ನಾ ಕಂಡ ದೇವಾಲಯಗಳು – ರವಿಶಂಕರ್ ಕೂಡಲಿ

ದೇವಾಲಯಗಳ ಸರಣಿ ಆರಂಭ ಮಾಡುವಾಗ,ಯಾವ ದೇವಸ್ಥಾನದ ಮೂಲಕ ಆರಂಭಿಸಬೇಕು ಎಂದು ಆಲೋಚಿಸಿದಾಗ,ತಕ್ಷಣ ಮನಸ್ಸಿಗೆ ಮೂಡಿ ಬಂದದ್ದು ಯಾವುದೇ ಕಾರ್ಯ ನಿರ್ವಿಘ್ನವಾಗಿ ಮುಂದುವರೆಯಲು ಶ್ರೀ ಗಣೇಶನ ಮಂದಿರ ಪರಿಚಯದಿಂದ ಆರಂಭಿಸಿದರೆ ಸೂಕ್ತವೆನಿಸಿತು..

ಪ್ರಥಮಂ ವಿನಾಯಕಂ .. ಸರಿ , ಆದರೆ ದೇಶದ ಉದ್ದಗಲಕ್ಕೂ ಪ್ರಸಿದ್ಧವಾದ ನೂರಾರು ವಿನಾಯಕ ಮಂದಿರಗಳಿವೆ.. ನಮ್ಮ ರಾಜ್ಯದಲ್ಲೇ ಬಹಳ ಇದೆ.. ಯಾವ ಮಂದಿರ ಆಯ್ದು ಕೊಳ್ಳಲಿ ಎಂದು ಅನಿಸಿದಾಗ ಮೊಟ್ಟಮೊದಲು ಮೂಡಿಬಂದಿದ್ದೇ

#ಗುಡ್ಡಟ್ಟು ಮಹಾಹಣಪತಿ ದೇವಾಲಯ..

ಎಷ್ಟೊಂದು ದೇವಸ್ಥಾನಗಳಿರುವಾಗ ಇದೇ ಯಾಕೆ ಮನಸಿಗೆ ಬಂತು..

 ಕಾರಣ ಸ್ಪಷ್ಟ..

ಬಹುತೇಕರಿಗೆ ಇದರ ಪರಿಚಯವಿಲ್ಲ..

#ಗುಡ್ಡಟ್ಟು ಗಣಪತಿ ದೇವಾಲಯಯ ಇರುವುದು ಉಡುಪಿ ಜಿಲ್ಲೆಯ ಕುಂದಾಪುರದ ಬಳಿ.

ದೇಶದಾದ್ಯಂತ ಇರುವ ಗಣಪತಿ ದೇವಾಲಯದಲ್ಲಿ ಎಲ್ಲೂ ಕಾಣದ ವಿಶೇಷ ಸೇವೆಯೊಂದು , ಈ ದೇವಸ್ಥಾನದಲ್ಲಿ ನಡೆಯುತ್ತದೆ..

ಈ ದೇವಾಲಯದಲ್ಲಿರುವ ಗಣಪತಿಗೆ ಪ್ರತಿನಿತ್ಯ ಒಂದು ಸಾವಿರ ಕೊಡಗಳ ನೀರಿನ ಅಭಿಷೇಕ..!! 

ಹೌದು .. ಒಂದು ಸಾವಿರ ಕೊಡದಿಂದ ಜಲಾಭಿಷೇಕ..

ಹಾಗಂತ ನೀರನ್ನು ಮೋಟಾರ್ ಬಳಸಿ ಪಂಪ್ ಮಾಡಿ ಎತ್ತುವುದಿಲ್ಲ. ಹಗ್ಗ ಹಾಕಿ ನೀರು ಸೇದುವುದೂ ಇಲ್ಲ..

ಬಾವಿಯೊಳಗೆ ಇಳಿದು ಒಬ್ಬರು ನೀರು ತುಂಬಿಕೊಂಡು ಮತ್ತೊಬ್ಬರಿಗೆ ಹಸ್ತಾಂತರಿಸುತ್ತಾರೆ.. ಹಾಗೇ ಹಸ್ತಾಂತರ ಗೊಳ್ಳುತ್ತಾ ನೀರು , ಗಣಪತಿ ಮೂರ್ತಿಗೆ ಅಭಿಷೇಕ ಮಾಡಲಾಗುತ್ತದೆ

ಗ್ರಾಮದ ಆಸಕ್ತ ಜನರು , ಮತ್ತು ಹರಕೆ ಮಾಡಿಕೊಂಡಿರುವ ಭಕ್ತಾದಿಗಳು ಸೇರಿ ಒಂದು ಸಾವಿರ ಕೊಡ ನೀರಿನಿಂದ ವಿನಾಯಕ ದೇವರಿಗೆ ಅಭಿಷೇಕ ಮಾಡಲಾಗುತ್ತದೆ.. 

ಇನ್ನೂ ಆಶ್ಚರ್ಯ ವಿಷಯವೆಂದರೆ , ಮಾರನೇ ದಿನ ಬೆಳಿಗ್ಗೆ ನಿನ್ನೆ ಅಭಿಷೇಕ ಮಾಡಿದ್ದ ಅಷ್ಟೂ ನೀರನ್ನು ಹೊರತೆಗೆದು , ಅಂದಿನ ನೈವೇದ್ಯ ಮತ್ತು ಪ್ರಸಾದ ತಯಾರಿಸಲು ಬಳಕೆಯಾಗುತ್ತದೆ. 

ಹಾಗೂ ವಿನಾಯಕನ ಮೂರ್ತಿಯನ್ನು ಶುಭ್ರವಾದ ಬಟ್ಟೆಯಿಂದ ಚೂರೂ ನೀರು ಇಲ್ಲದಂತೆ ಒರೆಸಿ , ನಂತರವಷ್ಟೇ ಅಂದಿನ ದಿನದ ಅಭಿಷೇಕ ಮಾಡಲಾಗುತ್ತದೆ..

ಹಾಗಂತ , ನೀವು ಇದ್ದಕ್ಕಿದ್ದಂತೆ ದೇವಸ್ಥಾನಕ್ಕೆ ಹೋಗಿ ನೀರು ಸೇದುವ ಸೇವೆ ಮಾಡಲಾಗುವುದಿಲ್ಲ..

ಈಗ ನೀವು ಹೆಸರು ಬರೆಸಿದರೆ , ಕನಿಷ್ಠ ಆರು ವರ್ಷ ಕಾಯಬೇಕಾಗುತ್ತದೆ.. ಅಂದರೆ , ಮುಂದಿನ ಆರು ವರ್ಷಗಳ ವರೆಗೆ ಸೇವೆಗೆ ಭಕ್ತರು ಹೆಸರು ನೋಂದಾಯಿಸಿದ್ದಾರಂತೆ..!!

ಇದೆಲ್ಲಾ ಸರಿ.. ಆದರೆ ಈ ಪ್ರತೀತಿ ಏಕೆ?? ಸಾವಿರ ಕೊಡ ಪ್ರತಿನಿತ್ಯ ಏಕೆ..??

ಅದಕ್ಕೊಂದು ಹಿನ್ನೆಲೆ ಇದೆ..

ಬಹಳ ಹಿಂದೆ ತ್ರಿಪುರಾಸುರನೆಂಬ ರಾಕ್ಷಸ ಜನರಿಗೆ ಹಿಂಸೆ ಮಾಡುತ್ತಿದ್ದನಂತೆ.. ಅದು ಪರಮೇಶ್ವರನಿಗೆ ತಿಳಿದು , ತ್ರಿಪುರಾಸುರ ರಾಕ್ಷಸನನ್ನು  ಕೊಲ್ಲಲು ಯುದ್ದಕ್ಕೆ ಹೊರಡುವ ಮುನ್ನ , ಪರಮೇಶ್ವರ ಆದಿಯಲ್ಲಿ ಗಣಪನನ್ನು ಪೂಜಿಸದೇ ಯುದ್ದ ಆರಂಭಿಸಿದ್ದಕ್ಕಾಗಿ ರಾಕ್ಷಸನಿಂದ ಸೋಲುಂಟಾಗುತ್ತದೆಯಂತೆ..

ತನಗೆ ಸೋಲಾಗಲು ಗಣಪತಿ ಕಾರಣನೆಂದು , ಕೋಪಗೊಂಡ ಶಿವನು , ತ್ರಿಶೂಲವನ್ನು ಗಣಪತಿಯ ಮೇಲೆ ಎಸೆಯುತ್ತಾನೆ.. ಆಗ ತ್ರಿಶೂಲದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಗಣಪತಿಯು ಜೇನು ತುಂಬಿದ ಕೊಳದಲ್ಲಿ ಬೀಳುತ್ತಾನೆ.. ಮತ್ತು ಅಲ್ಲಿ ಸಾಕಷ್ಟು ಜೇನುತಿಂದ ಖುಷಿಯಲ್ಲಿ , ಶಿವನಿಗೆ ಜಯವಾಗಲೆಂದು ಹಾರೈಸುತ್ತಾನೆ..

ಶಿವ  ತ್ರಿಪುರಾಸುರನನ್ನು ಸಂಹರಿಸಿ , ಕೈಲಾಸಕ್ಕೆ ಮರಳುತ್ತಾನೆ..

ಆದರೆ ಜೇನು ಹೆಚ್ಚಾಗಿ ತಿಂದ ಕಾರಣ ಗಣಪತಿಯ ಮೈಯಲ್ಲಿ ಅಸಾಧ್ಯವಾದ ಪಿತ್ತವಾಗಿ ನರಳವುದನ್ನು ಕಂಡ ಶಿವಪಾರ್ವತಿಯರು , ದೇಹದ ಉರಿಶಮನಕ್ಕೆ ಸಲಹೆ ಕೊಟ್ಟಾಗ , ಅದರಂತೆ ಗಣಪತಿಯು ಈ ದೇವಸ್ಥಾದಲ್ಲಿ ಬಂದು ನೆಲೆಸುತ್ತಾನೆ..

ಹತ್ತಿರದಲ್ಲೇ ಹರಿಯುವ ನರಸಿಂಹ ತೀರ್ಥದ ನೀರು ವಾರಾಹಿ ನದಿಯಿಂದ ಸೇರುತ್ತದೆ..

ಅದೇ ನೀರಿನಲ್ಲಿ ಪ್ರತಿನಿತ್ಯ ಗಣಪತಿಗೆ ಸಾವಿರ ಕೊಡ ನೀರು ಬಾವಿಯಿಂದ ತುಂಬಿಕೊಂಡು ಅಭಿಷೇಕ ನಿರಂತರವಾಗಿ ಜರಗುತ್ತಿದ್ದರೆ ಮಾತ್ರ ಗಣಪತಿ ಸ್ವಾಮಿಯ ಮೈಉರಿ ಶಮನವಾಗುತ್ತದೆಯಂತೆ ಎಂದು ಅಲ್ಲಿನ ಅರ್ಚಕರು ಸ್ಥಳ ಮಹಿಮೆಯನ್ನು ತಿಳಿಸಿದರು.

ಇಲ್ಲಿರುವ ಗಣಪತಿ ಬಲಮುರಿ ಗಣಪತಿ ಯಾಗಿದ್ದು ನಂಬಿ ಬರುವ , ಸೇವೆಗೈಯುವ ಭಕ್ತರ  ಕೋರಿಕೆಗಳನ್ನು ಈಡೇರಿಸುತ್ರಾನೆ..

ಮೊದಲ ಬಾರಿಗೆ ಭೇಟಿ ಕೊಡುವ ಭಕ್ತರು ಬೆಳಿಗ್ಗೆ 11-30 ಸಮಯದಲ್ಲಿ ಅಲ್ಲಿ ಇದ್ದರೇ ,ನೀರು ತುಂಬುವ ಸೇವೆಯನ್ನು ವೀಕ್ಷಿಸಬಹುದು..

ನಂತರ ಮದ್ಯಾನಃ 1-30 ಗೆ ಪ್ರತಿನಿತ್ಯ ಭಕ್ತಾದಿಗಳಿಗೆ ಪ್ರಸಾದವಿರುತ್ತದೆ. ಪ್ರತಿಯೊಬ್ಬರೂ ಒಮ್ಮೆಯಾದರೂ ಜೀವನದಲ್ಲಿ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು , ಅಪರೂಪದ ಸೇವೆಯಲ್ಲಿ ಭಾಗಿಯಾಗಬೇಕು..

ದೇವಾಲಯದ ವಿಳಾಸ

Sri Vinayaka Temple Guddattu,Shiriyara-Guddattu Road, Guddattu Kundapura, Yedadi Matyadi, Karnataka 576222

0820 259 5432

https://maps.app.goo.gl/NWvXxf1wdNTGbHB19

ಮಾಹಿತಿ : ರವಿಶಂಕರ್ ಕೂಡಲಿ

ನಾಳೆ , #ಎರಡನೇ ದೇವಾಲಯ ಪರಿಚಯ ಬರಲಿದೆ..

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!