ಸರ್ಕಾರದ ನೆರವಿಗಾಗಿ ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮನವಿ

ದೊಡ್ಡಬಳ್ಳಾಪುರ : ಮಡಿವಾಳ ಸಮುದಾಯಕ್ಕೆ ಸರ್ಕಾರ ನೀಡುತ್ತಿರುವ 5 ಸಾವಿರ ರೂಗಳ ನೆರವು ಪಡೆಯಲು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡದೇ, ಅಥವಾ ಸಂಘಕ್ಕೆ ಹೊಸದಾಗಿ  ಸದಸ್ಯರಾಗದೇ  ಸೇವಾ ಸಿಂಧು ಮೂಲಕ ಆನ್ ಲೈನ್‌ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮನವಿ ಮಾಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊವಿಡ್-19 ಲಾಕ್‌ಡೌನ್ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಡಿವಾಳ ಸಮುದಾಯದ ಶ್ರಮಿಕರಿಗೆ 5 ಸಾವಿರ ರೂ ನೆರವು ನೀಡುತ್ತಿರುವುದು ಅಭಿನಂದನೀಯವಾಗಿದೆ.ಆದರೆ ಈ ನೆರವು ಕೊಡಿಸುತ್ತೇವೆಂದು ಕೆಲವು ಮಧ್ಯವರ್ತಿಗಳು, ಸಮುದಾಯದವರಿಂದ 500 ರಿಂದ 800 ರೂಗಳ ಹಣ ಪಡೆಯುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಕೆಲವರು ಸಂಘದ ಸದಸ್ಯತ್ವ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬೇಕಿಲ್ಲ ಹಾಗೂ ಸಂಘದ ಸದಸ್ಯತ್ವನ್ನು ಪಡೆಯಲು ಇದು ಸಕಾಲವಲ್ಲ. ಮಡಿವಾಳ ಸಂಘಟನೆಗಳು ಸದಸ್ಯತ್ವಕ್ಕಾಗಿ ಒತ್ತಾಯಿಸದೇ, ಸಮುದಾಯಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ನೆರವಾಗಬೇಕಿದೆ.ರಾಜ್ಯದಲ್ಲಿ 12 ಲಕ್ಷ ಮಡಿವಾಳರಿದ್ದು,ಇದರಲ್ಲಿ 4 ಲಕ್ಷ ಮಂದಿ ಕುಲಕಸುಬು ಮಾಡುತ್ತಿದ್ದಾರೆ. ಕನಿಷ್ಟ 2.5ಲಕ್ಷ ಮಂದಿಗಾದರೂ ನೀಡುವಂತೆ ಹಾಗೂ ಅಂಗಡಿ ಪರವಾನಗಿ ಕಡ್ಡಾಯ ನಿಯಮ ಮಾಡಬಾರದು ಎಂದು  ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ.ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಮನವಿ ಮಾಡಲಾಗಿದ್ದು, ಇದು ಈಡೇರುವ ಭರವಸೆಯಿದೆ. ಅಂತೆಯೇ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮಕ್ಕೆ 25 ಕೋಟಿ ರೂ ಮೀಸಲಿಟ್ಟಿದ್ದು,ಈ ಅನುದಾನಗಳನ್ನು ತ್ವರಿತವಾಗಿ ಸಮುದಾಯದ ಅರ್ಹರಿಗೆ ನೀಡುವಂತೆ ಕೋರಲಾಗಿದ್ದು, ವಿವಿಧ ಪಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಹೆಚ್.ಆರ್.ಮುನಿಶಾಮಯ್ಯ ಮಾತನಾಡಿ, ಸರ್ಕಾರದ ನೆರವಿಗಾಗಿ ಸೂಕ್ತ ದಾಖಲೆಗಳೊಂದಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಓಗಳು ಅರ್ಹರನ್ನು ಗುರುತಿಸಬೇಕಿದೆ. ತಾಲೂಕಿನಲ್ಲಿ 9 ಸಾವಿರ ಮಡಿವಾಳ ಸಮುದಾಯದವರಿದ್ದಾರೆ.250 ದಿನಸಿ ಕಿಟ್‌ಗಳನ್ನು ಮೊದಲ ಹಂತದಲ್ಲಿ ವಿತರಿಸಲಾಗುವುದು ಎಂದರು. 

ಸಭೆಯಲ್ಲಿ ರಾಜ್ಯ ಮಡಿವಾಳ ಸಂಘದ ಉಪಾಧ್ಯಕ್ಷ ರಾಜಣ್ಣ,ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಉಪಾಧ್ಯಕ್ಷ ವೆಂಕಟಾಚಲಯ್ಯ, ಗೌರವ ಅಧ್ಯಕ್ಷ ದೊಡ್ಡರಂಗಯ್ಯ,ಖಜಾಂಚಿ ನರಸಿಂಹಮೂರ್ತಿ,ಕಾರ್ಯದರ್ಶಿ ಗಂಗಾಧರ್ ಹಾಜರಿದ್ದರು.

ರಾಜಕೀಯ

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್.ಅಶೋಕ

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್.ಅಶೋಕ

ಬೆಂಗಳೂರನ್ನು ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು R Ashoka

[ccc_my_favorite_select_button post_id="107127"]
ಡಿಕೆ ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಡಿಕೆ ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಲಯದಲ್ಲಿ

[ccc_my_favorite_select_button post_id="107130"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!