ಲಾಕ್‌ಡೌನ್ : ತುರ್ತು ಪರಿಹಾರಕ್ಕಾಗಿ ಮನವಿ ಸಲ್ಲಿಸಲು ತೆರಳುತ್ತಿದ್ದ ನೇಕಾರರ ತಡೆದ ಪೊಲೀಸರು

ದೊಡ್ಡಬಳ್ಳಾಪುರ : ಕರೊನಾ ಲಾಕ್ಡೌನ್ ಹಿನ್ನಲೆಯಲ್ಲಿ ನೇಕಾರರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಈ ಕೂಡಲೇ ನೇಕಾರರ ಸಂಕಷ್ಟಗಳನ್ನು ಬಗೆಹರಿಸಲು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ನೇಕಾರರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲು ತೆರಳುತ್ತಿದ್ದ ನೂರಾರು ನೇಕಾರರನ್ನು ತಾಲೂಕಿನ ರಘನಾಥಪುರದ ಬಳಿ ಪೊಲೀಸರು ತಡೆದ ಪ್ರಸಂಗ ನಡೆಯಿತು.

ಸೋಮವಾರ ಬೆಳಿಗ್ಗೆ 11 ಗಂಟೆಗೆ ಬೀರಸಂದ್ರದ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲು ವಿವಿಧ ವಾಹನಗಳಲ್ಲಿ ತೆರಳುತ್ತಿದ್ದ ನೂರಾರು ನೇಕಾರರು ಹಾಗೂ ಮುಖಂಡರನ್ನು ರಘನಾಥಪುರದ ಬಳಿ ತಡೆದು ಕೊರೊನಾ ಲಾಕ್ಡೌನ್ ವಿಸ್ತರಣೆ ಇರುವುದರಿಂದ ಇಷ್ಟೊಂದು ಮಂದಿಯನ್ನು ತೆರಳಲು ಬಿಡುವುದಿಲ್ಲ ಎಂದು ಪೊಲೀಸರು ತಡೆದರು.

ಇದಕ್ಕೆ ಪ್ರತಿಕ್ರಿಯಿಸಿದ ನೇಕಾರ ಮುಖಂಡರು, ನಾವು ಮನವಿ ಸಲ್ಲಿಸುವ ಕುರಿತಂತೆ ಸಭೆ ಸೇರಿದ್ದ ವೇಳೆ ಮೇ.17ಕ್ಕೆ ಲಾಕ್ಡೌನ್ ಅವಧಿ ಮುಗಿಯುವುದಾಗಿ ಘೋಷಣೆಯಾಗಿತ್ತು.ಆದ್ದರಿಂದ ಇಂದು ಮನವಿ ಸಲ್ಲಿಸಲು ತೆರಳುತ್ತಿದ್ದೇವೆ. ನಿಯಮ ಮೀರಿಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ ನೂರಾರು ನೇಕಾರರು ರಸ್ತೆಯಲ್ಲಿ ಸೇರಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.ನಂತರ ಜಿಲ್ಲಾಧಿಕಾರಿಗಳೇ ಇಲ್ಲಿಗೆ ಬಂದು ನಮ್ಮ ಮನವಿ ಸ್ವೀಕರಿಸಲಿ ಎಂದು ನೇಕಾರ ಮುಖಂಡರು ಒತ್ತಾಯಿಸಿದಾಗ ಜಿಲ್ಲಾಧಿಕಾರಿಗಳ ಬದಲಿಗೆ ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು.

ಮನವಿ ಸಲ್ಲಿಸಿದ ನೇಕಾರ ಮುಖಂಡ ಪಿ.ಎ.ವೆಂಕಟೇಶ್ ಮಾತನಾಡಿ,ಕರೊನಾ ಪರಿಣಾಮ ನೇಕಾರಿಕೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆ, ರೇಷ್ಮೆ ಬೆಲೆ ಹೆಚ್ಚಳ, ನೇಯ್ದ ಬಟ್ಟೆಗಳಿಗೆ ಮಾರುಕಟ್ಟೆ ಇಲ್ಲದಿರುವುದು ಮೊದಲಾದ ಸಮಸ್ಯೆಗಳಲ್ಲಿಯೇ ನೇಕಾರರು ಬದುಕುತ್ತಿದ್ದು,ಲಾಕ್ಡೌನ್ ನೇಕಾರರು ಆರ್ಥಿಕವಾಗಿ ದಿವಾಳಿಯಾಗುತ್ತಿದ್ದಾರೆ.ನೇಕಾರರಿಗೆ ನೆರವು ನೀಡಬೇಕೆನ್ನುವ ಮನವಿಯನ್ನು ಮುಖ್ಯಮಂತ್ರಿಗಳಾದಿಯಾಗಿ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಆದರೆ ನೇಕಾರರಿಗೆ ತುರ್ತಾಗಿ ಯಾವುದೇ ನೆರವು ದೊರೆತಿಲ್ಲ. ಈ ದಿಸೆಯಲ್ಲಿ  ನೇಕಾರರ ಕುಟುಂಬಕ್ಕೆ ಮಾಸಿಕ 7.5 ಸಾವಿರ ಧನ ಸಹಾಯ  ನೀಡಬೇಕು. ದಕ್ಷಿಣ ಭಾರತದ ರಾಜ್ಯಗಳಾದ ಆಂದ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ  ನೇಕಾರರಿಗೆ ತಿಂಗಳಿಗೆ 2 ಸಾವಿರ ರೂ ನೀಡುತ್ತಿದ್ದು, ಅದೇ ರೀತಿ ಕರ್ನಾಟಕದ ಪವರ್ಲೂಂ ನೇಕಾರರಿಗೂ ಸಿಗುವಂತಾಗಬೇಕು. ಉದ್ಯಮ ಚೇತರಿಸಿಕೊಳ್ಳುವ ತನಕ ವಿದ್ಯುತ್ ಬಿಲ್ (ಗೃಹ ಬಳಕೆಯೂ ಸೇರಿ) ಸಂಪೂರ್ಣ ಮನ್ನಾ ಮಾಡಬೇಕು.ನೇಕಾರರ ಬಟ್ಟೆಗಳನ್ನು ಖರೀದಿಸಲು ಫ್ಯಾಬ್ರಿಕ್ ಬ್ಯಾಂಕ್ ತೆರೆಯಬೇಕು.. ನೇಕಾರರನ್ನು ಅಸಂಘಟಿತ ಕಾರ್ಮಿಕರನ್ನಾಗಿ ಪರಿಗಣಿಸಬೇಕು. ನೇಕಾರರಿಗೆ ಉಚಿತ ಆರೋಗ್ಯ ಸೌಲಭ್ಯ, ಮಗ್ಗಗಳಿಗೆ ಸಹಾಯಧನ, ನೇಕಾರರ ಮಕ್ಕಳಿಗೆ ಶಿಕ್ಷಣ ಶುಲ್ಕ ರಿಯಾಯಿತಿ ಸೌಲಭ್ಯ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ನೇಕಾರರ ಸಂಕಷ್ಟಗಳನ್ನು ಮನವರಿಕೆಯಾಗಿದ್ದು,ಮುಂದೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿ ನಂತರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಬಂಧಪಟ್ಟ ಸಚಿವರ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರಬಹುದಾಗಿದೆ. ವಲಸೆ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿದಂತೆ ನೇಕಾರರಿಗೆ ಕಿಟ್ ವಿತರಣೆ ಮಾಡುವ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಟಿ.ಎಸ್.ಶಿವರಾಜ್,ನೇಕಾರರ ಹಿತರಕ್ಷಣಾ ಸಮಿತಿಯ ಕೆ.ಮಲ್ಲೇಶ್,ಎಸ್.ಅಶೋಕ್,ಎಂ.ಮುನಿರಾಜು,ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ,ಜಿಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ,ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಕಾರ್ಯದರ್ಶಿ ಡಿ.ಪಿ.ಆಂಜನೇಯ, ಟಿ.ಎನ್.ಪ್ರಭುದೇವ್, ಆರ್.ಕೆಂಪರಾಜ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!