ಕೇಂದ್ರದಿಂದ ಧಮನಿತ ವರ್ಗಗಳ ಪರ ದ್ವನಿಯ ಧಮನ

ದೊಡ್ಡಬಳ್ಳಾಪುರ : ಆನಂದ್ ತೇಲ್ತುಂಬ್ಡೆ ಮತ್ತು ಸಹಚರರನ್ನು ಸುಳ್ಳು ಕೇಸು ದಾಖಲಿಸಿ ಬಂಧಿಸುವ ಮೂಲಕ ಧಮನಿತ ವರ್ಗಗಳ ಪರ ದ್ವನಿಗಳನ್ನು ಧಮನ ಮಾಡುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್ ಆರೋಪಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾನವ ಹಕ್ಕುಗಳ ಹೋರಾಟಗಾರರಾದ ಆನಂದ್ ತೇಲ್ತುಂಬ್ಡೆ ಮತ್ತು ಅವರ ಸಹಚರರ ಬಂದನ ಖಂಡಿಸಿ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ  ದಸಂಸ ಜಿಲ್ಲಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಏ.14 ರಂದು ಧಮನಿತ ವರ್ಗಗಳು ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡುತ್ತಿದ್ದರೆ ಸರ್ಕಾರ ತಳ ಸಮುದಾಯದ ದನಿ, ನಾಗರೀಕ ಹಕ್ಕುಗಳು ಹಾಗೂ ಶಿಕ್ಷಣ ಹಕ್ಕುಗಳ ಪ್ರತಿಪಾದಕರು,ಅಂಬೇಡ್ಕರ್ ಅವರ ವಂಶಸ್ಥರೂ ಆದ ಆನಂದ್ ತೇಲ್ತುಂಬ್ಡೆ ಅವರನ್ನು ಸುಳ್ಳು ಕೇಸು ದಾಖಲಿಸಿ ಬಂಧಿಸುವ ಮೂಲಕ  ದಲಿತರ ಅಸ್ಮಿತೆಗೆ ಕೊಡಲಿ ಪೆಟ್ಟು ನೀಡಿದೆ ಎಂದ ಅವರು.ಹೋರಾಟಗಾರರನ್ನು ಬಂಧಿಸುವ ಫ್ಯಾಸಿಸ್ಟ್ ದೋರಣೆ ತಾಳುವ ಮೂಲಕ ಸಂವಿಧಾನದ ಆಶಯಗಳಿಗೆ ದಕ್ಕೆ ಉಂಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬಂಧಿತರನ್ನು ಬಿಡುಗಡೆ ಮಾಡದೆ ಇದ್ದರೆ ಸಂಘಟನೆ ವತಿಯಿಂದ ರಾಜ್ಯದಾದ್ಯಂತ ತೀವ್ರವಾದ ಹೋರಾಟವನ್ನು ಹಮ್ಮಿಕೊಳ್ಳುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. 

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಆನಂದ್ ತೇಲ್ತುಂಬ್ಡೆ, ಗೌತಮ್ ನವಲಾಕ್ ಮತ್ತು ಅವರ ಸಹಚರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಹೊರ ರಾಜ್ಯದ ಕೂಲಿ ಕಾರ್ಮಿಕರನ್ನು ಅವರ ಸ್ವಂತ ಸ್ಥಳಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಆಯಾ ರಾಜ್ಯ ಸರ್ಕಾರಗಳು ಈ ಕೂಡಲೇ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಜಗದೀಶ್ ನಾಯ್ಕ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ವಿಭಾಗೀಯ ಸಂಘಟನಾ ಸಂಘಟನಾ ಸಂಚಾಲಕರಾದ ಕೆ.ಆರ್.ಮುನಿಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಸಂಚಾಲಕ ಬಿಸ್ಲಹಳ್ಳಿ ಮೂರ್ತಿ, ಸಂಘಟನಾ ಸಂಚಾಲಕರುಗಳಾದ ರಾಜುಸಣ್ಣಕ್ಕಿ, ಜೋಗಳ್ಳಿ ನಾರಾಯಣಸ್ವಾಮಿ, ಆವತಿ ತಿಮ್ಮರಾಯಪ್ಪ, ವೆಂಕಟೇಶಪ್ಪ ದೇವನಹಳ್ಳಿ ತಾಲ್ಲೂಕು ಸಂಚಾಲಕ ನರಸಪ್ಪ ಹೋಸಕೋಟೆ ತಾಲ್ಲೂಕು ಸಂಚಾಲಕ ಮುತ್ಸಂದ್ರ ಶಂಕರ್. ದೊಡ್ಡಬಳ್ಳಾಪುರದ ಛಲವಾದಿ ಸುರೇಶ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ ಆಯ್ಕೆ

ಕರ್ನಾಟಕ ಶಕ್ತಿ ಕೇಂದ್ರ ಸಮಿತಿ ಅಸ್ತಿತ್ವಕ್ಕೆ; ಜಿಲ್ಲಾಧ್ಯಕ್ಷರಾಗಿ ಆದಿತ್ಯನಾಗೇಶ್, ತಾಲೂಕು ಅಧ್ಯಕ್ಷರಾಗಿ ಆಂಜನಮೂರ್ತಿ

ಮಾದಿಗ ಜನಾಂಗದ ಏಳಿಗೆಗಾಗಿ, ರಾಜಕೀಯ ಶಕ್ತಿ, ನಾಯಕತ್ವದ ಶಕ್ತಿ, ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕರ್ನಾಟಕ ಶಕ್ತಿ ಕೇಂದ್ರ ಸಮಿತಿಯನ್ನು (Karnataka Shakti Kendra Committee) ರಚಿಸಲಾಗಿದೆ.

[ccc_my_favorite_select_button post_id="121547"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]