, ಬಡಾವಣೆಗಳಿಗೆ ಹೊಂದಿಕೊಂಡಿರುವ ಅಂಗಡಿಗಳನ್ನು, ಬಜಾರ್ ಸ್ಟ್ರೀಟ್, ಬಡಾವಣೆಯ ಒಳಗಡೆ ಇರುವಂತಹ ಅಂಗಡಿಗಳನ್ನು ಎಲ್ಲಾ ತರಹದ ಅಗತ್ಯ ಹಾಗೂ ಅನಾಗತ್ಯ ಅಂಗಡಿಗಳನ್ನು ತೆರೆಯಲು ಅನುಮತಿಸಿದೆ. ಗ್ರಾಮೀಣ ಪ್ರದೇಶದಲ್ಲಿ ಮಾಲ್‌ಗಳನ್ನು ಹೊರತುಪಡಿಸಿ ಎಲ್ಲಾ ಅಗತ್ಯ ಹಾಗೂ ಅನಾಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ತೆರೆಯಬಹುದಾಗಿದೆ(ಎರಡು ಗಜದ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವುದು). ಇ – Commerce ಚಟುವಟಿಕೆಗಳನ್ನು ಕೇವಲ ಅವಶ್ಯಕ ಸಾಮಾಗ್ರಿಗಳಿಗೆ ಮಾತ್ರ ಅನುಮತಿಸಿದೆ. ಖಾಸಗಿ ಕಛೇರಿಗಳು ಶೇಕಡಾ 33ರಷ್ಟು ಸಿಬ್ಬಂದಿಗಳನ್ನು ಮಾತ್ರ ಕೆಲಸ ನಿರ್ವಹಿಸುವುದು. ಉಳಿಕೆ ಸಿಬ್ಬಂದಿಗಳಿಗೆ ಮನೆಯಲ್ಲಿಯೇ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲು ಅನುಮತಿಸಿದೆ.

ಈ ಚಟುವಟಿಕೆಗಳನ್ನು ನಿರ್ವಹಿಸುವ ಸಮಯದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಳಕೆಯನ್ನು ಕಡ್ಡಾಯಪಡಿಸಲಾಗಿದೆ. ಮತ್ತು ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಕಾರ್ಯ ನಿರ್ವಹಿಸಲು ಅನುಮತಿಸಿದೆ.ಒಂದು ವೇಳೆ ಯಾರಾದರೂ ಈ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ಪ್ರಕೃತಿ ವಿಕೋಪ ಕಾಯ್ದೆ 2005ರ ನಿಯಮ 51 ರಿಂದ 60 ಹಾಗೂ ಐಪಿಸಿ ಸೆಕ್ಷನ್ 188 ರಡಿಯಲ್ಲಿ ದಂಡನೆ ಹಾಗೂ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಹಾಗೂ ನಿಯಂತ್ರಣ ಕ್ರಮಗಳು ಮೇ.03 ರ ಮಧ್ಯರಾತ್ರಿ 12.00 ಗಂಟೆಯಿಂದ ಮೇ.13 ರ ಮಧ್ಯರಾತ್ರಿ12.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದುಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಮತ್ತು ಜಿಲ್ಲಾದಂಡಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಪಿ.ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!