ಎಪಿಎಂಸಿ ಖಾಯ್ದೆ ತಿದ್ದುಪಡಿ ರೈತರಿಗೆ ಮಾರಕ

ದೊಡ್ಡಬಳ್ಳಾಪುರ : ಪ್ರಸ್ತುತ ಭಾರತ ಸರ್ಕಾರವು ತಿದ್ದುಪಡಿ ಮಾಡಿ ಜಾರಿಗೆ ತರಲು ಹೊರಟಿರುವ ಎಪಿಎಂಸಿ ಕಾಯ್ದೆ ಉದ್ಯಮಿಗಳ ಪರವಾಗಿದ್ದು,  ರೈತರ ಪರವಾಗಿದ್ದ ಕೃಷಿ ಮಾರುಕಟ್ಟೆಯನ್ನು ಬಂಡವಾಳ ಶಾಹಿಗಳ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅದ್ಯಕ್ಷ ಪ್ರಸನ್ನ ಆರೋಪಿಸಿದರು.

ಅವರು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

1926 ರಲ್ಲಿ ರಾಯಲ್ ಅಗ್ರಿಕಲ್ಚರ್ ಕಮಿಷನ್ ವರದಿಯ ಆಧಾರದಲ್ಲಿ ಕೃಷಿ ಮಾರುಕಟ್ಟೆ ( ಎಪಿಎಂಸಿ ) ಕಾಯ್ದೆಯನ್ನು ಜಾರಿಗೆ ತಂದಿತ್ತು ನಂತರದಲ್ಲಿ 1955 ರಲ್ಲಿ ಅದಕ್ಕೆ ತಿದ್ದುಪಡಿ ತಂದು ಕೃಷಿ ಉತ್ಪನ್ನ ಮಾರುಕಟ್ಟೆ ರೈತರ ಹಿಡಿತದಲ್ಲಿ ಇರುವಂತೆ ಮತ್ತು 11 ಜನ ಸದಸ್ಯರನ್ನು ಒಳಗೊಂಡು ಒಬ್ಬರು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಳ್ಳುವ ರೈತಪರ ನೀತಿಯನ್ನು ಜಾರಿಗೆ ತರಲಾಯಿತು, ಈ ಕಾಯ್ದೆಯಲ್ಲಿ ಎಲ್ಲಾ ಬೆಳೆಗಳಿಗೂ ಮಾರುಕಟ್ಟೆಯನ್ನು ಕಲ್ಪಿಸಲಾಗಿತ್ತು, ರೈತನು ತನ್ನ ಉತ್ಪನ್ನಗಳನ್ನು ಮಾರುಕಟ್ಟೆಗೆ ತಂದಾಗ ತೂಕ ಮತ್ತು ಅಳತೆ ಎಲ್ಲವನ್ನೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೋಡಿಕೊಂಡು ರೈತನಿಗೆ ಉತ್ತಮ ಬೆಲೆ ಕೊಡಿಸುವ ಕೆಲಸ ಮಾಡುತ್ತದೆ, ಇಂದು ಆ ಎಲ್ಲಾ ರೈತಪರ ನೀತಿಗಳನ್ನು ಗಾಳಿಗೆ ತೂರಿ ಸಂವಿಧಾನ ವಿರೋದಿಯಾದ ಉದ್ಯಮಿಗಳು ಮತ್ತು ಬಂಡವಾಳ ಶಾಹಿಗಳಿಗೆ ಅನುಕೂಲವಾಗುವಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರದ ಹಿಡಿತದಲ್ಲಿರುವ ಮಾರುಕಟ್ಟೆ ವ್ಯವಸ್ಥೆಯನ್ನು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಿ ರಾಜ್ಯಪಾಲರ ಮೂಲಕ ಸುಗ್ರೀವಾಜ್ಙೆ ಜಾರಿ ಮಾಡುವ ಹುನ್ನಾರದಲ್ಲಿದೆ, ಒಂದು ಶತಮಾನ ಹಳೆಯದಾದ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಸುಧಾರಿಸಿ ದೇಶ ಇಂದು ಅಂತರಾಷ್ಟ್ರೀಯ ಮಾರುಕಟ್ಟೆ ಒದಗಿಸಿ ಕೃಷಿಕನಿಗೆ ಸ್ಪರ್ಧಾತ್ಮಕವಾದ ಬೆಲೆ ಕೊಡಿಸಲು ಸರ್ಕಾರಗಳು ಯೋಜನೆಯನ್ನು ರೂಪಿಸಬೇಕಿತ್ತು ಬದಲಿಗೆ ಅಂತ ರಾಷ್ಟ್ರೀಯ ವ್ಯಾಪಾರಿಗಳು ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಒದಗಿಸಿ ಕೊಡಲು ತುದಿಗಾಲಲ್ಲಿ ನಿಂತಿದೆ, ಈ ಕಾಯ್ದೆಯಿಂದ ಯಾವುದೇ ಖರೀದಿದಾರರು ರಾಜ್ಯದಲ್ಲಿ ಎಲ್ಲಿ ಬೇಕಾದರೂ ಖರೀದಿ ಮಾಡಬಹುದು ಅವನಿಗೆ ಕೃಷಿ ಮಾರುಕಟ್ಟೆ ನೀತಿಗಳು ಅನ್ವಯ ಆಗುವುದಿಲ್ಲ, ಅವರು ಖಾಸಗಿ ಮಾರುಕಟ್ಟೆಗಳನ್ನು ನಿರ್ಮಿಸಿಕೊಳ್ಳಬಹುದಾಗಿದೆ, ಅವರು ಯಾವುದೇ ಸರ್ಕಾರಗಳಿಗೆ ತೆರಿಗೆ ತುಂಬಬೇಕಿಲ್ಲ ರೈತರ ಉತ್ಪಾದನೆಗಳಿಗೆ ಕನಿಷ್ಟ ಬೆಲೆ ನಿಗದಿಯಾಗುವುದು ಎಪಿಎಂಸಿ ಮಾರುಕಟ್ಟೆಯ ಮೂಲಕ. ಒಂದು ವೇಳೆ ಖಾಸಗಿ ಮಾರುಕಟ್ಟೆ ಪ್ರಾರಂಭಗೊಂಡರೆ ಸರ್ಕಾರದ ಕೃಷಿ ಉತ್ಪನ್ನ ಮಾರುಕಟ್ಟೆಗಳು ಸಂಪೂರ್ಣ ನಾಶವಾಗುತ್ತವೆ ಎಂದು ಆತಂಕ ವ್ಯಕ್ತಪಡಿಸಿದ ಅವರು ರೈತರಿಗೆ ಮರಣ ಶಾಸನವಾದ ಈ ಕಾಯ್ದೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ ಜಗದೀಶ್ ನಾಯ್ಕ್ ಅವರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ವಕೀಲರಾದ ಸತೀಶ್, ಹಸಿರು ಸೇನೆಯ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಕಾಡನೂರು ಹನುಮೆಗೌಡ,ವಸಂತ್, ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!