ಕರೊನಾ ನಡುವೆಯೇ ಮಿಡತೆ ಕೀಟಗಳ ಆತಂಕ

ಕಲಬುರಗಿ : ಮಹಾರಾಷ್ಟ್ರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಲಸೆಗಾರ ಬೆಳೆನಾಶಕ ಮರುಭೂಮಿ ಮಿಡತೆ ಕೀಟ  (Desert Locust) ಗಳ ಹಾವಳಿ ಕಂಡುಬಂದಿದ್ದು, ಯಾವುದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯಲ್ಲಿ  ಈ ಮಿಡತೆ ಕೀಟಗಳು ಬರುವ ಸಂಭವ ಇರುತ್ತದೆ. ಈ ಮಿಡತೆ ಕೀಟಗಳ ಹಾವಳಿ ಹತೋಟಿಗಾಗಿ ಜಿಲ್ಲೆಯ  ರೈತರು ವಿವಿಧ ಹಂತದಲ್ಲಿ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ ಅವರು ಸಲಹೆ ನೀಡಿದ್ದಾರೆ. 

ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಕಾಲದ ಬೆಳೆಗಳು, ಕಟಾವು ಹಂತದಲ್ಲಿರುವ ತೋಟಗಾರಿಕೆ ಹಾಗೂ ಅರಣ್ಯೀಕರಣದ ಗಿಡಮರಗಳು ಈ ಮಿಡತೆ ಕೀಟಗಳಿಂದ ಹಾನಿಗೊಳಗಾಗಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಿಡತೆ ಕೀಟಗಳ ನಿರ್ವಹಣಾ ಕ್ರಮಗಳು ಇಂತಿವೆ.  

ತತ್ತಿಗಳನ್ನು ನಾಶಪಡಿಸುವುದು: ಮಿಡತೆಗಳು ತತ್ತಿಗಳಿರಿಸಿದ ಜಾಗವನ್ನು ಗುರುತಿಸಿ ಅವುಗಳ ಸುತ್ತಲು ಕಂದಕ (2 ಅಡಿ ಅಗಲ  ಮತ್ತು 2 ಅಡಿ ಆಳ) ವನ್ನು ನಿರ್ಮಿಸಿ ತತ್ತಿಯಿಂದ ಬರುವ ಮರಿಗಳನ್ನು ಆ ಕಂದಕಗಳಲ್ಲಿ ಬಿಡುವಂತೆ ಮಾಡುವುದು. ಅಲ್ಲದೆ ತತ್ತಿಗಳನ್ನು ನಾಶಪಡಿಸಲು ಮೇಲಿಂದ ಮೇಲೆ ಉಳುಮೆ ಮಾಡಬೇಕು.  ರೈತರು ಮಿಡತೆ ಕಾಣಿಸಿಕೊಂಡಾಗ ತಗಡಿನ ಡಬ್ಬಿ, ಡ್ರಮ್ಮು, ತಟ್ಟೆ ಇವುಗಳನ್ನು ಬಾರಿಸುವ ಮೂಲಕ ಭಾರಿ ಶಬ್ದವನ್ನು ಹುಟ್ಟಿಸುವುದು. ರೇಡಿಯೋ ಅಥವಾ ಎಲೆಕ್ಟ್ರಾನಿಕ್ ಸೌಂಡ್‍ಗಳನ್ನು ಹಚ್ಚುವುದು. ಇದರಿಂದ ಮಿಡತೆ ತಂಡಗಳು ಭೂಮಿಯ ಮೇಲಿನ ಬೆಳೆಗಳಿಗೆ ಬರುವುದಿಲ್ಲ. 

ಬೇವು ಆಧಾರಿತ ಸಿಂಪರಣೆ ಮಾಡುವುದು. (0.15% ಇ.ಸಿ) 45 ಮಿ.ಲಿ. ಅನ್ನು 15 ಲೀ. ನೀರಿನಲ್ಲಿ ಬೆರೆಸಿ ಹಾಲಿ ಬೆಳೆಗಳಿಗೆ ಹಾಗೂ ಸುತ್ತಮುತ್ತ ಗಿಡಗಳಿಗೆ ಸಿಂಪಡಿಸುವುದು. ತೇವಾಂಶ ಹೊಂದಿದ ಮರಳು ಮಣ್ಣಿನಲ್ಲಿ ಮಿಡತೆಗಳು ತತ್ತಿ ಇಟ್ಟಿರುವ ಜಾಗಗಳನ್ನು ಗುರುತಿಸಿ, ರಾಸಾಯನಿಕಗಳನ್ನು ಸಿಂಪಡಿಸಿ ತತ್ತಿ ಹಂತದಲ್ಲಿ ನಾಶಪಡಿಸುವುದು. ಬೆಳೆದು ನಿಂತ ಬೆಳೆಗೆ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ. ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು.

ರೈತರು ಕಡ್ಡಾಯವಾಗಿ ಮೈ ತುಂಬಾ ಬಟ್ಟೆ ಧರಿಸಿ, ಮುಖಕ್ಕೆ ಮಾಸ್ಕ್, ಕೈ ಚೀಲಗಳು, ಟೋಪಿ ಹಾಗೂ ಕನ್ನಡಕವನ್ನು ಧರಿಸಿ ಬೆಳಗಿನ 7 ರಿಂದ 10 ಗಂಟೆಯೊಳಗಾಗಿ 500 ಮಿ.ಲಿ. ಡಿ.ಡಿ.ವಿ.ಪಿ. 76 % ಇ.ಸಿ. ಯನ್ನು 1500 ಲೀ. ನೀರಿಗೆ ಬೇರೆಸಿ ಅಥವಾ 100 ಕೆ.ಜಿ. ಮರಳು ಮಣ್ಣಿನ ಜೊತೆ ಬೆರೆಸಿ ಎರಚುವುದು. ಈ ಪುಡಿಯನ್ನು ಚೆಲ್ಲಿದ ನಂತರ ಕೂಡಲೇ ಹೊಲದಿಂದ ಹೊರಬರುವುದು. ಬಲಿಯುತ್ತಿರುವ ಮಿಡತೆಗಳು ಹೊಲದಲ್ಲಿ ಓಡಾಡುವಾಗ ಒಣಹುಲ್ಲು, ಕಸಕಡ್ಡಿಗಳಿಗೆ ಬೆಂಕಿ ಹಚ್ಚಿ ಸುಡುವುದು. ಸಾಗುವಳಿ ರಹಿತ ಜಮೀನಿನಲ್ಲಿ ಮಿಡತೆಗಳು ಗುಂಪು-ಗುಂಪಾಗಿ ಹರಡಿದಾಗ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ, ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು ಅಥವಾ ಮೆಲಾಥಿಯಾ 96% ಯು.ಎಲ್.ವಿ.  1 ಲೀ. ಪ್ರತಿ ಹೇಕ್ಟರ್‍ಗೆ ಯು.ಎಲ್.ವಿ. ಸಿಂಪರಣೆ ಯಂತ್ರದ ಮೂಲಕ ನೇರವಾಗಿ ಮಿಡತೆಗಳ ಮೇಲೆ ಸಿಂಪಡಿಸುವುದು.

ಉತ್ತರ ಭಾರತದಲ್ಲಿನ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಮಿಡತೆಯ ಹಾವಳಿ ಉಲ್ಬಣವಾಗಿದ್ದು, ಪೂರ್ವ ಮಹಾರಾಷ್ಟ್ರದ ಭಾಗದಲ್ಲಿಯೂ ಹರಡುತ್ತಿದೆ. ಪಂಜಾಬ್ ಹಾಗೂ ಗುಜರಾತ್ ರೈತರಿಗೂ ಕೂಡ ಮಿಡತೆಗಳ ಹಾವಳಿ ಬಗ್ಗೆ ಎಚ್ಚರಿಸಲಾಗಿದೆ. ಈ ಮಿಡತೆಗಳು ಅಲೆ ಅಲೆಯಾಗಿ ಗುಂಪಿನಲ್ಲಿ ಒಂದು ದಿನದಲ್ಲಿ 150 ಕಿ.ಮೀ. ದೂರ ಗಾಳಿಯ ದಿಕ್ಕಿನಲ್ಲಿ ಹಾರಬಲ್ಲವು. ಒಂದು ಮಿಡತೆಯು ತನ್ನಷ್ಟೆ ತೂಕದ ಆಹಾರವನ್ನು ತಿನ್ನಬಲ್ಲವು. ಎಫ್.ಪಿ.ಓ. ವರದಿ ಪ್ರಕಾರ ಒಂದು ಚ.ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡ ಈ ಮಿಡತೆಗಳ ಸೈನ್ಯ (ಸುಮಾರು 40 ಮಿಲಿಯನ್) ಒಂದು ದಿನದಲ್ಲಿ 35,000 ಸಾವಿರ ಜನರು ತಿನ್ನುವಷ್ಟು ಅಹಾರವನ್ನು ತಿನ್ನಬಲ್ಲವು. 

ಈ ಮಿಡತೆಗಳು ಬಹುಭಕ್ಷಕ ಕೀಟಗಳಾಗಿದ್ದು, ಯಾವುದೇ ಗಿಡದ ಅಥವಾ ಬೆಳೆಯ ಎಲೆಗಳು ಹೂ, ಹಣ್ಣು, ಬೀಜ, ಮರದ ತೊಗಟೆ ಹಾಗೂ ಬೆಳೆಯ ಕುಡಿಗಳನ್ನು ನಿರ್ದಾಕ್ಷಿಣ್ಯವಾಗಿ ಭಕ್ಷಿಸುತ್ತವೆ. ಪ್ರಪಂಚದಲ್ಲಿ ಮಿಡತೆಗಳಲ್ಲಿ 10 ಪ್ರಬೇದಗಳಿದು,್ದ ಭಾರತದಲ್ಲಿ ನಾಲ್ಕು ಪ್ರಭೇದಗಳಿರುತ್ತದೆ. ಹೆಣ್ಣು ಮಿಡತೆಯು ತೇವಾಂಶ ಹೊಂದಿರುವ ಮರಳು ಮಿಶ್ರಿತ ಮಣ್ಣಿನಲ್ಲಿ ತನ್ನ ಜೀವಾವಧಿಯಲ್ಲಿ ವಾರಕ್ಕೊಮ್ಮೆ 1000 ತತ್ತಿಗಳನ್ನು ಪ್ರತಿ ಚದುರ ಅಡಿಗೆ ಇಡುತ್ತಿದ್ದು, 3 ಸಲ ಈ ಆವೃತ್ತಿ ಇರುತ್ತದೆ. ಪ್ರಭುದ್ಧತೆ ಮಿಡತೆಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ 12-16 ಕಿ. ಮೀ. ವೇಗದಲ್ಲಿ ಹಾರುತ್ತವೆ.

ಮಿಡತೆಗಳು ಕಡಿಮೆ ಸಂಖ್ಯೆಯಲ್ಲಿದ್ದಾಗ ಅಷ್ಟೇನು ಹಾನಿ ಮಾಡುವುದಿಲ್ಲ. ಆದರೆ ಅನೂಕೂಲಕರ ಹವಾಮಾನ ಸಂದರ್ಭದಲ್ಲಿ ಅಂದರೆ ಬೇಸಿಗೆ ನಡುವೆ ಸರಣಿ ಮಳೆಗಳು ಬಂದಾಗ ತೇವಾಂಶವುಳ್ಳ ಪರಿಸರ ಇವುಗಳಿಗೆ ಹುಟ್ಟಿಕೊಳ್ಳಲು ಪೂರಕ ಪರಿಸ್ಥಿತಿ ಎನಿಸುತ್ತದೆ.  ಪ್ರಸ್ತುತ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಾನಾ ಬಗೆಯ ಚಂಡಮಾರುತಗಳು ಈ ಮಿಡತೆಗಳ ಹುಟ್ಟಿಗೆ ಪೂರಕವಾದ ವಾತಾವರಣ ಸೃಷ್ಟಿಸಿವೆ ಎನ್ನುವುದು ತಜ್ಞರ ಅಭಿಪ್ರಾಯ. ಈ ಸಂದರ್ಭದಲ್ಲಿನ ಅಪರಿಮಿತ ಸಂಖ್ಯೆಯಲ್ಲಿ ಹುಟ್ಟಿಕೊಂಡು ತಾವು ಹುಟ್ಟಿಕೊಂಡ ಪ್ರದೇಶದಿಂದ ಕೋಟ್ಯಾಂತರ ಸಂಖ್ಯೆಯಲ್ಲಿ ಚಕ್ರವಾಗಿ ಹರಡುತ್ತಾ ಕೆಳಗಿಳಿದು ಹೊಲದಲ್ಲಿರುವ ಬೆಳೆಗಳನ್ನು ಕ್ಷಣಾರ್ಧದಲ್ಲಿ  ತಿಂದು ದ್ವಂಸ ಮಾಡುತ್ತಾ ಅಲ್ಲಿಯೇ ಸಂತ್ತಾನೋತ್ಪತ್ತಿ ಮಾಡಿ ಮತ್ತಷ್ಟು ಸಂಖ್ಯೆಯಲ್ಲಿ ಬೆಳೆಯುತ್ತಾ ಹೋಗುತ್ತವೆ.

ರಾಜಕೀಯ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಬಿಜೆಪಿ-ಜೆಡಿಎಸ್ ಮೈತ್ರಿ: ಪಕ್ಷ ಉಳಿಸಲು ಹೆಚ್.ಡಿ. ದೇವೇಗೌಡರ ತೀಕ್ಷ್ಣ ಸಂದೇಶ

ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ (BJP), ಜೆಡಿಎಸ್ (JDS) ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ (H.D.

[ccc_my_favorite_select_button post_id="117875"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಪಘಾತ: 4 ಯುವಕರ ಸಾವು ಪ್ರಕರಣ.. ಸಿಎಂ ಪರಿಹಾರ ಘೋಷಣೆ

ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117854"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!