ಕೇಂದ್ರದಿಂದ ಧಮನಿತ ವರ್ಗಗಳ ಪರ ದ್ವನಿಯ ಧಮನ

ದೊಡ್ಡಬಳ್ಳಾಪುರ : ಆನಂದ್ ತೇಲ್ತುಂಬ್ಡೆ ಮತ್ತು ಸಹಚರರನ್ನು ಸುಳ್ಳು ಕೇಸು ದಾಖಲಿಸಿ ಬಂಧಿಸುವ ಮೂಲಕ ಧಮನಿತ ವರ್ಗಗಳ ಪರ ದ್ವನಿಗಳನ್ನು ಧಮನ ಮಾಡುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್ ಆರೋಪಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾನವ ಹಕ್ಕುಗಳ ಹೋರಾಟಗಾರರಾದ ಆನಂದ್ ತೇಲ್ತುಂಬ್ಡೆ ಮತ್ತು ಅವರ ಸಹಚರರ ಬಂದನ ಖಂಡಿಸಿ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ  ದಸಂಸ ಜಿಲ್ಲಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಏ.14 ರಂದು ಧಮನಿತ ವರ್ಗಗಳು ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡುತ್ತಿದ್ದರೆ ಸರ್ಕಾರ ತಳ ಸಮುದಾಯದ ದನಿ, ನಾಗರೀಕ ಹಕ್ಕುಗಳು ಹಾಗೂ ಶಿಕ್ಷಣ ಹಕ್ಕುಗಳ ಪ್ರತಿಪಾದಕರು,ಅಂಬೇಡ್ಕರ್ ಅವರ ವಂಶಸ್ಥರೂ ಆದ ಆನಂದ್ ತೇಲ್ತುಂಬ್ಡೆ ಅವರನ್ನು ಸುಳ್ಳು ಕೇಸು ದಾಖಲಿಸಿ ಬಂಧಿಸುವ ಮೂಲಕ  ದಲಿತರ ಅಸ್ಮಿತೆಗೆ ಕೊಡಲಿ ಪೆಟ್ಟು ನೀಡಿದೆ ಎಂದ ಅವರು.ಹೋರಾಟಗಾರರನ್ನು ಬಂಧಿಸುವ ಫ್ಯಾಸಿಸ್ಟ್ ದೋರಣೆ ತಾಳುವ ಮೂಲಕ ಸಂವಿಧಾನದ ಆಶಯಗಳಿಗೆ ದಕ್ಕೆ ಉಂಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬಂಧಿತರನ್ನು ಬಿಡುಗಡೆ ಮಾಡದೆ ಇದ್ದರೆ ಸಂಘಟನೆ ವತಿಯಿಂದ ರಾಜ್ಯದಾದ್ಯಂತ ತೀವ್ರವಾದ ಹೋರಾಟವನ್ನು ಹಮ್ಮಿಕೊಳ್ಳುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. 

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಆನಂದ್ ತೇಲ್ತುಂಬ್ಡೆ, ಗೌತಮ್ ನವಲಾಕ್ ಮತ್ತು ಅವರ ಸಹಚರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಹೊರ ರಾಜ್ಯದ ಕೂಲಿ ಕಾರ್ಮಿಕರನ್ನು ಅವರ ಸ್ವಂತ ಸ್ಥಳಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಆಯಾ ರಾಜ್ಯ ಸರ್ಕಾರಗಳು ಈ ಕೂಡಲೇ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಜಗದೀಶ್ ನಾಯ್ಕ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ವಿಭಾಗೀಯ ಸಂಘಟನಾ ಸಂಘಟನಾ ಸಂಚಾಲಕರಾದ ಕೆ.ಆರ್.ಮುನಿಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಸಂಚಾಲಕ ಬಿಸ್ಲಹಳ್ಳಿ ಮೂರ್ತಿ, ಸಂಘಟನಾ ಸಂಚಾಲಕರುಗಳಾದ ರಾಜುಸಣ್ಣಕ್ಕಿ, ಜೋಗಳ್ಳಿ ನಾರಾಯಣಸ್ವಾಮಿ, ಆವತಿ ತಿಮ್ಮರಾಯಪ್ಪ, ವೆಂಕಟೇಶಪ್ಪ ದೇವನಹಳ್ಳಿ ತಾಲ್ಲೂಕು ಸಂಚಾಲಕ ನರಸಪ್ಪ ಹೋಸಕೋಟೆ ತಾಲ್ಲೂಕು ಸಂಚಾಲಕ ಮುತ್ಸಂದ್ರ ಶಂಕರ್. ದೊಡ್ಡಬಳ್ಳಾಪುರದ ಛಲವಾದಿ ಸುರೇಶ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!