ಮಹಿಳಾ ಸದಸ್ಯರ ನಾಟಿ ಕೋಳಿ ಸಾಕಾಣಿಕಾ ಕಂಪನಿ ಸ್ಥಾಪನೆಗೆ ಕ್ರಮ: ನಟೇಶ್

ದೊಡ್ಡಬಳ್ಳಾಪುರ : ಸಂಜೀವಿನಿ ಎನ್.ಆರ್.ಎಲ್.ಎಂ. ಯೋಜನೆಯಡಿ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರ ನಾಟಿ ಕೋಳಿ ಸಾಕಾಣಿಕಾ ಉತ್ಪಾದಕರ ಕಂಪನಿ ಹೆಸರಿನಡಿ ಸ್ಥಾಪನೆ ಮಾಡಿ, ಅವಶ್ಯವಿರುವ ತರಬೇತಿ, ಮಾರ್ಗದರ್ಶನವನ್ನು ಪರಿಣಿತಿ ಹೊಂದಿದ ಸಂಸ್ಥೆ ಮೂಲಕ ಕೈಗೊಳ್ಳಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವೆಗಳ ಇಲಾಖೆ ಆಯುಕ್ತ ನಟೇಶ್ ತಿಳಿಸಿದರು.  

ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ, ಹೊಸಕೋಟೆ ತಾಲ್ಲೂಕಿನಲ್ಲಿ ನಾಟಿ ಕೋಳಿ ಸಾಕಾಣಿಕೆ ಮಾಡುವ ರೈತ ಉತ್ಪಾದನಾ ಕಂಪನಿಯನ್ನು ಸಂಜೀವಿನಿ ಎನ್.ಆರ್.ಎಲ್.ಎಂ.(ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ) ಯೋಜನೆ ಮತ್ತು ಪಶುಪಾಲನಾ ಮತ್ತು ಪಶುವೈದ್ಯ ಸೇವೆಗಳ ಇಲಾಖೆ ಹಾಗೂ ಕರ್ನಾಟಕ ಸಹಕಾರ ಕುಕ್ಕೂಟ ಮಹಾ ಮಂಡಳಿ ರವರ ಸಹಯೋಗದೊಂದಿಗೆ ಸ್ಥಾಪಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

  ರಾಜ್ಯದಲ್ಲಿಯೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಹೊಸಕೋಟೆ ತಾಲ್ಲೂಕಿನಲ್ಲಿ ಕನಿಷ್ಠ ೫೦೦ ರಿಂದ ೧೦೦೦ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರ ನಾಟಿ ಕೋಳಿ ಸಾಕಾಣಿಕಾ ಉತ್ಪಾದಕರ ಕಂಪನಿಯನ್ನು ಸ್ಥಾಪನೆ ಮಾಡಲಾಗುವುದು. ಕಂಪನಿಯ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಅವಶ್ಯವಿರುವ ತರಬೇತಿ, ಮಾರ್ಗದರ್ಶನವನ್ನು ಪರಿಣಿತಿ ಹೊಂದಿದ ಸಂಸ್ಥೆ ಮೂಲಕ ಕೈಗೊಂಡು, ಉತ್ತಮ ಗುಣಮಟ್ಟದ ನಾಟಿ ಕೋಳಿ ಮರಿಗಳನ್ನು ನೀಡಲಾಗುವುದು. ಪೋಷಣೆ ಮಾಡಿ ಬೆಳೆದ ನಾಟಿ ಕೋಳಿಗೆ ಮಾರುಕಟ್ಟೆ ಸೌಲಭ್ಯವನ್ನು ಕಂಪನಿಯ ಮುಖಾಂತರ ಬೆಂಗಳೂರಿಗೆ ಬೇಡಿಕೆಯನುಸಾರ ಕಲ್ಪಿಸಲು ಕ್ರಮ ವಹಿಸಲಾಗುವುದೆಂದು ಮಾಹಿತಿ ನೀಡಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ  ಮಾತನಾಡಿ,ಸಂಜೀವಿನಿ ಎನ್.ಆರ್.ಎಲ್.ಎಂ. ಯೋಜನೆಯಡಿ ರಚನೆಯಾಗಿರುವ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಡಿ ಬರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಉಪ ಕಸುಬಾಗಿ ನಾಟಿ ಕೋಳಿ ಸಾಕಾಣಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಚಟುವಟಿಕೆಗಳನ್ನು ಕೈಗೊಂಡು ಕಂಪನಿಯ ಮುಖಾಂತರ ಮಾರುಕಟ್ಟೆಯನ್ನು ಕಲ್ಪಿಸಿದರೆ ಗ್ರಾಮೀಣ ಮಹಿಳೆಯರ ಆದಾಯ ಹೆಚ್ಚಳವಾಗಲು ಸಹಕಾರಿಯಾಗುವುದೆಂದು ತಿಳಿಸಿದರು. 

ಕರ್ನಾಟಕ ಸಹಕಾರ ಕುಕ್ಕೂಟ ಮಹಾ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ. ಕೆ.ಹೆಚ್.ಶಿವರುದ್ರಪ್ಪ ರೈತ ಉತ್ಪಾದಕ ಕಂಪನಿಯ ರಚನೆಯ ಬಗ್ಗೆ ಹಾಗೂ ಇಲಾಖೆಯಿಂದ ಕಂಪನಿಗೆ ದೊರೆಯುವ ಬೆಂಬಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಪಶುಪಾಲನಾ ಮತ್ತು ಪಶುವೈದ್ಯ ಸೇವೆಗಳ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕ ಡಾ.ಬಾಲಚಂದ್ರ, ಹೊಸಕೋಟೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್‌ಗೌಡ, ಸಂಜೀವಿನಿ ಜಿಲ್ಲಾ ಅಭಿಯಾನ ನಿರ್ವಹಣಾ ಘಟಕದ ಜಿಲ್ಲಾ ವ್ಯವಸ್ಥಾಪಕ ಅಶೋಕ.ವೈ.ಎಸ್. ಸೇರಿದಂತೆ ಹೊಸಕೋಟೆ ತಾಲ್ಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಜೀವಿನಿ ಯೋಜನೆಯ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಗಳಡಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.

ರಾಜಕೀಯ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ (Modi) ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.

[ccc_my_favorite_select_button post_id="120397"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!