ನಾ ಕಂಡ ದೇವಾಲಯಗಳು – ರವಿಶಂಕರ್ ಕೂಡಲಿ

ದೇವಾಲಯಗಳ ಸರಣಿ ಆರಂಭ ಮಾಡುವಾಗ,ಯಾವ ದೇವಸ್ಥಾನದ ಮೂಲಕ ಆರಂಭಿಸಬೇಕು ಎಂದು ಆಲೋಚಿಸಿದಾಗ,ತಕ್ಷಣ ಮನಸ್ಸಿಗೆ ಮೂಡಿ ಬಂದದ್ದು ಯಾವುದೇ ಕಾರ್ಯ ನಿರ್ವಿಘ್ನವಾಗಿ ಮುಂದುವರೆಯಲು ಶ್ರೀ ಗಣೇಶನ ಮಂದಿರ ಪರಿಚಯದಿಂದ ಆರಂಭಿಸಿದರೆ ಸೂಕ್ತವೆನಿಸಿತು..

ಪ್ರಥಮಂ ವಿನಾಯಕಂ .. ಸರಿ , ಆದರೆ ದೇಶದ ಉದ್ದಗಲಕ್ಕೂ ಪ್ರಸಿದ್ಧವಾದ ನೂರಾರು ವಿನಾಯಕ ಮಂದಿರಗಳಿವೆ.. ನಮ್ಮ ರಾಜ್ಯದಲ್ಲೇ ಬಹಳ ಇದೆ.. ಯಾವ ಮಂದಿರ ಆಯ್ದು ಕೊಳ್ಳಲಿ ಎಂದು ಅನಿಸಿದಾಗ ಮೊಟ್ಟಮೊದಲು ಮೂಡಿಬಂದಿದ್ದೇ

#ಗುಡ್ಡಟ್ಟು ಮಹಾಹಣಪತಿ ದೇವಾಲಯ..

ಎಷ್ಟೊಂದು ದೇವಸ್ಥಾನಗಳಿರುವಾಗ ಇದೇ ಯಾಕೆ ಮನಸಿಗೆ ಬಂತು..

 ಕಾರಣ ಸ್ಪಷ್ಟ..

ಬಹುತೇಕರಿಗೆ ಇದರ ಪರಿಚಯವಿಲ್ಲ..

#ಗುಡ್ಡಟ್ಟು ಗಣಪತಿ ದೇವಾಲಯಯ ಇರುವುದು ಉಡುಪಿ ಜಿಲ್ಲೆಯ ಕುಂದಾಪುರದ ಬಳಿ.

ದೇಶದಾದ್ಯಂತ ಇರುವ ಗಣಪತಿ ದೇವಾಲಯದಲ್ಲಿ ಎಲ್ಲೂ ಕಾಣದ ವಿಶೇಷ ಸೇವೆಯೊಂದು , ಈ ದೇವಸ್ಥಾನದಲ್ಲಿ ನಡೆಯುತ್ತದೆ..

ಈ ದೇವಾಲಯದಲ್ಲಿರುವ ಗಣಪತಿಗೆ ಪ್ರತಿನಿತ್ಯ ಒಂದು ಸಾವಿರ ಕೊಡಗಳ ನೀರಿನ ಅಭಿಷೇಕ..!! 

ಹೌದು .. ಒಂದು ಸಾವಿರ ಕೊಡದಿಂದ ಜಲಾಭಿಷೇಕ..

ಹಾಗಂತ ನೀರನ್ನು ಮೋಟಾರ್ ಬಳಸಿ ಪಂಪ್ ಮಾಡಿ ಎತ್ತುವುದಿಲ್ಲ. ಹಗ್ಗ ಹಾಕಿ ನೀರು ಸೇದುವುದೂ ಇಲ್ಲ..

ಬಾವಿಯೊಳಗೆ ಇಳಿದು ಒಬ್ಬರು ನೀರು ತುಂಬಿಕೊಂಡು ಮತ್ತೊಬ್ಬರಿಗೆ ಹಸ್ತಾಂತರಿಸುತ್ತಾರೆ.. ಹಾಗೇ ಹಸ್ತಾಂತರ ಗೊಳ್ಳುತ್ತಾ ನೀರು , ಗಣಪತಿ ಮೂರ್ತಿಗೆ ಅಭಿಷೇಕ ಮಾಡಲಾಗುತ್ತದೆ

ಗ್ರಾಮದ ಆಸಕ್ತ ಜನರು , ಮತ್ತು ಹರಕೆ ಮಾಡಿಕೊಂಡಿರುವ ಭಕ್ತಾದಿಗಳು ಸೇರಿ ಒಂದು ಸಾವಿರ ಕೊಡ ನೀರಿನಿಂದ ವಿನಾಯಕ ದೇವರಿಗೆ ಅಭಿಷೇಕ ಮಾಡಲಾಗುತ್ತದೆ.. 

ಇನ್ನೂ ಆಶ್ಚರ್ಯ ವಿಷಯವೆಂದರೆ , ಮಾರನೇ ದಿನ ಬೆಳಿಗ್ಗೆ ನಿನ್ನೆ ಅಭಿಷೇಕ ಮಾಡಿದ್ದ ಅಷ್ಟೂ ನೀರನ್ನು ಹೊರತೆಗೆದು , ಅಂದಿನ ನೈವೇದ್ಯ ಮತ್ತು ಪ್ರಸಾದ ತಯಾರಿಸಲು ಬಳಕೆಯಾಗುತ್ತದೆ. 

ಹಾಗೂ ವಿನಾಯಕನ ಮೂರ್ತಿಯನ್ನು ಶುಭ್ರವಾದ ಬಟ್ಟೆಯಿಂದ ಚೂರೂ ನೀರು ಇಲ್ಲದಂತೆ ಒರೆಸಿ , ನಂತರವಷ್ಟೇ ಅಂದಿನ ದಿನದ ಅಭಿಷೇಕ ಮಾಡಲಾಗುತ್ತದೆ..

ಹಾಗಂತ , ನೀವು ಇದ್ದಕ್ಕಿದ್ದಂತೆ ದೇವಸ್ಥಾನಕ್ಕೆ ಹೋಗಿ ನೀರು ಸೇದುವ ಸೇವೆ ಮಾಡಲಾಗುವುದಿಲ್ಲ..

ಈಗ ನೀವು ಹೆಸರು ಬರೆಸಿದರೆ , ಕನಿಷ್ಠ ಆರು ವರ್ಷ ಕಾಯಬೇಕಾಗುತ್ತದೆ.. ಅಂದರೆ , ಮುಂದಿನ ಆರು ವರ್ಷಗಳ ವರೆಗೆ ಸೇವೆಗೆ ಭಕ್ತರು ಹೆಸರು ನೋಂದಾಯಿಸಿದ್ದಾರಂತೆ..!!

ಇದೆಲ್ಲಾ ಸರಿ.. ಆದರೆ ಈ ಪ್ರತೀತಿ ಏಕೆ?? ಸಾವಿರ ಕೊಡ ಪ್ರತಿನಿತ್ಯ ಏಕೆ..??

ಅದಕ್ಕೊಂದು ಹಿನ್ನೆಲೆ ಇದೆ..

ಬಹಳ ಹಿಂದೆ ತ್ರಿಪುರಾಸುರನೆಂಬ ರಾಕ್ಷಸ ಜನರಿಗೆ ಹಿಂಸೆ ಮಾಡುತ್ತಿದ್ದನಂತೆ.. ಅದು ಪರಮೇಶ್ವರನಿಗೆ ತಿಳಿದು , ತ್ರಿಪುರಾಸುರ ರಾಕ್ಷಸನನ್ನು  ಕೊಲ್ಲಲು ಯುದ್ದಕ್ಕೆ ಹೊರಡುವ ಮುನ್ನ , ಪರಮೇಶ್ವರ ಆದಿಯಲ್ಲಿ ಗಣಪನನ್ನು ಪೂಜಿಸದೇ ಯುದ್ದ ಆರಂಭಿಸಿದ್ದಕ್ಕಾಗಿ ರಾಕ್ಷಸನಿಂದ ಸೋಲುಂಟಾಗುತ್ತದೆಯಂತೆ..

ತನಗೆ ಸೋಲಾಗಲು ಗಣಪತಿ ಕಾರಣನೆಂದು , ಕೋಪಗೊಂಡ ಶಿವನು , ತ್ರಿಶೂಲವನ್ನು ಗಣಪತಿಯ ಮೇಲೆ ಎಸೆಯುತ್ತಾನೆ.. ಆಗ ತ್ರಿಶೂಲದಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಗಣಪತಿಯು ಜೇನು ತುಂಬಿದ ಕೊಳದಲ್ಲಿ ಬೀಳುತ್ತಾನೆ.. ಮತ್ತು ಅಲ್ಲಿ ಸಾಕಷ್ಟು ಜೇನುತಿಂದ ಖುಷಿಯಲ್ಲಿ , ಶಿವನಿಗೆ ಜಯವಾಗಲೆಂದು ಹಾರೈಸುತ್ತಾನೆ..

ಶಿವ  ತ್ರಿಪುರಾಸುರನನ್ನು ಸಂಹರಿಸಿ , ಕೈಲಾಸಕ್ಕೆ ಮರಳುತ್ತಾನೆ..

ಆದರೆ ಜೇನು ಹೆಚ್ಚಾಗಿ ತಿಂದ ಕಾರಣ ಗಣಪತಿಯ ಮೈಯಲ್ಲಿ ಅಸಾಧ್ಯವಾದ ಪಿತ್ತವಾಗಿ ನರಳವುದನ್ನು ಕಂಡ ಶಿವಪಾರ್ವತಿಯರು , ದೇಹದ ಉರಿಶಮನಕ್ಕೆ ಸಲಹೆ ಕೊಟ್ಟಾಗ , ಅದರಂತೆ ಗಣಪತಿಯು ಈ ದೇವಸ್ಥಾದಲ್ಲಿ ಬಂದು ನೆಲೆಸುತ್ತಾನೆ..

ಹತ್ತಿರದಲ್ಲೇ ಹರಿಯುವ ನರಸಿಂಹ ತೀರ್ಥದ ನೀರು ವಾರಾಹಿ ನದಿಯಿಂದ ಸೇರುತ್ತದೆ..

ಅದೇ ನೀರಿನಲ್ಲಿ ಪ್ರತಿನಿತ್ಯ ಗಣಪತಿಗೆ ಸಾವಿರ ಕೊಡ ನೀರು ಬಾವಿಯಿಂದ ತುಂಬಿಕೊಂಡು ಅಭಿಷೇಕ ನಿರಂತರವಾಗಿ ಜರಗುತ್ತಿದ್ದರೆ ಮಾತ್ರ ಗಣಪತಿ ಸ್ವಾಮಿಯ ಮೈಉರಿ ಶಮನವಾಗುತ್ತದೆಯಂತೆ ಎಂದು ಅಲ್ಲಿನ ಅರ್ಚಕರು ಸ್ಥಳ ಮಹಿಮೆಯನ್ನು ತಿಳಿಸಿದರು.

ಇಲ್ಲಿರುವ ಗಣಪತಿ ಬಲಮುರಿ ಗಣಪತಿ ಯಾಗಿದ್ದು ನಂಬಿ ಬರುವ , ಸೇವೆಗೈಯುವ ಭಕ್ತರ  ಕೋರಿಕೆಗಳನ್ನು ಈಡೇರಿಸುತ್ರಾನೆ..

ಮೊದಲ ಬಾರಿಗೆ ಭೇಟಿ ಕೊಡುವ ಭಕ್ತರು ಬೆಳಿಗ್ಗೆ 11-30 ಸಮಯದಲ್ಲಿ ಅಲ್ಲಿ ಇದ್ದರೇ ,ನೀರು ತುಂಬುವ ಸೇವೆಯನ್ನು ವೀಕ್ಷಿಸಬಹುದು..

ನಂತರ ಮದ್ಯಾನಃ 1-30 ಗೆ ಪ್ರತಿನಿತ್ಯ ಭಕ್ತಾದಿಗಳಿಗೆ ಪ್ರಸಾದವಿರುತ್ತದೆ. ಪ್ರತಿಯೊಬ್ಬರೂ ಒಮ್ಮೆಯಾದರೂ ಜೀವನದಲ್ಲಿ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು , ಅಪರೂಪದ ಸೇವೆಯಲ್ಲಿ ಭಾಗಿಯಾಗಬೇಕು..

ದೇವಾಲಯದ ವಿಳಾಸ

Sri Vinayaka Temple Guddattu,Shiriyara-Guddattu Road, Guddattu Kundapura, Yedadi Matyadi, Karnataka 576222

0820 259 5432

https://maps.app.goo.gl/NWvXxf1wdNTGbHB19

ಮಾಹಿತಿ : ರವಿಶಂಕರ್ ಕೂಡಲಿ

ನಾಳೆ , #ಎರಡನೇ ದೇವಾಲಯ ಪರಿಚಯ ಬರಲಿದೆ..

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!