ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿಯಿದ್ದಂತೆ: ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಇಲಾಖೆಗೆ ತಾಯಿ ಇದ್ದಂತೆ. ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಬಹಳ ಹತ್ತಿರವಾಗಬೇಕು. ಕೃಷಿ ಇಲಾಖೆಗೆ ವಿಶ್ವವಿದ್ಯಾಲಯಗಳು ಮಾರ್ಗದರ್ಶಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸಚಿವರಾದ ಬಳಿಕ ಮೊದಲ ಕೃಷಿ ವಿಶ್ವವಿದ್ಯಾಲಯಗಳ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.

ಸಭೆಗಳು  ಹಾಗೂ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಸೂಚನೆಗಳು ಬರೀ ಕಡತದಲ್ಲಿ ಕಿರುಪುಸ್ತಕದಲ್ಲಷ್ಟೇ ಉಳಿಯದೇ ಕಾರ್ಯರೂಪಕ್ಕೆ ಬರಬೇಕು. ಟಿಎ ಡಿಎ ಸಮಯವ್ಯರ್ಥಕ್ಕಾಗಿ ಸಭೆಗಳನ್ನು ಮಾಡದೇ ರೈತರಿಗೆ ಅನುಕೂಲ ಕಲ್ಪಿಸಲು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕೃಷಿಯತ್ತ ಹೊಸ ಕಲಿಕೆಗೆ ಅವಕಾಶ ಮಾಡಿಕೊಡುವಲ್ಲಿ ಉಪಯೋಗವಾಗಬೇಕು. ವಿಶ್ವವಿದ್ಯಾಲಯಗಳಲ್ಲಿ ಹೊಸತನ್ನು ಕಲಿಯಲು ಮತ್ತು ಕಲಿಸಲು ರೈತರಿಗೆ ಎಲ್ಲಾ ರೀತಿಯಲ್ಲಿ ಅನುಕೂಲ ಕಲ್ಪಿಸುವಂತಹ ಹೊಸಸಂಶೋಧನೆಗಳು, ತಳಿಗಳನ್ನು ಕಂಡುಹಿಡಿಯಬೇಕು ಎಂದು ಸಭೆಯಲ್ಲಿ ಸಚಿವರು ನಿರ್ದೇಶಿಸಿದರು.

“ಯಾವ ಕಾಯಿಲೆಗೆ ಯಾವ ಮದ್ದು” ಎನ್ನುವುದು ವೈದ್ಯರಿಗೆ ಹೇಗೆ ತಿಳಿದಿರುತ್ತದೆಯೋ ಅದೇ ರೀತಿ ರೈತರ ಬೆಳೆಯ ಸಮಸ್ಯೆ ಗಳಿಗೆ ಕೃಷಿವಿಶ್ವವಿದ್ಯಾಲಯಗಳು ಪರಿಹಾರ ಸೂಚಿಸಬೇಕು. ಪ್ರತಿಯೊಬ್ಬ ಪ್ರೊಫೇಸರ್ ನ್ನು ಫೀಲ್ಡ್ ಗೆ ಕಳುಹಿಸಬೇಕು. ಹಿಂದಿನ ಕಾಲದ ಬೇಸಾಯದ ಪದ್ಧತಿಗೂ ಈಗಿನ ಪದ್ಧತಿಗೂ ಬಹಳಷ್ಟು ವ್ಯತ್ಯಾಸಗಳಿವೆ. ಕಾಲಕ್ಕೆ ತಕ್ಕ ಬೆಳೆ ತಂತ್ರಜ್ಞಾನದ ಬಳಕೆ ಸಂಶೋಧನೆ ಬಗ್ಗೆ ವಿದ್ಯಾರ್ಥಿಗಳಿಗೆ ರೈತರಿಗೆ ನೇರವಾಗಿ ಮಾಹಿತಿ ಹೋಗುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳನ್ನು ಪ್ರೊಫೆಸರ್ ಗಳನ್ನು ಹೊಸಹೊಸ ಸಂಶೋಧನೆ ತಳಿಗಳು ವಿಶ್ವವಿದ್ಯಾಲಯದ ಸಾಧನೆಗಳನ್ನು ಪ್ರಚುರಪಡಿಸಲು ಸಹಕರಿಸುವಂತೆ ನೋಡಿಕೊಳ್ಳಬೇಕು ಎಂದು ಕೃಷಿ ಸಚಿವರು ಸಭೆಯಲ್ಲಿ ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಹೊಸಹೊಸ ತಳಿಗಳ ಸಂಶೋಧನೆ ಹೆಚ್ಚೆಚ್ಚು ನಡೆಯಬೇಕು. ವಿಶ್ವವಿದ್ಯಾಲಯಗಳ ಸಾಧನೆ ಸಂಶೋಧನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚುರಪಡಿಸಬೇಕು. ಸಭೆಗೆ ಯಾವುದೇ ಅಧಿಕಾರಿಗಳಾಗಲೀ ಕುಲಪತಿ ನಿರ್ದೇಶಕರಾಗಲೀ ಯಾರೇ ಆಗಲೀ ಪೂರ್ವಮಾಹಿತಿ ದಾಖಲೆಯಿಲ್ಲದೇ ಬರಬಾರದು. ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ಇಲಾಖೆ ನಡುವೆ  ಎಂದಿಗೂ ಸಮನ್ವಯದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರ ಜೊತೆ ಸಂವಾದ ಮಾಡುವ ಮೂಲಕ ರೈತರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು ಅವುಗಳ ಪರಿಹಾರಕ್ಕೆ ಕ್ರಮವಹಿಸಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದರು.

ಇನ್ನುಮುಂದೆ ಪ್ರತಿತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ನಡೆಸಲಾಗುವುದು. ಮೇಲಿಂದ ಮೇಲೆ ಸಭೆಗಳನ್ನು ನಡೆಸುವುದರಿಂದ ವಿಷಯಗಳ ಮಾಹಿತಿಯ ವಿನಿಮಯ ಕೆಲಸದ ಪ್ರಗತಿ ಬಗ್ಗೆ ಅರಿಯಲು ಹಾಗೂ ರೈತರಿಗಾಗಿ ಇನ್ನಷ್ಟು ದುಡಿಯಲು ಸಾಧ್ಯವಾಗುತ್ತದೆ ಎಂದರು.

ಸಭೆಯಲ್ಲಿ ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಸೇರಿದಂತೆ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!