ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವೈರಾಣು ನಿಯಂತ್ರಣಕ್ಕೆ ಜನರು ಮುಂದಾಗಬೇಕು : ಆರ್.ಅಶೋಕ್

ದೊಡ್ಡಬಳ್ಳಾಪುರ : ಮಾರಕವಾದ ವೈರಾಣು ಕೋವಿಡ್-19 ನೊಂದಿಗೆ ಜೀವನ ಸರಿದೂಗಿಸಿಕೊಂಡು ಮತ್ತೆ ಬದುಕನ್ನು ಕಟ್ಟಿಕೊಳ್ಳುವ ಅನಿವಾರ್ಯತೆ ಎದುರಾಗಿರುವ ಪರಿಸ್ಥಿತಿಯಲ್ಲಿ, ಜನರು ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವ ಮೂಲಕ ವೈರಾಣು ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ತಿಳಿಸಿದರು.

ದೇವನಹಳ್ಳಿ ತಾಲ್ಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ವೈರಸ್ ನಿಯಂತ್ರಣ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಕೋವಿಡ್-19 ವೈರಾಣು ಹರಡುವಿಕೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ ದೇಶ ಹಾಗೂ ರಾಜ್ಯಕ್ಕೆ ಆರ್ಥಿಕವಾಗಿ ಸಾಕಷ್ಟು ಸಮಸ್ಯೆ ಎದುರಾಗಿದೆ. ಹೀಗೆ ಪರಿಸ್ಥಿತಿ ಮುಂದುವರಿದರೆ, ಜನರಿಗೆ ಬದುಕು ಕಟ್ಟಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಅರಿತು ಸರ್ಕಾರ ‌ಭಾನುವಾರ ಸಂಪೂರ್ಣ ಲಾಕ್ ಡೌನ್ ಹಾಗೂ ಕರ್ಫ್ಯೂ ಸಮಯ ಮುಂದುವರಿಕೆ ಹೊರತುಪಡಿಸಿ ಎಲ್ಲವನ್ನು ಸಡಿಲಿಸಿದೆ ಎಂದು ಹೇಳಿದರು.

ಬಹಳಷ್ಟು ಖಾಸಗಿ ಕ್ಲಿನಿಕ್ ಹಾಗೂ ಆಸ್ಪತ್ರೆಗಳು ಮುಚ್ಚುವ ಮೂಲಕ ಆರೋಗ್ಯ ಸೇವೆಯನ್ನು ಸ್ಥಗಿತಗೊಳಿಸಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಎಲ್ಲಾ ಖಾಸಗಿ ವೈದ್ಯರು ತಕ್ಷಣದಿಂದಲೇ ತಮ್ಮ ಸೇವೆಯನ್ನು ಮತ್ತೆ ಆರಂಭಿಸಬೇಕು. ಯಾವುದೇ ವೈದ್ಯಕೀಯ ತುರ್ತು ಅಥವಾ ಅಪಘಾತಗೊಳಗಾದ ವ್ಯಕ್ತಿಗಳು ಆರೋಗ್ಯ ಸೇವೆಗೆ ಬಂದಾಗ ಕೋವಿಡ್-19 ತಪಾಸಣೆಗೆ ಶಿಫಾರಸ್ಸು ಮಾಡದೆ, ಅಗತ್ಯ ಸೇವೆಯನ್ನು ನೀಡಬೇಕು ಎಂದು ತಿಳಿಸಿದರು.

ಸರ್ಕಾರಿ ಹಾಗೂ ಖಾಸಗಿ ಬಸ್, ಟ್ಯಾಕ್ಸಿ, ಆಟೋ ಹಾಗೂ ಅಂತರ ಜಿಲ್ಲಾ ರೈಲ್ವೆ ಸೇವೆಯನ್ನು ಆರಂಭಿಸಲು ಅನುಮತಿ ನೀಡಲಾಗಿದ್ದು, ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಹಾಗೂ ಸೇವೆಯ ವೇಳೆ ಸ್ಯಾನಿಟೈಸರ್ ಇಟ್ಟುಕೊಳ್ಳುವುದು ಕಡ್ಡಾಯ ಎಂದು ತಿಳಿಸಿದ ಸಚಿವರು, ಪ್ರಯಾಣಿಕರು ಪ್ರಯಾಣಿಸುವಾಗ ಮಾಸ್ಕ್ ಧರಿಸದಿದ್ದರೆ, ಪೊಲೀಸ್ ಇಲಾಖೆ ಅಂತಹ ಪ್ರಯಾಣಿಕರಿಂದ ದಂಡವನ್ನು ವಸೂಲಿ ಮಾಡಬೇಕು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಹಲವು ಜಿಲ್ಲೆಗಳೊಂದಿಗೆ ಗಡಿಯನ್ನು ಹಂಚಿಕೊಳ್ಳುವುದರ ಜೊತೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಿದೆ. ಜಿಲ್ಲೆಯಲ್ಲಿರುವ ಕಾರ್ಯದೊತ್ತಡದ ಮಧ್ಯೆ, ಅಧಿಕಾರಿಗಳು ಹಗಲಿರುಳು ದುಡಿದ ಪರಿಣಾಮ ಕೋವಿಡ್-19 ವೈರಾಣು ಹರಡುವಿಕೆಯನ್ನು ನಿಯಂತ್ರಣದಲ್ಲಿ ಇಡುವುದರ ಮೂಲಕ ಬೇರೆ ಜಿಲ್ಲೆಯವರಿಗೆ ಮಾದರಿಯಾಗಿರುವುದು ಶ್ಲಾಘನೀಯ ಎಂದು ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ಕೋವಿಡ್-19 ವೈರಸ್ ನಿಯಂತ್ರಣ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಕುರಿತ ಸಂಬಂಧಪಟ್ಟ ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ಶೀಘ್ರವಾಗಿ ಆಯೋಜಿಸಿ, ಆರ್ಥಿಕ ಚಟುವಟಿಕೆಯನ್ನು ಮತ್ತೆ ಪ್ರರಂಭಿಸಲು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆಯಾಗದಂತೆ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ತೇಜಸ್ವಿನಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ,  ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಜಿತ್.ವಿ.ಜೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಉಪ ವಿಭಾಗಾಧಿಕಾರಿ ಅರಳ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]