ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಡಿ ಗೌರವಧನದ ಆಧಾರದ ಮೇಲೆ ಖಾಲಿಯಿರುವ ಪ್ರೋಗ್ರಾಮ್ ಮ್ಯಾನೇಜರ್ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಜೂ.29 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. 

ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಯು 11 ತಿಂಗಳು ಅವಧಿಯದ್ದಾಗಿದೆ. ಬಿ.ಎ ಪದವಿ/ಬಿ.ಎಸ್.ಡಬ್ಲ್ಯೂ ವಿಷಯಗಳಲ್ಲಿ ಪದವಿ ಹೊಂದಿದ್ದು, ವಿವಿಧ ಸಾಮಾಜಿಕ ಕಾರ್ಯಕ್ಷೇತ್ರಗಳಲ್ಲಿ, ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಟ 05 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಮಕ್ಕಳು ದುಡಿಯುವ ಪ್ರದೇಶಗಳು ಹಾಗೂ ವೃತ್ತಿಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರಬೇಕು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಿಂದ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕಾಲಕಾಲಕ್ಕೆ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಪ್ರತಿ ಮಾಹೆಯಾನ ಬಾಲ ಕಾರ್ಮಿಕ ತರಬೇತಿ ಕೇಂದ್ರಗಳ ಮಾಹಿತಿಯನ್ನು ಪಡೆದು ಕ್ರೋಢೀಕರಿಸಿ ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸುವುದು.

ಕೇಂದ್ರ ಸರ್ಕಾರದ ಫೆನ್ಸಿಲ್ ಸಾಪ್ಟ್‌ವೇರ್, ಫಿಎಫ್‌ಎಂಎಸ್ ಸಾಪ್ಟ್‌ವೇರ್‌ಗಳ ಬಳಕೆ ಹಾಗೂ ವರದಿಗಳನ್ನು ಆನ್‌ಲೈನ್ ಮೂಲಕ ನಿರ್ವಹಿಸುವುದು. ಬಾಲ ಕಾರ್ಮಿಕ ತರಬೇತಿ ಕೇಂದ್ರಗಳ ಮೇಲ್ವಿಚಾರಣೆ ಮಾಡಿ ವರದಿಯನ್ನು ಸಲ್ಲಿಸುವುದು, ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಶೈಲಿಯನ್ನು ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು (M.S.Office, M.S.Excel & Internet operation,
kannada & English typing 
ಕಡ್ಡಾಯ) ಹೊಂದಿರಬೇಕು.

ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ಇಚ್ಚೆಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಅರ್ಜಿಯನ್ನು ಭಾವಚಿತ್ರ ಮತ್ತು ನಿಗದಿತ ದಾಖಲೆಗಳೊಂದಿಗೆ ಜೂ.29 ರೊಳಗೆ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೊಠಡಿ ಸಂಖ್ಯೆ-102, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ

[ccc_my_favorite_select_button post_id="109202"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]