ಸರ್ಕಾರದ ನೆರವಿಗಾಗಿ ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮನವಿ

ದೊಡ್ಡಬಳ್ಳಾಪುರ : ಮಡಿವಾಳ ಸಮುದಾಯಕ್ಕೆ ಸರ್ಕಾರ ನೀಡುತ್ತಿರುವ 5 ಸಾವಿರ ರೂಗಳ ನೆರವು ಪಡೆಯಲು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡದೇ, ಅಥವಾ ಸಂಘಕ್ಕೆ ಹೊಸದಾಗಿ  ಸದಸ್ಯರಾಗದೇ  ಸೇವಾ ಸಿಂಧು ಮೂಲಕ ಆನ್ ಲೈನ್‌ನಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮನವಿ ಮಾಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊವಿಡ್-19 ಲಾಕ್‌ಡೌನ್ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಡಿವಾಳ ಸಮುದಾಯದ ಶ್ರಮಿಕರಿಗೆ 5 ಸಾವಿರ ರೂ ನೆರವು ನೀಡುತ್ತಿರುವುದು ಅಭಿನಂದನೀಯವಾಗಿದೆ.ಆದರೆ ಈ ನೆರವು ಕೊಡಿಸುತ್ತೇವೆಂದು ಕೆಲವು ಮಧ್ಯವರ್ತಿಗಳು, ಸಮುದಾಯದವರಿಂದ 500 ರಿಂದ 800 ರೂಗಳ ಹಣ ಪಡೆಯುತ್ತಿರುವ ವಿಚಾರ ಗಮನಕ್ಕೆ ಬಂದಿದೆ. ಕೆಲವರು ಸಂಘದ ಸದಸ್ಯತ್ವ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬೇಕಿಲ್ಲ ಹಾಗೂ ಸಂಘದ ಸದಸ್ಯತ್ವನ್ನು ಪಡೆಯಲು ಇದು ಸಕಾಲವಲ್ಲ. ಮಡಿವಾಳ ಸಂಘಟನೆಗಳು ಸದಸ್ಯತ್ವಕ್ಕಾಗಿ ಒತ್ತಾಯಿಸದೇ, ಸಮುದಾಯಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ನೆರವಾಗಬೇಕಿದೆ.ರಾಜ್ಯದಲ್ಲಿ 12 ಲಕ್ಷ ಮಡಿವಾಳರಿದ್ದು,ಇದರಲ್ಲಿ 4 ಲಕ್ಷ ಮಂದಿ ಕುಲಕಸುಬು ಮಾಡುತ್ತಿದ್ದಾರೆ. ಕನಿಷ್ಟ 2.5ಲಕ್ಷ ಮಂದಿಗಾದರೂ ನೀಡುವಂತೆ ಹಾಗೂ ಅಂಗಡಿ ಪರವಾನಗಿ ಕಡ್ಡಾಯ ನಿಯಮ ಮಾಡಬಾರದು ಎಂದು  ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ.ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಮನವಿ ಮಾಡಲಾಗಿದ್ದು, ಇದು ಈಡೇರುವ ಭರವಸೆಯಿದೆ. ಅಂತೆಯೇ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮಕ್ಕೆ 25 ಕೋಟಿ ರೂ ಮೀಸಲಿಟ್ಟಿದ್ದು,ಈ ಅನುದಾನಗಳನ್ನು ತ್ವರಿತವಾಗಿ ಸಮುದಾಯದ ಅರ್ಹರಿಗೆ ನೀಡುವಂತೆ ಕೋರಲಾಗಿದ್ದು, ವಿವಿಧ ಪಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಹೆಚ್.ಆರ್.ಮುನಿಶಾಮಯ್ಯ ಮಾತನಾಡಿ, ಸರ್ಕಾರದ ನೆರವಿಗಾಗಿ ಸೂಕ್ತ ದಾಖಲೆಗಳೊಂದಿಗೆ ನಿಯಮಾನುಸಾರ ಅರ್ಜಿ ಸಲ್ಲಿಸಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಓಗಳು ಅರ್ಹರನ್ನು ಗುರುತಿಸಬೇಕಿದೆ. ತಾಲೂಕಿನಲ್ಲಿ 9 ಸಾವಿರ ಮಡಿವಾಳ ಸಮುದಾಯದವರಿದ್ದಾರೆ.250 ದಿನಸಿ ಕಿಟ್‌ಗಳನ್ನು ಮೊದಲ ಹಂತದಲ್ಲಿ ವಿತರಿಸಲಾಗುವುದು ಎಂದರು. 

ಸಭೆಯಲ್ಲಿ ರಾಜ್ಯ ಮಡಿವಾಳ ಸಂಘದ ಉಪಾಧ್ಯಕ್ಷ ರಾಜಣ್ಣ,ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಉಪಾಧ್ಯಕ್ಷ ವೆಂಕಟಾಚಲಯ್ಯ, ಗೌರವ ಅಧ್ಯಕ್ಷ ದೊಡ್ಡರಂಗಯ್ಯ,ಖಜಾಂಚಿ ನರಸಿಂಹಮೂರ್ತಿ,ಕಾರ್ಯದರ್ಶಿ ಗಂಗಾಧರ್ ಹಾಜರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!