ಶಾಸಕ ಟಿ.ವೆಂಕಟರಮಣಯ್ಯ ವಿರುದ್ದ ವಿಧಾನಸಭಾ ಅಧ್ಯಕ್ಷರಿಗೆ ದೂರು – ರವಿಕೃಷ್ಣಾರೆಡ್ಡಿ

ದೊಡ್ಡಬಳ್ಳಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಸಾರ್ವಜನಿಕರೊಂದಿಗೆ ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು.ಇತ್ತೀಚೆಗೆ ಸಚಿವ ಮಾಧುಸ್ವಾಮಿ, ಶಾಸಕ ಟಿ.ವೆಂಕಟರಮಣಯ್ಯ ಅವರು ಮಾತನಾಡಿರುವ ರೀತಿ ಸರಿಯಾದ ಕ್ರಮ ಅಲ್ಲ ಎಂದು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು.

ಅವರು ನಗರದ ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿದೇಶದಿಂದ ಬರುವವರನ್ನು ದೊಡ್ಡಬಳ್ಳಾಪುರದಲ್ಲಿ ಕ್ವಾರಂಟೈನ್‌ ಮಾಡುವ ವಿಚಾರದಲ್ಲಿ ವಕೀಲರಾದ ಜಿ.ವೆಂಕಟೇಶ್‌ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ಜನರಿಗೆ ಒಳಿತಾಗುವಂತೆ ಮಾಡಿದ್ದಾರೆ.ಆದರೆ ಈ ವಿಚಾರದಲ್ಲಿ ಕ್ಷೇತ್ರದ ಶಾಸಕರು ವೆಂಕಟೇಶ್‌ ಅವರನ್ನು ಅವಾಚ್ಚಶಬ್ದಗಳಿಂದ ನಿಂದಿಸಿ, ಪ್ರಾಣಬೆದರಿಕೆ ಹಾಕಿದ್ದಾರೆ. ಈ ವಿಚಾರವಾಗಿ ವಿಧಾನ ಸಭಾ ಅಧ್ಯಕ್ಷರಿಗೆ ದೂರು ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.ಜನ ಸಾಮಾನ್ಯರ ಹಕ್ಕುಗಳನ್ನು ರಕ್ಷಿಸಬೇಕಾದವರೇ ಅಗೌರವ ರೀತಿಯಲ್ಲಿ ನಡೆದುಕೊಂಡಿದ್ದಾರೆ.ವಿಧಾನಸಭಾ ಅಧ್ಯಕ್ಷರು ಕ್ರಮ ಕೈಗೊಳ್ಳದಿದ್ದರೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗುವುದು ಎಂದರು.

ವಕೀಲರಾದ ಜಿ.ವೆಂಕಟೇಶ್‌ ವಿರುದ್ದ ಸಾಕಷ್ಟು ಜನ ಪೊಲೀಸ್‌ ಠಾಣೆಗೆ ದೂರುಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದೆ. ಈ ದೂರುಗಳು ಗಂಭೀರವಾಗಿದ್ದರೆ ವೆಂಕಟೇಶ್‌ ವಿರುದ್ಧವಾಗಿ ಅನ್ಯಾಯಕ್ಕೆ ಒಳಗಾದವರ ಪರವಾಗಿಯು ನಿಲ್ಲಲಾಗುವುದು. ವಕೀಲರಾದ ಜಿ.ವೆಂಕಟೇಶ್‌ ಅವರಿಗೆ ನಮ್ಮ ಪಕ್ಷದಲ್ಲಿ ಇನ್ನು ಯಾವುದೇ ಹುದ್ದೆಯನ್ನು ನೀಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಅಬ್ದುಲ್‌ ಸುಬಾನ್‌,ಆನಂದ್‌, ವಕೀಲ ಜಿ.ವೆಂಕಟೇಶ್‌ ಇದ್ದರು

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!