ತಿರುಪತಿ ಆಸ್ತಿ ಮಾರಲು ಮುಂದಾದ ಆಂಧ್ರ ಸಿಎಂ ಜಗನ್ ವಿರುದ್ಧ ಹಿಂದು ಸಂಘಟನೆಗಳು ಕಿಡಿ

ದೊಡ್ಡಬಳ್ಳಾಪುರ : ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ತಿರುಪತಿಯ ಆಸ್ತಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಮಿಳುನಾಡಿನ ವಿವಿಧ ಸ್ಥಳಗಳಲ್ಲಿರುವ ಮನೆ ಮತ್ತು ಕೃಷಿ ಭೂಮಿ ಸೇರಿದಂತೆ ಹಲವು ಸ್ಥಿರ ಆಸ್ತಿಗಳನ್ನು ಹರಾಜಿಗಿಡಲು ನಿರ್ಧರಿಸಿದೆ.ಇದರಿಂದಾಗಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ‌.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು. ತಮ್ಮ ರಾಜ್ಯಗಳನ್ನು ಅಲ್ಪಸಂಖ್ಯಾತರ ರಾಜ್ಯಗಳನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಆರೋಪಿಸಿದ್ದಾರೆ.

ದೇವಸ್ಥಾನಗಳ ಆಸ್ತಿ ಮಾರಾಟದ ಜತೆಗೆ ರಾಜ್ಯದಲ್ಲಿ ಹಿಂದುತ್ವಕ್ಕೆ ಹಾನಿ ಉಂಟುಮಾಡುವುದು ಸರಕಾರದ ಉದ್ದೇಶವಾಗಿರುವಂತಿದೆ. ಸರಕಾರವು ಇಂತಹ ನಿರ್ಧಾರ ಕೈಗೊಳ್ಳುವ ಮೂಲಕ ಹಿಂದೂಗಳ ಭಾವನೆ ಜತೆ ಚೆಲ್ಲಾಟವಾಡುತ್ತಿದೆ. ರಾಜ್ಯ ಸರಕಾರ ಈ ನಿರ್ಧಾರಕ್ಕೆ ತಡೆ ನೀಡಬೇಕು. ಇಲ್ಲದಿದ್ದರೆ ಹಿಂದೂಗಳ ಪ್ರತಿಭಟನೆ, ಆಕ್ರೋಶ, ಅಸಹನೆ ಎದುರಿಸಬೇಕಾಗು­ತ್ತದೆ,ಎನ್ನುವ ಸಂದೇಶಗಳು ಹರಿದಾಡುತ್ತಿವೆ.

” ಆದೇಶಕ್ಕೆ ತಡೆ “

ಆಸ್ತಿಗಳ ಹರಾಜಿಗೆ ಮುಂದಾಗಿದ್ದ ಟಿಟಿಡಿ ನಿರ್ಧಾರ ರಾಜಕೀಯ ಸ್ವರೂಪ ಪಡೆಯುತ್ತಿರುವುದು ಹಾಗೂ ಹಿಂದುಗಳ ಆಕ್ರೋಶಕ್ಕೆ ಒಳಗಾಗುತ್ತಿರುವುದರಿಂದ ಎಚ್ಚೆತ್ತ ಸರಕಾರ, ಈಗ ಆಸ್ತಿ ಹರಾಜಿಗೆ ತಡೆ ನೀಡಿದೆ.

ಹಿಂದೂ ವಿರೋಧಿ  ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ – ಮಧು ಬೇಗಲಿ

ಹಿಂದೂ ದೇಗುಲಗಳನ್ನು ಇಂತಹ ರಾಜಕಾರಣಿಗಳ  ಕಪಿಮುಷ್ಠಿಯಿಂದ  ನಾವು ರಕ್ಷಿಸಬೇಕಿದೆ.ಕೋಟ್ಯಾಂತರ ಹಿಂದೂ ಜನರ ಭಾವನೆಗಳಿಗೆ ಅಪಮಾನ ಎಸಗುತ್ತಿರುವ ಹಿಂದೂ ವಿರೋಧಿ ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ ಎಂದು ಎಂದು ಭಜರಂಗದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ್ ಮಧು ಬೇಗಲಿ ತಿಳಿಸಿದ್ದಾರೆ.

ಹಿಂದು ವಿರೋಧಿ ನೀತಿ ಖಂಡನೀಯ – ದೊಡ್ಡತುಮಕೂರು ಆ‌ನಂದ್

ಹಿಂದು ಭಕ್ತಾಧಿಗಳ ಭಾವನೆಗಳಿಗೆ ನೋವುಂಟಾಗದಂತೆ ಮುನ್ನೆಚ್ಚರಿಕೆ ವಹಿಸದೆ, ಟಿಟಿಡಿ ಆಸ್ತಿಗಳು ಅಥವಾ ಬೇರೇ ಯಾವುದೇ ಆಸ್ತಿ ಪಾಸ್ತಿಗಳ ಮಾರಾಟ ಮಾಡಲು ಮುಂದಾಗಿದ್ದು ಹಿಂದು ವಿರೋಧಿ ನೀತಿಯಾಗಿದ್ದು,ವ್ಯವಸ್ಥಿತ ಶಡ್ಯಂತ್ರ ಎಂದು ಹಿಂದು ಜಾಗರಣ ವೇದಿಗೆ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆ‌ನಂದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

( ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!