ನಾ ಕಂಡ ದೇವಾಲಯಗಳು – ರವಿಶಂಕರ್ ಕೂಡಲಿ

ದೇವಾಲಯಗಳ ಸರಣಿ ಆರಂಭ ಮಾಡುವಾಗ,ಯಾವ ದೇವಸ್ಥಾನದ ಮೂಲಕ ಆರಂಭಿಸಬೇಕು ಎಂದು ಆಲೋಚಿಸಿದಾಗ,ತಕ್ಷಣ ಮನಸ್ಸಿಗೆ ಮೂಡಿ ಬಂದದ್ದು ಯಾವುದೇ ಕಾರ್ಯ ನಿರ್ವಿಘ್ನವಾಗಿ ಮುಂದುವರೆಯಲು ಶ್ರೀ ಗಣೇಶನ ಮಂದಿರ ಪರಿಚಯದಿಂದ ಆರಂಭಿಸಿದರೆ ಸೂಕ್ತವೆನಿಸಿತು..

ಪ್ರಥಮಂ ವಿನಾಯಕಂ .. ಸರಿ , ಆದರೆ ದೇಶದ ಉದ್ದಗಲಕ್ಕೂ ಪ್ರಸಿದ್ಧವಾದ ನೂರಾರು ವಿನಾಯಕ ಮಂದಿರಗಳಿವೆ.. ನಮ್ಮ ರಾಜ್ಯದಲ್ಲೇ ಬಹಳ ಇದೆ.. ಯಾವ ಮಂದಿರ ಆಯ್ದು ಕೊಳ್ಳಲಿ ಎಂದು ಅನಿಸಿದಾಗ ಮೊಟ್ಟಮೊದಲು ಮೂಡಿಬಂದಿದ್ದೇ

#ಗುಡ್ಡಟ್ಟು ಮಹಾಹಣಪತಿ ದೇವಾಲಯ..

ಎಷ್ಟೊಂದು ದೇವಸ್ಥಾನಗಳಿರುವಾಗ ಇದೇ ಯಾಕೆ ಮನಸಿಗೆ ಬಂತು..

 ಕಾರಣ ಸ್ಪಷ್ಟ..

ಬಹುತೇಕರಿಗೆ ಇದರ ಪರಿಚಯವಿಲ್ಲ..

#ಗುಡ್ಡಟ್ಟು ಗಣಪತಿ ದೇವಾಲಯಯ ಇರುವುದು ಉಡುಪಿ ಜಿಲ್ಲೆಯ ಕುಂದಾಪುರದ ಬಳಿ.

ದೇಶದಾದ್ಯಂತ ಇರುವ ಗಣಪತಿ ದೇವಾಲಯದಲ್ಲಿ ಎಲ್ಲೂ ಕಾಣದ ವಿಶೇಷ ಸೇವೆಯೊಂದು , ಈ ದೇವಸ್ಥಾನದಲ್ಲಿ ನಡೆಯುತ್ತದೆ..

ಈ ದೇವಾಲಯದಲ್ಲಿರುವ ಗಣಪತಿಗೆ ಪ್ರತಿನಿತ್ಯ ಒಂದು ಸಾವಿರ ಕೊಡಗಳ ನೀರಿನ ಅಭಿಷೇಕ..!! 

ಹೌದು .. ಒಂದು ಸಾವಿರ ಕೊಡದಿಂದ ಜಲಾಭಿಷೇಕ..

ಹಾಗಂತ ನೀರನ್ನು ಮೋಟಾರ್ ಬಳಸಿ ಪಂಪ್ ಮಾಡಿ ಎತ್ತುವುದಿಲ್ಲ. ಹಗ್ಗ ಹಾಕಿ ನೀರು ಸೇದುವುದೂ ಇಲ್ಲ..

ಬಾವಿಯೊಳಗೆ ಇಳಿದು ಒಬ್ಬರು ನೀರು ತುಂಬಿಕೊಂಡು ಮತ್ತೊಬ್ಬರಿಗೆ ಹಸ್ತಾಂತರಿಸುತ್ತಾರೆ.. ಹಾಗೇ ಹಸ್ತಾಂತರ ಗೊಳ್ಳುತ್ತಾ ನೀರು , ಗಣಪತಿ ಮೂರ್ತಿಗೆ ಅಭಿಷೇಕ ಮಾಡಲಾಗುತ್ತದೆ

ಗ್ರಾಮದ ಆಸಕ್ತ ಜನರು , ಮತ್ತು ಹರಕೆ ಮಾಡಿಕೊಂಡಿರುವ ಭಕ್ತಾದಿಗಳು ಸೇರಿ ಒಂದು ಸಾವಿರ ಕೊಡ ನೀರಿನಿಂದ ವಿನಾಯಕ ದೇವರಿಗೆ ಅಭಿಷೇಕ ಮಾಡಲಾಗುತ್ತದೆ.. 

ಇನ್ನೂ ಆಶ್ಚರ್ಯ ವಿಷಯವೆಂದರೆ , ಮಾರನೇ ದಿನ ಬೆಳಿಗ್ಗೆ ನಿನ್ನೆ ಅಭಿಷೇಕ ಮಾಡಿದ್ದ ಅಷ್ಟೂ ನೀರನ್ನು ಹೊರತೆಗೆದು , ಅಂದಿನ ನೈವೇದ್ಯ ಮತ್ತು ಪ್ರಸಾದ ತಯಾರಿಸಲು ಬಳಕೆಯಾಗುತ್ತದೆ. 

ಹಾಗೂ ವಿನಾಯಕನ ಮೂರ್ತಿಯನ್ನು ಶುಭ್ರವಾದ ಬಟ್ಟೆಯಿಂದ ಚೂರೂ ನೀರು ಇಲ್ಲದಂತೆ ಒರೆಸಿ , ನಂತರವಷ್ಟೇ ಅಂದಿನ ದಿನದ ಅಭಿಷೇಕ ಮಾಡಲಾಗುತ್ತದೆ..

ಹಾಗಂತ , ನೀವು ಇದ್ದಕ್ಕಿದ್ದಂತೆ ದೇವಸ್ಥಾನಕ್ಕೆ ಹೋಗಿ ನೀರು ಸೇದುವ ಸೇವೆ ಮಾಡಲಾಗುವುದಿಲ್ಲ..

ಈಗ ನೀವು ಹೆಸರು ಬರೆಸಿದರೆ , ಕನಿಷ್ಠ ಆರು ವರ್ಷ ಕಾಯಬೇಕಾಗುತ್ತದೆ.. ಅಂದರೆ , ಮುಂದಿನ ಆರು ವರ್ಷಗಳ ವರೆಗೆ ಸೇವೆಗೆ ಭಕ್ತರು ಹೆಸರು ನೋಂದಾಯಿಸಿದ್ದಾರಂತೆ..!!

ಇದೆಲ್ಲಾ ಸರಿ.. ಆದರೆ ಈ ಪ್ರತೀತಿ ಏಕೆ?? ಸಾವಿರ ಕೊಡ ಪ್ರತಿನಿತ್ಯ ಏಕೆ..??

ಅದಕ್ಕೊಂದು ಹಿನ್ನೆಲೆ ಇದೆ..

ಬಹಳ ಹಿಂದೆ ತ್ರಿಪುರಾಸುರನೆಂಬ ರಾಕ್ಷಸ ಜನರಿಗೆ ಹಿಂಸೆ ಮಾಡುತ್ತಿದ್ದನಂತೆ.. ಅದು ಪರಮೇಶ್ವರನಿಗೆ ತಿಳಿದು , ತ್ರಿಪುರಾಸುರ ರಾಕ್ಷಸನನ್ನು  ಕೊಲ್ಲಲು ಯುದ್ದಕ್ಕೆ ಹೊರಡುವ ಮುನ್ನ , ಪರಮೇಶ್ವರ ಆದಿಯಲ್ಲಿ ಗಣಪನನ್ನು ಪೂಜಿಸದೇ ಯುದ್ದ ಆರಂಭಿಸಿದ್ದಕ್ಕಾಗಿ ರಾಕ್ಷಸನಿಂದ ಸೋಲುಂಟಾಗುತ್ತದೆಯಂತೆ..

ತನಗೆ ಸೋಲಾಗಲು ಗಣಪತಿ ಕಾರಣನೆಂದು , ಕೋಪಗೊಂಡ ಶಿವನು , ತ್ರಿಶೂಲವನ್ನು ಗಣಪತಿಯ ಮೇಲೆ ಎಸೆಯುತ್ತಾನೆ.. ಆಗ ತ್ರಿಶೂಲದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಗಣಪತಿಯು ಜೇನು ತುಂಬಿದ ಕೊಳದಲ್ಲಿ ಬೀಳುತ್ತಾನೆ.. ಮತ್ತು ಅಲ್ಲಿ ಸಾಕಷ್ಟು ಜೇನುತಿಂದ ಖುಷಿಯಲ್ಲಿ , ಶಿವನಿಗೆ ಜಯವಾಗಲೆಂದು ಹಾರೈಸುತ್ತಾನೆ..

ಶಿವ  ತ್ರಿಪುರಾಸುರನನ್ನು ಸಂಹರಿಸಿ , ಕೈಲಾಸಕ್ಕೆ ಮರಳುತ್ತಾನೆ..

ಆದರೆ ಜೇನು ಹೆಚ್ಚಾಗಿ ತಿಂದ ಕಾರಣ ಗಣಪತಿಯ ಮೈಯಲ್ಲಿ ಅಸಾಧ್ಯವಾದ ಪಿತ್ತವಾಗಿ ನರಳವುದನ್ನು ಕಂಡ ಶಿವಪಾರ್ವತಿಯರು , ದೇಹದ ಉರಿಶಮನಕ್ಕೆ ಸಲಹೆ ಕೊಟ್ಟಾಗ , ಅದರಂತೆ ಗಣಪತಿಯು ಈ ದೇವಸ್ಥಾದಲ್ಲಿ ಬಂದು ನೆಲೆಸುತ್ತಾನೆ..

ಹತ್ತಿರದಲ್ಲೇ ಹರಿಯುವ ನರಸಿಂಹ ತೀರ್ಥದ ನೀರು ವಾರಾಹಿ ನದಿಯಿಂದ ಸೇರುತ್ತದೆ..

ಅದೇ ನೀರಿನಲ್ಲಿ ಪ್ರತಿನಿತ್ಯ ಗಣಪತಿಗೆ ಸಾವಿರ ಕೊಡ ನೀರು ಬಾವಿಯಿಂದ ತುಂಬಿಕೊಂಡು ಅಭಿಷೇಕ ನಿರಂತರವಾಗಿ ಜರಗುತ್ತಿದ್ದರೆ ಮಾತ್ರ ಗಣಪತಿ ಸ್ವಾಮಿಯ ಮೈಉರಿ ಶಮನವಾಗುತ್ತದೆಯಂತೆ ಎಂದು ಅಲ್ಲಿನ ಅರ್ಚಕರು ಸ್ಥಳ ಮಹಿಮೆಯನ್ನು ತಿಳಿಸಿದರು.

ಇಲ್ಲಿರುವ ಗಣಪತಿ ಬಲಮುರಿ ಗಣಪತಿ ಯಾಗಿದ್ದು ನಂಬಿ ಬರುವ , ಸೇವೆಗೈಯುವ ಭಕ್ತರ  ಕೋರಿಕೆಗಳನ್ನು ಈಡೇರಿಸುತ್ರಾನೆ..

ಮೊದಲ ಬಾರಿಗೆ ಭೇಟಿ ಕೊಡುವ ಭಕ್ತರು ಬೆಳಿಗ್ಗೆ 11-30 ಸಮಯದಲ್ಲಿ ಅಲ್ಲಿ ಇದ್ದರೇ ,ನೀರು ತುಂಬುವ ಸೇವೆಯನ್ನು ವೀಕ್ಷಿಸಬಹುದು..

ನಂತರ ಮದ್ಯಾನಃ 1-30 ಗೆ ಪ್ರತಿನಿತ್ಯ ಭಕ್ತಾದಿಗಳಿಗೆ ಪ್ರಸಾದವಿರುತ್ತದೆ. ಪ್ರತಿಯೊಬ್ಬರೂ ಒಮ್ಮೆಯಾದರೂ ಜೀವನದಲ್ಲಿ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು , ಅಪರೂಪದ ಸೇವೆಯಲ್ಲಿ ಭಾಗಿಯಾಗಬೇಕು..

ದೇವಾಲಯದ ವಿಳಾಸ

Sri Vinayaka Temple Guddattu,Shiriyara-Guddattu Road, Guddattu Kundapura, Yedadi Matyadi, Karnataka 576222

0820 259 5432

https://maps.app.goo.gl/NWvXxf1wdNTGbHB19

ಮಾಹಿತಿ : ರವಿಶಂಕರ್ ಕೂಡಲಿ

ನಾಳೆ , #ಎರಡನೇ ದೇವಾಲಯ ಪರಿಚಯ ಬರಲಿದೆ..

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!