ನಾ ಕಂಡ ದೇವಾಲಯಗಳು – ರವಿಶಂಕರ್ ಕೂಡಲಿ

ದೇವಾಲಯಗಳ ಸರಣಿ ಆರಂಭ ಮಾಡುವಾಗ,ಯಾವ ದೇವಸ್ಥಾನದ ಮೂಲಕ ಆರಂಭಿಸಬೇಕು ಎಂದು ಆಲೋಚಿಸಿದಾಗ,ತಕ್ಷಣ ಮನಸ್ಸಿಗೆ ಮೂಡಿ ಬಂದದ್ದು ಯಾವುದೇ ಕಾರ್ಯ ನಿರ್ವಿಘ್ನವಾಗಿ ಮುಂದುವರೆಯಲು ಶ್ರೀ ಗಣೇಶನ ಮಂದಿರ ಪರಿಚಯದಿಂದ ಆರಂಭಿಸಿದರೆ ಸೂಕ್ತವೆನಿಸಿತು..

ಪ್ರಥಮಂ ವಿನಾಯಕಂ .. ಸರಿ , ಆದರೆ ದೇಶದ ಉದ್ದಗಲಕ್ಕೂ ಪ್ರಸಿದ್ಧವಾದ ನೂರಾರು ವಿನಾಯಕ ಮಂದಿರಗಳಿವೆ.. ನಮ್ಮ ರಾಜ್ಯದಲ್ಲೇ ಬಹಳ ಇದೆ.. ಯಾವ ಮಂದಿರ ಆಯ್ದು ಕೊಳ್ಳಲಿ ಎಂದು ಅನಿಸಿದಾಗ ಮೊಟ್ಟಮೊದಲು ಮೂಡಿಬಂದಿದ್ದೇ

#ಗುಡ್ಡಟ್ಟು ಮಹಾಹಣಪತಿ ದೇವಾಲಯ..

ಎಷ್ಟೊಂದು ದೇವಸ್ಥಾನಗಳಿರುವಾಗ ಇದೇ ಯಾಕೆ ಮನಸಿಗೆ ಬಂತು..

 ಕಾರಣ ಸ್ಪಷ್ಟ..

ಬಹುತೇಕರಿಗೆ ಇದರ ಪರಿಚಯವಿಲ್ಲ..

#ಗುಡ್ಡಟ್ಟು ಗಣಪತಿ ದೇವಾಲಯಯ ಇರುವುದು ಉಡುಪಿ ಜಿಲ್ಲೆಯ ಕುಂದಾಪುರದ ಬಳಿ.

ದೇಶದಾದ್ಯಂತ ಇರುವ ಗಣಪತಿ ದೇವಾಲಯದಲ್ಲಿ ಎಲ್ಲೂ ಕಾಣದ ವಿಶೇಷ ಸೇವೆಯೊಂದು , ಈ ದೇವಸ್ಥಾನದಲ್ಲಿ ನಡೆಯುತ್ತದೆ..

ಈ ದೇವಾಲಯದಲ್ಲಿರುವ ಗಣಪತಿಗೆ ಪ್ರತಿನಿತ್ಯ ಒಂದು ಸಾವಿರ ಕೊಡಗಳ ನೀರಿನ ಅಭಿಷೇಕ..!! 

ಹೌದು .. ಒಂದು ಸಾವಿರ ಕೊಡದಿಂದ ಜಲಾಭಿಷೇಕ..

ಹಾಗಂತ ನೀರನ್ನು ಮೋಟಾರ್ ಬಳಸಿ ಪಂಪ್ ಮಾಡಿ ಎತ್ತುವುದಿಲ್ಲ. ಹಗ್ಗ ಹಾಕಿ ನೀರು ಸೇದುವುದೂ ಇಲ್ಲ..

ಬಾವಿಯೊಳಗೆ ಇಳಿದು ಒಬ್ಬರು ನೀರು ತುಂಬಿಕೊಂಡು ಮತ್ತೊಬ್ಬರಿಗೆ ಹಸ್ತಾಂತರಿಸುತ್ತಾರೆ.. ಹಾಗೇ ಹಸ್ತಾಂತರ ಗೊಳ್ಳುತ್ತಾ ನೀರು , ಗಣಪತಿ ಮೂರ್ತಿಗೆ ಅಭಿಷೇಕ ಮಾಡಲಾಗುತ್ತದೆ

ಗ್ರಾಮದ ಆಸಕ್ತ ಜನರು , ಮತ್ತು ಹರಕೆ ಮಾಡಿಕೊಂಡಿರುವ ಭಕ್ತಾದಿಗಳು ಸೇರಿ ಒಂದು ಸಾವಿರ ಕೊಡ ನೀರಿನಿಂದ ವಿನಾಯಕ ದೇವರಿಗೆ ಅಭಿಷೇಕ ಮಾಡಲಾಗುತ್ತದೆ.. 

ಇನ್ನೂ ಆಶ್ಚರ್ಯ ವಿಷಯವೆಂದರೆ , ಮಾರನೇ ದಿನ ಬೆಳಿಗ್ಗೆ ನಿನ್ನೆ ಅಭಿಷೇಕ ಮಾಡಿದ್ದ ಅಷ್ಟೂ ನೀರನ್ನು ಹೊರತೆಗೆದು , ಅಂದಿನ ನೈವೇದ್ಯ ಮತ್ತು ಪ್ರಸಾದ ತಯಾರಿಸಲು ಬಳಕೆಯಾಗುತ್ತದೆ. 

ಹಾಗೂ ವಿನಾಯಕನ ಮೂರ್ತಿಯನ್ನು ಶುಭ್ರವಾದ ಬಟ್ಟೆಯಿಂದ ಚೂರೂ ನೀರು ಇಲ್ಲದಂತೆ ಒರೆಸಿ , ನಂತರವಷ್ಟೇ ಅಂದಿನ ದಿನದ ಅಭಿಷೇಕ ಮಾಡಲಾಗುತ್ತದೆ..

ಹಾಗಂತ , ನೀವು ಇದ್ದಕ್ಕಿದ್ದಂತೆ ದೇವಸ್ಥಾನಕ್ಕೆ ಹೋಗಿ ನೀರು ಸೇದುವ ಸೇವೆ ಮಾಡಲಾಗುವುದಿಲ್ಲ..

ಈಗ ನೀವು ಹೆಸರು ಬರೆಸಿದರೆ , ಕನಿಷ್ಠ ಆರು ವರ್ಷ ಕಾಯಬೇಕಾಗುತ್ತದೆ.. ಅಂದರೆ , ಮುಂದಿನ ಆರು ವರ್ಷಗಳ ವರೆಗೆ ಸೇವೆಗೆ ಭಕ್ತರು ಹೆಸರು ನೋಂದಾಯಿಸಿದ್ದಾರಂತೆ..!!

ಇದೆಲ್ಲಾ ಸರಿ.. ಆದರೆ ಈ ಪ್ರತೀತಿ ಏಕೆ?? ಸಾವಿರ ಕೊಡ ಪ್ರತಿನಿತ್ಯ ಏಕೆ..??

ಅದಕ್ಕೊಂದು ಹಿನ್ನೆಲೆ ಇದೆ..

ಬಹಳ ಹಿಂದೆ ತ್ರಿಪುರಾಸುರನೆಂಬ ರಾಕ್ಷಸ ಜನರಿಗೆ ಹಿಂಸೆ ಮಾಡುತ್ತಿದ್ದನಂತೆ.. ಅದು ಪರಮೇಶ್ವರನಿಗೆ ತಿಳಿದು , ತ್ರಿಪುರಾಸುರ ರಾಕ್ಷಸನನ್ನು  ಕೊಲ್ಲಲು ಯುದ್ದಕ್ಕೆ ಹೊರಡುವ ಮುನ್ನ , ಪರಮೇಶ್ವರ ಆದಿಯಲ್ಲಿ ಗಣಪನನ್ನು ಪೂಜಿಸದೇ ಯುದ್ದ ಆರಂಭಿಸಿದ್ದಕ್ಕಾಗಿ ರಾಕ್ಷಸನಿಂದ ಸೋಲುಂಟಾಗುತ್ತದೆಯಂತೆ..

ತನಗೆ ಸೋಲಾಗಲು ಗಣಪತಿ ಕಾರಣನೆಂದು , ಕೋಪಗೊಂಡ ಶಿವನು , ತ್ರಿಶೂಲವನ್ನು ಗಣಪತಿಯ ಮೇಲೆ ಎಸೆಯುತ್ತಾನೆ.. ಆಗ ತ್ರಿಶೂಲದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಗಣಪತಿಯು ಜೇನು ತುಂಬಿದ ಕೊಳದಲ್ಲಿ ಬೀಳುತ್ತಾನೆ.. ಮತ್ತು ಅಲ್ಲಿ ಸಾಕಷ್ಟು ಜೇನುತಿಂದ ಖುಷಿಯಲ್ಲಿ , ಶಿವನಿಗೆ ಜಯವಾಗಲೆಂದು ಹಾರೈಸುತ್ತಾನೆ..

ಶಿವ  ತ್ರಿಪುರಾಸುರನನ್ನು ಸಂಹರಿಸಿ , ಕೈಲಾಸಕ್ಕೆ ಮರಳುತ್ತಾನೆ..

ಆದರೆ ಜೇನು ಹೆಚ್ಚಾಗಿ ತಿಂದ ಕಾರಣ ಗಣಪತಿಯ ಮೈಯಲ್ಲಿ ಅಸಾಧ್ಯವಾದ ಪಿತ್ತವಾಗಿ ನರಳವುದನ್ನು ಕಂಡ ಶಿವಪಾರ್ವತಿಯರು , ದೇಹದ ಉರಿಶಮನಕ್ಕೆ ಸಲಹೆ ಕೊಟ್ಟಾಗ , ಅದರಂತೆ ಗಣಪತಿಯು ಈ ದೇವಸ್ಥಾದಲ್ಲಿ ಬಂದು ನೆಲೆಸುತ್ತಾನೆ..

ಹತ್ತಿರದಲ್ಲೇ ಹರಿಯುವ ನರಸಿಂಹ ತೀರ್ಥದ ನೀರು ವಾರಾಹಿ ನದಿಯಿಂದ ಸೇರುತ್ತದೆ..

ಅದೇ ನೀರಿನಲ್ಲಿ ಪ್ರತಿನಿತ್ಯ ಗಣಪತಿಗೆ ಸಾವಿರ ಕೊಡ ನೀರು ಬಾವಿಯಿಂದ ತುಂಬಿಕೊಂಡು ಅಭಿಷೇಕ ನಿರಂತರವಾಗಿ ಜರಗುತ್ತಿದ್ದರೆ ಮಾತ್ರ ಗಣಪತಿ ಸ್ವಾಮಿಯ ಮೈಉರಿ ಶಮನವಾಗುತ್ತದೆಯಂತೆ ಎಂದು ಅಲ್ಲಿನ ಅರ್ಚಕರು ಸ್ಥಳ ಮಹಿಮೆಯನ್ನು ತಿಳಿಸಿದರು.

ಇಲ್ಲಿರುವ ಗಣಪತಿ ಬಲಮುರಿ ಗಣಪತಿ ಯಾಗಿದ್ದು ನಂಬಿ ಬರುವ , ಸೇವೆಗೈಯುವ ಭಕ್ತರ  ಕೋರಿಕೆಗಳನ್ನು ಈಡೇರಿಸುತ್ರಾನೆ..

ಮೊದಲ ಬಾರಿಗೆ ಭೇಟಿ ಕೊಡುವ ಭಕ್ತರು ಬೆಳಿಗ್ಗೆ 11-30 ಸಮಯದಲ್ಲಿ ಅಲ್ಲಿ ಇದ್ದರೇ ,ನೀರು ತುಂಬುವ ಸೇವೆಯನ್ನು ವೀಕ್ಷಿಸಬಹುದು..

ನಂತರ ಮದ್ಯಾನಃ 1-30 ಗೆ ಪ್ರತಿನಿತ್ಯ ಭಕ್ತಾದಿಗಳಿಗೆ ಪ್ರಸಾದವಿರುತ್ತದೆ. ಪ್ರತಿಯೊಬ್ಬರೂ ಒಮ್ಮೆಯಾದರೂ ಜೀವನದಲ್ಲಿ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು , ಅಪರೂಪದ ಸೇವೆಯಲ್ಲಿ ಭಾಗಿಯಾಗಬೇಕು..

ದೇವಾಲಯದ ವಿಳಾಸ

Sri Vinayaka Temple Guddattu,Shiriyara-Guddattu Road, Guddattu Kundapura, Yedadi Matyadi, Karnataka 576222

0820 259 5432

https://maps.app.goo.gl/NWvXxf1wdNTGbHB19

ಮಾಹಿತಿ : ರವಿಶಂಕರ್ ಕೂಡಲಿ

ನಾಳೆ , #ಎರಡನೇ ದೇವಾಲಯ ಪರಿಚಯ ಬರಲಿದೆ..

ರಾಜಕೀಯ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

2028 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120947"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]