ಲಾಕ್‌ಡೌನ್ : ತುರ್ತು ಪರಿಹಾರಕ್ಕಾಗಿ ಮನವಿ ಸಲ್ಲಿಸಲು ತೆರಳುತ್ತಿದ್ದ ನೇಕಾರರ ತಡೆದ ಪೊಲೀಸರು

ದೊಡ್ಡಬಳ್ಳಾಪುರ : ಕರೊನಾ ಲಾಕ್ಡೌನ್ ಹಿನ್ನಲೆಯಲ್ಲಿ ನೇಕಾರರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಈ ಕೂಡಲೇ ನೇಕಾರರ ಸಂಕಷ್ಟಗಳನ್ನು ಬಗೆಹರಿಸಲು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ನೇಕಾರರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲು ತೆರಳುತ್ತಿದ್ದ ನೂರಾರು ನೇಕಾರರನ್ನು ತಾಲೂಕಿನ ರಘನಾಥಪುರದ ಬಳಿ ಪೊಲೀಸರು ತಡೆದ ಪ್ರಸಂಗ ನಡೆಯಿತು.

ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೀರಸಂದ್ರದ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲು ವಿವಿಧ ವಾಹನಗಳಲ್ಲಿ ತೆರಳುತ್ತಿದ್ದ ನೂರಾರು ನೇಕಾರರು ಹಾಗೂ ಮುಖಂಡರನ್ನು ರಘನಾಥಪುರದ ಬಳಿ ತಡೆದು ಕೊರೊನಾ ಲಾಕ್ಡೌನ್ ವಿಸ್ತರಣೆ ಇರುವುದರಿಂದ ಇಷ್ಟೊಂದು ಮಂದಿಯನ್ನು ತೆರಳಲು ಬಿಡುವುದಿಲ್ಲ ಎಂದು ಪೊಲೀಸರು ತಡೆದರು.

ಇದಕ್ಕೆ ಪ್ರತಿಕ್ರಿಯಿಸಿದ ನೇಕಾರ ಮುಖಂಡರು, ನಾವು ಮನವಿ ಸಲ್ಲಿಸುವ ಕುರಿತಂತೆ ಸಭೆ ಸೇರಿದ್ದ ವೇಳೆ ಮೇ.17ಕ್ಕೆ ಲಾಕ್ಡೌನ್ ಅವಧಿ ಮುಗಿಯುವುದಾಗಿ ಘೋಷಣೆಯಾಗಿತ್ತು.ಆದ್ದರಿಂದ ಇಂದು ಮನವಿ ಸಲ್ಲಿಸಲು ತೆರಳುತ್ತಿದ್ದೇವೆ. ನಿಯಮ ಮೀರಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ ನೂರಾರು ನೇಕಾರರು ರಸ್ತೆಯಲ್ಲಿ ಸೇರಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.ನಂತರ ಜಿಲ್ಲಾಧಿಕಾರಿಗಳೇ ಇಲ್ಲಿಗೆ ಬಂದು ನಮ್ಮ ಮನವಿ ಸ್ವೀಕರಿಸಲಿ ಎಂದು ನೇಕಾರ ಮುಖಂಡರು ಒತ್ತಾಯಿಸಿದಾಗ ಜಿಲ್ಲಾಧಿಕಾರಿಗಳ ಬದಲಿಗೆ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.

ಮನವಿ ಸಲ್ಲಿಸಿದ ನೇಕಾರ ಮುಖಂಡ ಪಿ.ಎ.ವೆಂಕಟೇಶ್ ಮಾತನಾಡಿ,ಕರೊನಾ ಪರಿಣಾಮ ನೇಕಾರಿಕೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ, ರೇಷ್ಮೆ ಬೆಲೆ ಹೆಚ್ಚಳ, ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆ ಇಲ್ಲದಿರುವುದು ಮೊದಲಾದ ಸಮಸ್ಯೆಗಳಲ್ಲಿಯೇ ನೇಕಾರರು ಬದುಕುತ್ತಿದ್ದು,ಲಾಕ್ಡೌನ್ ನೇಕಾರರು ಆರ್ಥಿಕವಾಗಿ ದಿವಾಳಿಯಾಗುತ್ತಿದ್ದಾರೆ.ನೇಕಾರರಿಗೆ ನೆರವು ನೀಡಬೇಕೆನ್ನುವ ಮನವಿಯನ್ನು ಮುಖ್ಯಮಂತ್ರಿಗಳಾದಿಯಾಗಿ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಆದರೆ ನೇಕಾರರಿಗೆ ತುರ್ತಾಗಿ ಯಾವುದೇ ನೆರವು ದೊರೆತಿಲ್ಲ. ಈ ದಿಸೆಯಲ್ಲಿ  ನೇಕಾರರ ಕುಟುಂಬಕ್ಕೆ ಮಾಸಿಕ 7.5 ಸಾವಿರ ಧನ ಸಹಾಯ  ನೀಡಬೇಕು. ದಕ್ಷಿಣ ಭಾರತದ ರಾಜ್ಯಗಳಾದ ಆಂದ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ  ನೇಕಾರರಿಗೆ ತಿಂಗಳಿಗೆ 2 ಸಾವಿರ ರೂ ನೀಡುತ್ತಿದ್ದು, ಅದೇ ರೀತಿ ಕರ್ನಾಟಕದ ಪವರ್ಲೂಂ ನೇಕಾರರಿಗೂ ಸಿಗುವಂತಾಗಬೇಕು. ಉದ್ಯಮ ಚೇತರಿಸಿಕೊಳ್ಳುವ ತನಕ ವಿದ್ಯುತ್ ಬಿಲ್ (ಗೃಹ ಬಳಕೆಯೂ ಸೇರಿ) ಸಂಪೂರ್ಣ ಮನ್ನಾ ಮಾಡಬೇಕು.ನೇಕಾರರ ಬಟ್ಟೆಗಳನ್ನು ಖರೀದಿಸಲು ಫ್ಯಾಬ್ರಿಕ್ ಬ್ಯಾಂಕ್ ತೆರೆಯಬೇಕು.. ನೇಕಾರರನ್ನು ಅಸಂಘಟಿತ ಕಾರ್ಮಿಕರನ್ನಾಗಿ ಪರಿಗಣಿಸಬೇಕು. ನೇಕಾರರಿಗೆ ಉಚಿತ ಆರೋಗ್ಯ ಸೌಲಭ್ಯ, ಮಗ್ಗಗಳಿಗೆ ಸಹಾಯಧನ, ನೇಕಾರರ ಮಕ್ಕಳಿಗೆ ಶಿಕ್ಷಣ ಶುಲ್ಕ ರಿಯಾಯಿತಿ ಸೌಲಭ್ಯ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ನೇಕಾರರ ಸಂಕಷ್ಟಗಳನ್ನು ಮನವರಿಕೆಯಾಗಿದ್ದು,ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿ ನಂತರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಬಂಧಪಟ್ಟ ಸಚಿವರ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರಬಹುದಾಗಿದೆ. ವಲಸೆ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿದಂತೆ ನೇಕಾರರಿಗೆ ಕಿಟ್ ವಿತರಣೆ ಮಾಡುವ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಟಿ.ಎಸ್.ಶಿವರಾಜ್,ನೇಕಾರರ ಹಿತರಕ್ಷಣಾ ಸಮಿತಿಯ ಕೆ.ಮಲ್ಲೇಶ್,ಎಸ್.ಅಶೋಕ್,ಎಂ.ಮುನಿರಾಜು,ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ,ಜಿಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ,ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟಿ.ಎನ್.ಪ್ರಭುದೇವ್, ಆರ್.ಕೆಂಪರಾಜ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]