ಲಾಕ್‌ಡೌನ್‌ ರೈತರ ಮುಂದೆ ಹಲವಾರು ಸಮಸ್ಯೆ, ಅವಕಾಶಗಳನ್ನು ತಂದುಕೊಟ್ಟಿದೆ

ದೊಡ್ಡಬಳ್ಳಾಪುರ: ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ವ್ಯವಸ್ಥಾಪನ ಮಂಡಳಿ ಸದಸ್ಯರಾಗಿ ನೇಮಕವಾಗಿರುವ ತಾಲ್ಲೂಕಿನ ಪ್ರಗತಿಪರ ಕೃಷಿಕ ದೊಡ್ಡತುಮಕೂರು ಗ್ರಾಮದ ಟಿ.ಎಂ.ಅರವಿಂದ್‌ ಅವರ ಅಭಿನಂದನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್‌.ಅಪ್ಪಯ್ಯ, ಗ್ರಾಮೀಣ ಪ್ರದೇಶದ ಜನರನ್ನು ಗುರುತಿಸಿ ಕೃಷಿ ವಿವಿಗಳಲ್ಲಿ ಜವಾಬ್ದಾರಿಗಳನ್ನು ನೀಡುವುದೇ ಅಪರೂಪ. ಇಂತಹ ಸಂದರ್ಭದಲ್ಲಿ ನಮ್ಮ ತಾಲ್ಲೂಕಿನ ಪ್ರಗತಿಪರ ಯುವ ಕೃಷಿಕರನ್ನು ವ್ಯವಸ್ಥಾಪನ ಮಂಡಳಿಗೆ ನೇಮಿಸಿರುವುದು ಹೆಮ್ಮೆಯ ಸಂಗತಿ. ಕೃಷಿ ವಿವಿಗಳಲ್ಲಿನ ನೂತನ ಪ್ರಯೋಗಗಳು ರೈತರ ತೋಟಗಳಲ್ಲಿ ಅನುಷ್ಟಾನಕ್ಕೆ ಬರುವಂತೆ ನೋಡಿಕೊಳ್ಳಬೇಕಾದ ತುರ್ತು ಅಗತ್ಯವಿದೆ. ಅಲ್ಲದೆ ಲಾಕ್‌ಡೌನ್‌ ರೈತರ ಮುಂದೆ ಹಲವಾರು ರೀತಿಯ ಹೊಸ ಸಮಸ್ಯೆಗಳು ಹಾಗೆಯೇ ಹೊಸ ಅವಕಾಶಗಳನ್ನು ಸಹ ತಂದಿಟ್ಟಿದೆ. ಇವುಗಳನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ಕೃಷಿ ವಿವಿಯಲ್ಲಿನ ತಜ್ಞರು ರೈತರೊಂದಿಗೆ ಕೂಡಿಕೊಂಡು ಮನವರಿಕೆ ಮಾಡಿಕೊಡಬೇಕಿದೆ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೃಷಿ ವಿವಿ ವ್ಯವಸ್ಥಾಪನ ಮಂಡಳಿ ಸದಸ್ಯ ಟಿ.ಎಂ.ಅರವಿಂದ್‌, ಕೃಷಿ ಸೇರಿದಂತೆ ಎಲ್ಲಾ ಉದ್ಯಮ, ಜನರ ಬದುಕು ಸಂಕ್ರಮಣ ಕಾಲಘಟ್ಟದಲ್ಲಿದೆ. ರೈತರ ಮುಂದೆ ಮಾರುಕಟ್ಟೆ ಸಮಸ್ಯೆಯು ಸೇರಿದಂತೆ ತಮ್ಮ ಮುಂದಿನ ಬದುಕು, ಯಾವ ಬೆಳೆ ಪದ್ದತಿಗಳ ಕಡೆಗೆ ಹೋಗಬೇಕು ಎನ್ನುವ ಹತ್ತಾರು ಪ್ರಶ್ನೆಗಳು ಇವೆ. ಇವುಗಳನ್ನು ಸಮರ್ಥವಾಗಿ ಎದುರುಸಿ ಬದುಕು ರೂಪಿಸಿಕೋಳ್ಳುವ ಕಡೆಗೆ ಅನುಕೂಲವಾಗುವಂತೆ ಕೃಷಿ ವಿವಿಗಳು ಶ್ರಮಿಸಲು ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನಗೌಡ, ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚಿಕ್ಕಣ್ಣ,ದಕ್ಷಿಣ ಭಾರತ ಹೂವು ಬೆಳೆಗಾರರ ಸಂಘದ ನಿರ್ದೇಶಕ ಶ್ರೀಕಾಂತ್‌ ಇದ್ದರು.   

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!