ಚಾಲಕರಿಗೆ ಹಗಲು ಕನಸಾಯ್ತೆ 5 ಸಾವಿರ ನೆರವು..?

ದೊಡ್ಡಬಳ್ಳಾಪುರ : ಕರೊನಾ ಸೋಂಕಿನ ಕಾರಣ ಘೋಷಿಸಲಾದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರಕಾರ 5 ಸಾವಿರ ರೂ. ನೆರವು ಘೋಷಣೆ ಸಂಬಂಧ ಮೆ.8 ಆಧಿಕೃತ ಆದೇಶ ನೀಡಿ ವಾರ ಕಳೆದಿದೆ.ಆದರೆ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲವೆಂದು ಚಾಲಕರು ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಲಾಕ್ ಡೌನ್ ಪರಿಣಾಮ ಸಂಕಷ್ಟದಲ್ಲಿರುವ ಆಟೋ/ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೆ.8ರಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಇದರ ಅನ್ವಯ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5000 ಪರಿಹಾರ ಧನವನ್ನು ಸರ್ಕಾರ ನೀಡುತ್ತದೆ ಎನ್ನಲಾಗಿದೆ.

ಆಟೋ ಮತ್ತು ಟ್ಯಾಕ್ಸಿ ಚಾಲಕರು ಸರ್ಕಾರದ ಈ ನೆರವನ್ನು ಪಡೆಯಲು ‘ಸೇವಾ ಸಿಂಧು’ ಪೋರ್ಟಲ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರ ಘೋಷಿಸಿ,ವಾರ ಕಳೆದರು ಅರ್ಜಿ ಸ್ವೀಕಾರ ವ್ಯವಸ್ಥೆಗಾಗಿ ಸಾಫ್ಟ್ವೇರ್ ಸಿದ್ಧವಾಗದೆ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗದೆ ಉಳಿದಿದೆ.

ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಸಾಫ್ಟ್ ವೇರ್ ಸಿದ್ದಪಡಿಸದೆ,ಏಕಾಏಕಿ ಘೋಷಣೆ ಮಾಡಿದ್ದು,ಚಾಲಕರಲ್ಲಿ ಬೇಸರಕ್ಕೆ ಕಾರಣವಾದರೆ,ಸೇವಾ ಸಿಂಧು ಮುಖ್ಯಸ್ಥರು ಹಾಗೂ ನಿರ್ವಹಣೆಗಾರರಲ್ಲನ್ನ  ಆತಂಕಕ್ಕೆ ದೂಡಿದೆ.

” ಸಂಕಷ್ಟದಲ್ಲಿ ಚಾಲಕರೊಂದಿಗೆ ಸರ್ಕಾರದ ಆಟ “

ಸೂಕ್ತ ವ್ಯವಸ್ಥೆ ಮಾಡದೆ,ಪರಿಹಾರಕ್ಕೆ ಅರ್ಜಿ ಸಲ್ಲಿಸುವಂತೆ ಘೋಷಿಸಿ ಸರ್ಕಾರ ಚಾಲಕರ ಜೊತೆ ಆಟವಾಡುತ್ತಿದೆ.ಪರಿಹಾರಕ್ಕಾಗಿ ಕೆಲಸ ಕಾರ್ಯ ಬದಿಗೊತ್ತಿದೆ ಪದೆ ಪದೆ ಅರ್ಜಿ ಸಲ್ಲಿಸಲು ತೆರಳುವಂತಾಗಿದೆ ಎಂದು ಚಾಲಕ ಎ.ಸಿ.ಹರೀಶ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

” ಚಾಲಕರ ಆಕ್ರೋಶ – ಸೇವಾಸಿಂಧು ಮುಖ್ಯಸ್ಥರ ಅಳಲು “

ಸರ್ಕಾರದ ಘೋಷಣೆಯಂತೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿಲ್ಲ,ಇದರಿಂದಾಗಿ ಚಾಲಕರ ಆಕ್ರೋಶಕ್ಕೆ ಒಳಗಾಗಿದ್ದೇವೆ,ಸಾಫ್ಟ್ ವೇರ್ ಸಿದ್ದತೆ ನಡೆದಿದ್ದು ಮಾಹಿತಿ ನೀಡಲಾಗುವುದೆಂದು ಹೆಸರೇಳಲು ಇಚ್ಚಿಸದ ಸೇವಾಸಿಂಧು ಮುಖ್ಯಸ್ಥರು ಹರಿತಲೇಖನಿಯೊಂದಿಗೆ ಅಳಲು ತೋಡಿಕೊಂಡಿದ್ದಾರೆ.

ಅರ್ಜಿ ಸಲ್ಲಿಸಲು ನಿಯಮಗಳು

A. ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.

B. ಫಲಾನುಭವಿಗಳು ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಾಗಿದ್ದು, ದಿನಾಂಕ: 01-03-2020 ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್ ನಲ್ಲಿ ನಮೂದಿಸಬೇಕಾಗಿರುತ್ತದೆ.

C. ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕಾಗಿರುತ್ತದೆ.

D. ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕಿನ ಐಎಫ್ಎಸ್ಸಿ ಕೋಡ್, ಎಂಐಸಿಆರ್ ಕೋಡ್ಗಳ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕಾಗಿರುತ್ತದೆ.

E. ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕಾಗಿರುತ್ತದೆ. ವಾಹನ್-4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು.

F. ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು.

G. ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು.

H. ಈ ಯೋಜನೆಯನ್ನು ಜಾರಿಗೊಳಿಸಲು ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ‘ಸೇವಾಸಿಂಧು’ವಿನ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಬೇಕಾಗಿರುತ್ತದೆ. ಈ ಬಗ್ಗೆ ‘ಸೇವಾಸಿಂಧು’ ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ.

I. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ ಡಿಬಿಟಿ ಮಾಡಬೇಕು ಅಥವಾ ಆನ್ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು.

J. ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು.

ರಾಜಕೀಯ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್

ಪ್ರಧಾನಿ ನರೇಂದ್ರ ಮೋದಿ (Modi) ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ (Hardeep Puri) ಅವರನ್ನು ತಕ್ಷಣವೇ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಬಿಜೆಪಿಯ ಹಿರಿಯ

[ccc_my_favorite_select_button post_id="120230"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!