ಜಲಾಮೃತ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಬೇಕು: ಎಂ.ಎನ್.ನಾಗರಾಜ

ದೊಡ್ಡಬಳ್ಳಾಪುರ : ಜಲ ಸಂರಕ್ಷಣೆ, ಜಲ ಸಾಕ್ಷರತೆ, ಜಲ ಮೂಲಗಳ ಪುನಶ್ಚೇತನ ಮತ್ತು ಹಸಿರೀಕರಣವನ್ನು  ಕೇಂದ್ರವಾಗಿಟ್ಟುಕೊಂಡು ನೀರಿನ ಸಂರಕ್ಷಣೆಗೆ ಆದ್ಯತೆ ನೀಡುವ ಜಲಾಮೃತ ಯೋಜನೆಯ ಯಶಸ್ಸಿಗೆ ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ  ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್. ನಾಗರಾಜ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಇಂದು ಜಲಾನಯನ ಅಭಿವೃದ್ಧಿ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾದ ಜಲಾಮೃತ ಕಾರ್ಯಾಗಾರವನ್ನು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಓ  ಎಂ.ಎನ್.ನಾಗರಾಜು ಅವರು ನೀರಿನ ಸಮಸ್ಯೆಯನ್ನು ಮೂಲದಿಂದ ನಿವಾರಿಸುವ ಸಲುವಾಗಿ ಜಲಾಮೃತ ಯೋಜನೆ ಜಾರಿಗೆ ತರಲಾಗಿದ್ದು, ಕೃಷಿ ಚಟುವಟಿಕೆ ಹೆಚ್ಚಾಗಿ ಕಂಡುಬರುವ ಗ್ರಾಮೀಣ ಪ್ರದೇಶದಲ್ಲಿ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಜಲಾಮೃತ ಯೋಜನೆಯ ಒಗ್ಗೂಡಿಸುವಿಕೆಯಡಿ ಗ್ರಾಮದ ಜನರನ್ನೇ ಬಳಸಿಕೊಂಡು ಜಲ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಅನುಷ್ಟಾನ ಮಾಡಲಾಗುತ್ತಿದೆ ಎಂದು ತಿಳಿಸಿದರು‌.

ಜಲಾಮೃತ ಯೋಜನೆಯಡಿ ನೀರಿನ ವಿವಿಧ ರೀತಿಯ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದ್ದು,  ಪ್ರಮುಖವಾಗಿ ಜಲ ಸಾಕ್ಷರತೆ ಮುಖೇನ ಜನರಲ್ಲಿ ನೀರಿನ ಮಿತ ಹಾಗೂ ಪ್ರಜ್ಞಾವಂತ ಬಳಕೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಜಲ ಮೂಲಗಳನ್ನು ಪುನಶ್ಚೇತನ ಮಾಡುವ ಕಾರ್ಯಕ್ರಮದಡಿ ಕೊಳವೆಬಾವಿಗಳ ಮರುಪೂರಣ, ಕೆರೆಗಳ ಹೂಳೆತ್ತುವಿಕೆ, ನೂತನ ಕೆರೆ, ಚೆಕ್‍ಡ್ಯಾಂ, ಕಲ್ಯಾಣಿ ಕೊಳಗಳ ನಿರ್ಮಾಣ, ಗೋ ಕಟ್ಟೆಗಳ ನಿರ್ಮಾಣದಂತಹ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

 ನೀರಿನ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಾಲ ಕಾಲಕ್ಕೆ ನೀರಿನ ಸ್ಥರಗಳ ಸ್ವಚ್ಛತಾ ಕಾರ್ಯವನ್ನು ಜಲಾಮೃತ ಯೋಜನೆಯಡಿ  ಮಾಡಲಾಗುವುದು. ಹಸಿರೀಕರಣದ ಮುಖೇನ ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮಹತ್ತರ ಕಾರ್ಯವನ್ನೂ ಕೈಗೊಳ್ಳಲಾಗಿದೆ ಎಂದು ಜಲಾಮೃತ ಯೋಜನೆಯ  ಮಹತ್ವವನ್ನು ಅಧಿಕಾರಿಗಳಿಗೆ ತಿಳಿಸಿದರು.

ಜಲಾಮೃತ ಯೋಜನೆಯಡಿ ಜಿಲ್ಲೆಯಲ್ಲಿ ಸಮಗ್ರ ಹಸಿರೀಕರಣ ಕಾರ್ಯಕ್ರಮವನ್ನು ಸಮುದಾಯದ ಪಾಲ್ಗೊಳ್ಳುವಿಕೆಯೊಂದಿಗೆ ಅಂದಾಜು 60 ಸಾವಿರ  ಸಸಿಗಳನ್ನು ನೆಡಿಸಲು ಕಾರ್ಯ ರೂಪಿಸಲಾಗಿದೆ. ಸಾಂಪ್ರದಾಯಿಕ ಜಲಮೂಲಗಳನ್ನು ಗುರುತಿಸಲಾಗಿದ್ದು, ಆಯಾ ಗ್ರಾಮ ಪಂಚಾಯತಿಗಳ ಮೂಲಕ ಪುನಶ್ಚೇತನ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜಲಾಮೃತ ಯೋಜನೆಯಡಿ ಪ್ರಮುಖ ಕೆರೆಗಳನ್ನು ಆಯ್ಕೆ ಮಾಡಲಾಗಿದ್ದು, ಕೆರೆಗಳ ಅಗತ್ಯತೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುವುದು. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಗುಳ್ಯ ನಂದಿಗುಂದ, ಕೊಡಿಗೇಹಳ್ಳಿ, ಕೊನಘಟ್ಟ, ಕುರುಬರಹಳ್ಳಿ , ರಬ್ಬನಹಳ್ಳಿ ಮತ್ತು ಲಿಂಗನಹಳ್ಳಿ ಯನ್ನು ಕಿರು ಜಲಾನಯನ ಯೋಜನೆ ಅನುಷ್ಠಾನಗೊಳಿಸಲು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ನೆಲಮಂಗಲ ತಾಲೂಕಿನ ಹೊನ್ನಸಂದ್ರ, ಲಿಂಗೇನಹಳ್ಳಿ, ಮಹದೇವಪುರ, ದೊಡ್ಡೇಕರೇನಹಳ್ಳಿ ಮತ್ತು ಬಾವಿಕೆರೆ ಹಾಗೂ ಹೊಸಕೋಟೆ ತಾಲ್ಲೂಕಿನ ಕಟ್ಟಿಗೇನಹಳ್ಳಿ.ಮಾಕನಹಳ್ಳಿ, ತಿಂಡ್ಲು, ದಾಸರಹಳ್ಳಿ ಹಂದೇನಹಳ್ಳಿ, ಮಾರಸಂದ್ರ ನಾರಾಯಣ ಕೆರೆ, ಪರಾಮನಹಳ್ಳಿ, ಖಾಜಿ ಹೊಸಳ್ಳಿ ಯನ್ನು ಕಿರು ಜಲಾನಯನ  ಕಾಮಗಾರಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.


ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ  ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಸ್ವಾಮಿ, ತೋಟಗಾರಿಕೆ ಇಲಾಖೆಯ  ಉಪ ನಿರ್ದೇಶಕ ಮಹಾಂತೇಶ್  ಮುರುಗೋಳ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!