ಮಾನವೀಯತೆ ಮರೆತ ವ್ಯಾಪಾರಿಗಳಿಗೆ ಜನರ ಹಿಡಿ ಶಾಪ..!

ಮುಖ್ಯಾಂಶಗಳು

ಕರೊನಾ ಸಂಕಷ್ಟದಲ್ಲಿ ದುಡ್ಡು ಮಾಡುವ ದುರಾಸೆಗಿಳಿದ ಆಸೆ ಬುರುಕ ವ್ಯಾಪಾರಿಗಳು.

ಸಾಮಗ್ರಿಗಳ ಕೊರತೆ ಇದೆ ಎಂಬ ನೆಪ / ಚಿತೆಯಲ್ಲಿ ಬೀಡಿ ಅಂಟಿಸಿಕೊಳ್ಳುವ ದುರಾಲೋಚನೆ

ಅನಿವಾರ್ಯವಾಗಿ ಖರೀದಿಸಬೇಕಾದ ಜನತೆಯಿಂದ ಹಿಡಿ ಶಾಪ 

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ಬಡವರು

ದೊಡ್ಡಬಳ್ಳಾಪುರ : ಕರೊನಾ ಸೋಂಕಿನ ಹಿನ್ನಲೆ ಘೋಷಿಸಲಾದ ಲಾಕ್ ಡೌನ್ ಕಾರಣ ತರಕಾರಿ-ದಿನಸಿ ಸಾಮಗ್ರಿಗಳ ಬೆಲೆ ಹೆಚ್ಚಳದಿಂದ ಜನ ಪರಿತಪಿಸುವಂತಾಗಿದೆ.

ತರಕಾರಿ ಹಾಗೂ ದಿನಸಿ ಸಾಮಗ್ರಿಗಳ ಕೊರತೆ ಇದೆ ಎಂಬ ನೆಪದಲ್ಲಿ ಮಾರಾಟಗಾರರು ಹಣ್ಣು,ತರಕಾರಿ, ಪಲ್ಯ, ದಿನಸಿ,ಕೋಳಿ ಸಾಮಗ್ರಿಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಮುಂದಾಗಿದ್ದಾರೆ.ಅನಿವಾರ್ಯವಾಗಿ ಜನರು ಹೆಚ್ಚಿನ ದರ ನೀಡಿ ಖರೀದಿಸಬೇಕಾದ ಸ್ಥಿತಿ ನಿರ್ಮಾಣಗೊಂಡಿದ್ದು,ಒಂದೆಡೆ ಕರೊನಾ ಹಾಗೂ ಇನ್ನೊಂದೆಡೆ ಮಾನವೀಯತೆ ಮರೆತು ದರ ಹೆಚ್ಚಳ ಮಾಡಿರುವ ವ್ಯಾಪಾರಸ್ಥರಿಗೆ ಜನ ಹಿಡಿಶಾಪ ಹಾಕತೊಡಗಿದ್ದಾರೆ.

5 – 15 ರೂ. ಬೆಲೆ ಏರಿಕೆ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳು ನಿರೀಕ್ಷಿತ ಮಟ್ಟದಲ್ಲಿ ಮಾರುಕಟ್ಟೆಗೆ ಬರುತ್ತಿಲ್ಲ ಎಂಬ ನೆಪವೊಡ್ಡಿ ಸಗಟು ಮಾರಾಟಗಾರ 1ರೂ ಬೆಲೆ ಏರಿಕೆ ಮಾಡಿದರೆ.ಚಿಲ್ಲರೆ ಮಾರಾಟಗಾರರು 5 ರಿಂದ 10ರೂ ಬೆಲೆ ಏರಿಕೆ ಮಾಡಿ ಜನತೆ ಸಂಕಷ್ಟದಲ್ಲಿ ಬಸವಳಿಯುತ್ತಿದ್ದರೆ,ಇಂತಹ ಸಂದರ್ಭದಲ್ಲಿ ಮಾನವೀಯತೆ ಮರೆತು ದುಡ್ಡು ಮಾಡುವ ದಂದೆಗಿಳಿದಿದ್ದಾರೆ.

ಪ್ರಸ್ತುತ ಪ್ರತಿ ಕೆಜಿಗೆ ಸಕ್ಕರೆ 4-5ರೂ,ತೊಗರಿ ಬೇಳೆ 4-8 ರೂ, ಎಣ್ಣೆ 10-15 ರೂ, ರವಾ-ಅಕ್ಕಿ ಸೇರಿದಂತೆ ಎಲ್ಲವೂ ಕೆಜಿಗೆ 5 ರಿಂದ 15 ರೂ. ಗಳವರೆಗೆ ಏರಿಕೆ ಕಂಡಿವೆ. ಇನ್ನು ತರಕಾರಿಯೂ ತುಟ್ಟಿಯಾಗಿದ್ದು, ಹಣ್ಣುಗಳ ಬೆಲೆ ದುಪ್ಪಟ್ಟಾಗಿದೆ. ಕಿತ್ತಳೆ 80 ರೂ. ಕೆಜಿ, ದ್ರಾಕ್ಷಿ 80-100 ರೂ.ಗಳು, ಕರಬೂಜ 50 ರೂ. ಗಳಿಗೆ ಒಂದು, ಕಲ್ಲಂಗಡಿ ಸಣ್ಣದು 50ರೂ. ಹಾಗೂ ದೊಡ್ಡದು 80-100 ರೂ., ಸೇಬು 80-150 ರೂ.ಗಳು, ಯಾಲಕ್ಕಿ ಬಾಳೆ ಕೆಜಿ 60 ರೂ.ಗಳಿಗೆ ಮಾರಾಟವಾಗ್ತಿವೆ.

ಸಿಗರೇಟ್ ಮಾರಾಟದಲ್ಲಿ ಸುಲಿಗೆ

ಆಹಾರ ಪದಾರ್ಥ,ಮತ್ತೊಂದೆಡೆ ಮದ್ಯ ಮಾರಾಟದಲ್ಲಿ ಬೆಲೆ ಏರಿಕೆಯಾದರೆ ಅಲ್ಲೊಂದು ಆಕ್ರಂದನ ಯಾರಿಗೂ ಕೇಳಿಸದಾಗಿದೆ.ಲಾಕ್ ಡೌನ್ ಆರಂಭವಾದಾಗಿನಿಂದ ಧೂಮಪಾನಿಗಳ ಜೇಬನ್ನು ಹಾಡು ಹಗಲೆ ಕತ್ತರಿ ಹಾಕುತ್ತಿರುವ ಸಿಗರೇಟ್ ಮಾರಾಟಗಾರರು.10 ರ ಬೆಲೆಗೆ 20,16ರ ಬೆಲೆಯ ಸಿಗರೇಟಿಗೆ 30ರೂಗೆ ಮಾರುವ ಮೂಲಕ ರಾಜಾರೋಶವಾಗಿ ಹಗಲು ಸುಲಿಯನ್ನು ನಡೆಸುತ್ತಿದ್ದರು ಧೂಮಪಾನಿಗಳು ಮಾತ್ರ ಯಾರಿಗೂ ಹೇಳಲಾಗದೆ ಮೌನ ವ್ಯಥೆ ಪಡುತ್ತಿದ್ದಾರೆ.

ಇಡೀ ದೇಶವೇ ಸಂಕಷ್ಟದಲ್ಲಿರುವಾಗ.ಚಿತೆಯಲ್ಲಿ ಬೀಡಿ ಅಂಟಿಸಿಕೊಳ್ಳುವ ದುರಾಲೋಚನೆಗೆ ಇಳಿದಿರುವ ವ್ಯಾಪಾರಿಗಳಿಗೆ ಜನರ ಶಾಪ ತಟ್ಟದೇ ಇರುವುದೆ…?

ನುಂಗಲಾರದ ತುತ್ತಾಗಿದೆ.

ಕರೊನಾ ಸೋಂಕು ತಡೆಗೆ ಹೋರಾಟ ನಡೆಸುತ್ತಿರುವಾಗಲೇ ಬೆಲೆ ಏರಿಕೆ ಎನ್ನುವುದು ಸಾರ್ವಜನಿಕರನ್ನು ಬಾಧಿಸತೊಡಗಿದೆ. ಏನೇ ಖರೀದಿಸಲು ಹೋದರೂ ಈ ಹಿಂದಿಗಿಂತಲೂ ಹೆಚ್ಚಿನ ಬೆಲೆ ನೀಡಿ ಖರೀದಿಸಬೇಕಾಗಿದೆ. ಸಂಬಂಧಪಟ್ಟವರು ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು – ರಾಜ್‌ವಡ್ಡಳ್ಳಿ,ಸಾರ್ವಜನಿಕ,ದೊಡ್ಡಬಳ್ಳಾಪುರ

ಸಾರಿಗೆ ವೆಚ್ಚ ಹೆಚ್ಚು.

ಎಲ್ಲೆಡೆ ಲಾಕ್‌ಡೌನ್ ಆಗಿರುವುದರಿಂದ ಸಂಚಾರ ಅಸ್ತವ್ಯಸ್ತವಾಗಿದ್ದು, ವಾಹನಗಳ ಓಡಾಟ ಇಲ್ಲವಾಗಿದೆ. ಇದರಿಂದ ಇರುವಷ್ಟು ದಾಸ್ತಾನು ಖಾಲಿ ಮಾಡಲಾಗುತ್ತಿದ್ದು, ಜೊತೆಯಲ್ಲಿಯೇ ಎಪಿಎಂಸಿಯಿಂದ ದಾಸ್ತಾನು ತರಿಸಿಕೊಳ್ಳಬೇಕು. ಇದಕ್ಕಾಗಿ ಸಣ್ಣ ವಾಹನದ ಮೊರೆ ಹೋಗುತ್ತಿದ್ದು, ಅವರು ಬಾಡಿಗೆ ದರವನ್ನು ಏರಿಸಿದ್ದಾರೆ. ಒಂದು ಟನ್‌ಗೆ ಸುಮಾರು 50-100 ರೂ.ಗಳವರೆಗೆ ಏರಿಕೆ ಮಾಡಿದ್ದು, ಇದರಿಂದ ಅನಿವಾರ್ಯವಾಗಿ ಬೆಲೆ ಏರಿಕೆಯಾಗುತ್ತಿದೆ. ಇದು ಕೂಡಾ ಗ್ರಾಹಕರ ಮೇಲೆ ಬೀಳುತ್ತಿದೆ – ಹೆಸರು ಹೇಳಲಿಚ್ಛಿಸದ ವ್ಯಾಪಾರಿ

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!