ದೊಡ್ಡಬಳ್ಳಾಪುರಕ್ಕೆ ಎರಗಲಿದ್ದ ಗಂಡಾಂತರ ತಡೆದ ಕರೊನಾ ವಾರಿಯರ್ಸ್

ಹರಿತಲೇಖನಿ ವಿಶೇಷ ದೊಡ್ಡಬಳ್ಳಾಪುರ : ಮಹಾರಾಷ್ಟ್ರದ ಮುಂಬೈಯಿಂದ ಬಾಗೇಪಲ್ಲಿ ಮೂಲಕ ಬಂದ,ತಾಲೂಕಿನ ಹೊಸಹಳ್ಳಿ ತಾಂಡ್ಯದ 6 ಮಂದಿಯನ್ನು ಗ್ರಾಮಕ್ಕೆ ತೆರಳಲು ಅವಕಾಶ ನೀಡದೆ ನೇರವಾಗಿ ಕ್ವಾರಂಟೈನ್‌ಗೆ ಕಳಿಸುವ ಮೂಲಕ ದೊಡ್ಡಬಳ್ಳಾಪುರಕ್ಕೆ ಬಂದೊದಗ ಬಹುದಾಗಿದ್ದ ಬಹುದೊಡ್ಡ ಅಪಾಯವನ್ನು ಕರೊನಾ ವಾರಿಯರ್ಸ್ ತಡೆದಿದ್ದಾರೆ.

ರಾಜ್ಯ ಸರ್ಕಾರ ಲಾಕ್‌ಡೌನ್ ಸಡಿಲಗೊಳಿಸಿ,ಕಾರ್ಮಿಕರು ಅಂತಾರಾಜ್ಯ ಪ್ರಯಾಣಕ್ಕೆ ಅವಕಾಶ ಕೊಟ್ಟ ಹಿನ್ನಲೆ.ಮುಂಬೈನಲ್ಲಿ ಕಳೆದ ಐದು ವರ್ಷಗಳಿಂದ ಮನೆ ಕೆಲಸ ಮಾಡುತ್ತಿದ್ದ ಹೊಸಹಳ್ಳಿ ತಾಂಡ್ಯದ ಆರು ಮಂದಿ,ಮೇ.19ರಂದು ಬಾಗೇಪಲ್ಲಿ ಮೂಲಕ ಸ್ವಗ್ರಾಮಕ್ಕೆ ಬರುವುದನ್ನು ತಿಳಿದ,ಕರೊನಾ ವಾರಿಯರ್ಸ್‌ಗಳಾದ ಘಾಟಿ ಸರ್ಕಾರಿ ಆಸ್ಪತ್ರೆಯ ಡಾ.ಸುಚಿತ್ರ,ಆರೋಗ್ಯ ಸಹಾಯಕಿ ಯಶಸ್ವಿನಿ,ಆಶಾ ಕಾರ್ಯಕರ್ತೆ ಬೇಬಿಬಾಯಿ ನಿರಂತರವಾಗಿ ಅವರ ಜಾಡನ್ನೆ ಕಾದು ಕುಳಿತಿದ್ದು,ತಡರಾತ್ರಿ ಒಂದು ಗಂಟೆಗೆ ಗ್ರಾಮಕ್ಕೆ ಬರುವ ಮುನ್ನವೇ ತಡೆದು, ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಕ್ವಾರಂಟೈನ್‌ಗೆ ಒಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಳಿದಂತೆ ನಗರದ ಸಾರ್ವಜನಿಕ ಆಸ್ಪತ್ರೆಯ ಕರೊನಾವಾರಿಯರ್ ಡಾ.ಮೀನಾ ಇವರು ಕ್ವಾರಂಟೈನ್‌ಗೆ ಒಳಗಾದ ಕೂಡಲೆ,ಇವರ ಗಂಟಲು ದ್ರವ ಪಡೆದು ಪರೀಕ್ಷೆಗೆ ಕಳಿಸಿದ್ದು ಸ್ವ ಗ್ರಾಮಕ್ಕೆ ಹಿಂತಿರುಗುತ್ತಿದ್ದ 6 ಮಂದಿಯಲ್ಲಿ,ಮೂವರು ಮಹಿಳೆಯರಿಗೆ ಕರೊನಾ ಸೋಂಕು ದೃಡಪಟ್ಟಿದೆ.

ಒಂದು ವೇಳೆ ಕರೊನಾ ವಾರಿಯರ್ಸ್ ಸಲ್ಪ ಅಜಾಗರೂಕತೆ ತೋರಿದ್ದರು,ದೊಡ್ಡಬಳ್ಳಾಪುರಕ್ಕೆ ಉಂಟಾಗಬಹುದಾಗಿದ್ದ ಅಪಾಯವನ್ನು ಊಹಿಸಲು ಅಸಾಧ್ಯವಾಗಿತ್ತು ಎನ್ನುತ್ತವೆ ವೈದ್ಯಕೀಯ ಮೂಲಗಳು.

ಮಹಾರಾಷ್ಟ್ರದಿಂದ ಬರುತ್ತಿದ್ದವರ ಬಗ್ಗೆ ನಿಗಾವಹಿಸಿ,ದೊಡ್ಡಬಳ್ಳಾಪುರಕ್ಕೆ ಕರೊನಾ ಹರಡದಂತೆ ಶ್ರಮಿಸಿದ ಕರೊನಾ ವಾರಿಯರ್ಸ್‌ಗಳನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

” ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೊರೊನಾ ಅಂಕಿ-ಅಂಶ “

ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನದಲ್ಲಿ ಐದು ಕೋವಿಡ್-19 ಪ್ರಕರಣಗಳು ದೃಢಪಡುವ ಮೂಲಕ ಕೊರೊನಾ ಮುಕ್ತ ಜಿಲ್ಲೆ ಎನ್ನುವ ಪಟ್ಟಿಯಿಂದ ಹೊರಬಂದಿದೆ.ಇಲ್ಲಿಯವರೆಗೆ ದೃಢ ಪಟ್ಟಿರುವ ಎಲ್ಲಾ ಪ್ರಕರಣಗಳಲ್ಲೂ ಹೊರಗಿನಿಂದ ಬಂದು ಕ್ವಾರಂಟೈನಲ್ಲಿ ಇದ್ದವರೇ ಆಗಿರುವುದು ಸಾರ್ವಜನಕರಲ್ಲಿನ ಆತಂಕವನ್ನು ಕೊಂಚಮಟ್ಟಿಗೆ ದೂರಮಾಡಿದೆ. 

ಹಾಗೆಯೇ ಶುಕ್ರವಾರ ಕೋವಿಡ್-19 ದೃಢಪಟ್ಟಿರುವ ಐದು ಪ್ರಕರಣಗಳಲ್ಲೂ ಮಹಿಳೆಯರೇ ಆಗಿದ್ದಾರೆ.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐವರಲ್ಲಿ ಇಂದು ಕೊರೋನಾ ವೈರಾಣು ಸೋಂಕು ದೃಢಪಟ್ಟಿದ್ದು, ಎಲ್ಲರೂ ಮಹಿಳೆಯರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪಿ-1606, ಪಿ-1607 ಹಾಗೂ ಪಿ-1608, ಮಹಾರಾಷ್ಟ್ರ- ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ನೆಲಮಂಗಲ ತಾಲ್ಲೂಕಿನಲ್ಲಿ ಪಿ-1686, ತೀವ್ರ ಉಸಿರಾಟದ ಸಮಸ್ಯೆ  ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಪಿ-1724, ಇನ್ಫ್ಲೂಯೆನ್ಜಾ ಲೈಕ್ ಇಲ್ನೆಸ್ (ಐಎಲ್ಐ) ತೊಂದರೆಯುಳ್ಳವರಾಗಿದ್ದಾರೆ.

ನಾಲ್ಕು ಕೊರೋನಾ ಸೋಂಕಿತರು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಾಗೂ ನೆಲಮಂಗಲ ತಾಲ್ಲೂಕಿನ ಕೊರೋನಾ ಸೋಂಕಿತ ಮಹಿಳೆ, ತುಮಕೂರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ರಾಜಕೀಯ

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ. ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿಸಿ ಕ್ಯಾಮರಾ ಇಲ್ಲ. Rajanna

[ccc_my_favorite_select_button post_id="104571"]
ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ ಪಾಟೀಲ

ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ

`ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ. MB Patila

[ccc_my_favorite_select_button post_id="104564"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!| Video

ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!|

ಹಾವೇರಿ: ದೇಶ, ಧರ್ಮ, ಗೋಮಾತೆ, ಮಾತೆಯರ ಕುರಿತು ಗೌರವಯುತ ಸಿದ್ದಾಂತ ಹೊಂದಿರುವ ಬಿಜೆಪಿ (BJP)ಯ ಜಿಲ್ಲಾ ಅಧ್ಯಕ್ಷನೋರ್ವ ಮಾತೃ ನಿಂದನೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುರಿತು ಪ್ರತಿಭಟನೆ ವೇಳೆ ಅಸಭ್ಯ ಪದ ಬಳಸಿದ್ದು ಸಾರ್ವಜನಿಕ ವಲಯದಲ್ಲಿ

[ccc_my_favorite_select_button post_id="104539"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!