ಗ್ರಾಮಗಳಲ್ಲಿ ಕರೊನಾ ವೈರಸ್ ಹರಡದಂತೆ ಜಾಗೃತಿ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ

ದೊಡ್ಡಬಳ್ಳಾಪುರ: ಕರೊನಾ ವೈರಸ್ ಸೋಂಕು ಗ್ರಾಮಗಳಿಗೆ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಆಶಾ ಕಾರ್ಯಕರ್ತೆಯರ ಕೆಲಸ ಶ್ಲಾಘನೀಯವಾಗಿದೆ ಎಂದು ಸಹಕಾರ ಸಚಿವ ಎಸ್. ಟಿ.ಸೋಮಶೇಖರ್ ಹೇಳಿದರು.

ಅವರು ನಗರದ ಡಾ.ಬಾಬು ಜಗಜೀವನ್ರಾಂ ಭವನದಲ್ಲಿ ಶನಿವಾರ ಬಮೂಲ್ ನಿಂದ ಆಶಾ ಕಾರ್ಯಕರ್ತೆಯರಿಗೆ ಸಹಾಯದನ ಚೆಕ್ ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕಡಿಮೆಯೇ ಇತ್ತು. ಆದರೆ ಹೊರ ರಾಜ್ಯಗಳಿಂದ ಬಂದಿರುವ ಕಾರ್ಮಿಕರು ಸೇರಿದಂತೆ ಇತರೆ ಜನರಿಂದಾಗಿಯೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಗ್ರಾಮಗಳಿಗೆ ಯಾರೇ ಹೊರಗಿನಿಂದ ಬಂದರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನಲ್ಲಿ ಇರುವಂತೆ ತಿಳಿಸಿ. ಅಕ್ರಮವಾಗಿ ಗ್ರಾಮಗಳಿಗೆ ಬರುವವರ ಮೇಲೆ ಸದಾ ನಿಗವಹಿಸಬೇಕು. ಮೇ.18ರ ನಂತರ ರಾಜ್ಯದಲ್ಲಿ ಕಂಡು ಬಂದಿರುವ ಕರೊನಾ ಪ್ರಕರಣಗಳು ಕ್ವಾರಂಟೈನಲ್ಲಿ ಇದ್ದವರಲ್ಲಿಯೇ ಕಂಡು ಬಂದಿದೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ. ಆದರೆ ಅನಾವಶ್ಯಕವಾಗಿ ಹೊರಗೆ ತಿರುಗಾಡುವುದನ್ನು ಕಡಿಮೆ ಮಾಡಬೇಕು. ಸರ್ಕಾರಿ ಕಚೇರಿಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ಎಲ್ಲಾ ಕಡೆಯಲ್ಲೂ ಅಂತರವನ್ನು ಕಾಪಾಡುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಬಮೂಲ್ ಹಾಗೂ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕರೊನಾ ವೈರಸ್ ಸೋಂಕು ಹರಡದಂತೆ ಆಶಾ ಕಾರ್ಯಕರ್ತೆಯರು ವಹಿಸಿದ ಎಚ್ಚರವೇ ರೈತರು ನೆಮ್ಮದಿಯಾಗಿ ಇರಲು ಮತ್ತು ಹಾಲು ಉತ್ಪಾದನೆಯು ಕುಸಿತವಾಗದಂತೆ ನಡೆಯಲು ಕಾರಣವಾಗಿದೆ. ಹೀಗಾಗಿ ಬಮೂಲ್ ವತಿಯಿಂದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರಿಗೆ ರೂ 3,000 ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು  ಶಾಸಕ ಟಿ.ವೆಂಕಟರಮಣಯ್ಯ ವಹಿಸಿದ್ದರು. ಸಂಸತ್ ಸದಸ್ಯ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ,ಬಮೂಲ್ ವ್ಯವಸ್ಥಾಪಕ ಡಾ.ಕೆ.ಸ್ವಾಮಿ, ನಿರ್ದೇಶಕ ಹರೀಶ್ ಕುಮಾರ್,ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಮುಖಂಡರಾದ ಬಿ.ಎಚ್.ಕೆಂಪಣ್ಣ ಮತ್ತಿತರರಿದ್ದರು.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ.. ಅಂತಿಮ ಕಣದಲ್ಲಿ ಇಬ್ಬರು ಅಭ್ಯರ್ಥಿಗಳು

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ.. ಅಂತಿಮ ಕಣದಲ್ಲಿ ಇಬ್ಬರು ಅಭ್ಯರ್ಥಿಗಳು

ದೊಡ್ಡಬಳ್ಳಾಪುರ: ನಗರಸಭೆಯ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ನ ಉಪ ಚುನಾವಣೆಗೆ (By-election) ಒಟ್ಟು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

[ccc_my_favorite_select_button post_id="117305"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಗಿಳಿ ರಕ್ಷಣೆಗೆ ಹೋದ ಯುವಕ ಹೈಟೆನ್ಸನ್ ವೈರ್‌ ತಗುಲಿ ದುರ್ಮರಣ

ಗಿಳಿ ರಕ್ಷಣೆಗೆ ಹೋದ ಯುವಕ ಹೈಟೆನ್ಸನ್ ವೈರ್‌ ತಗುಲಿ ದುರ್ಮರಣ

ಗಿಳಿ (Parrot) ರಕ್ಷಿಸಲು ಹೋದ ಯುವಕನೋರ್ವ ಹೈಟೆನ್ಸನ್ ವೈ‌ರ್ ಕಂಬದ ಕರೆಂಟ್ ಶಾಕ್ ತಗುಲಿ (high-voltage wire) ಸಾವನ್ನಪ್ಪಿರುವ ಘಟನೆ ಗಿರಿನಗರದ ಅಪಾರ್ಟ್‌ಮೆಂಟ್ ಬಳಿ ನಡೆದಿದೆ.

[ccc_my_favorite_select_button post_id="117316"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]