ಕರೊನಾ ನಡುವೆಯೇ ಮಿಡತೆ ಕೀಟಗಳ ಆತಂಕ

ಕಲಬುರಗಿ : ಮಹಾರಾಷ್ಟ್ರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಲಸೆಗಾರ ಬೆಳೆನಾಶಕ ಮರುಭೂಮಿ ಮಿಡತೆ ಕೀಟ  (Desert Locust) ಗಳ ಹಾವಳಿ ಕಂಡುಬಂದಿದ್ದು, ಯಾವುದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯಲ್ಲಿ  ಈ ಮಿಡತೆ ಕೀಟಗಳು ಬರುವ ಸಂಭವ ಇರುತ್ತದೆ. ಈ ಮಿಡತೆ ಕೀಟಗಳ ಹಾವಳಿ ಹತೋಟಿಗಾಗಿ ಜಿಲ್ಲೆಯ  ರೈತರು ವಿವಿಧ ಹಂತದಲ್ಲಿ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ ಅವರು ಸಲಹೆ ನೀಡಿದ್ದಾರೆ. 

ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಕಾಲದ ಬೆಳೆಗಳು, ಕಟಾವು ಹಂತದಲ್ಲಿರುವ ತೋಟಗಾರಿಕೆ ಹಾಗೂ ಅರಣ್ಯೀಕರಣದ ಗಿಡಮರಗಳು ಈ ಮಿಡತೆ ಕೀಟಗಳಿಂದ ಹಾನಿಗೊಳಗಾಗಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಿಡತೆ ಕೀಟಗಳ ನಿರ್ವಹಣಾ ಕ್ರಮಗಳು ಇಂತಿವೆ.  

ತತ್ತಿಗಳನ್ನು ನಾಶಪಡಿಸುವುದು: ಮಿಡತೆಗಳು ತತ್ತಿಗಳಿರಿಸಿದ ಜಾಗವನ್ನು ಗುರುತಿಸಿ ಅವುಗಳ ಸುತ್ತಲು ಕಂದಕ (2 ಅಡಿ ಅಗಲ  ಮತ್ತು 2 ಅಡಿ ಆಳ) ವನ್ನು ನಿರ್ಮಿಸಿ ತತ್ತಿಯಿಂದ ಬರುವ ಮರಿಗಳನ್ನು ಆ ಕಂದಕಗಳಲ್ಲಿ ಬಿಡುವಂತೆ ಮಾಡುವುದು. ಅಲ್ಲದೆ ತತ್ತಿಗಳನ್ನು ನಾಶಪಡಿಸಲು ಮೇಲಿಂದ ಮೇಲೆ ಉಳುಮೆ ಮಾಡಬೇಕು.  ರೈತರು ಮಿಡತೆ ಕಾಣಿಸಿಕೊಂಡಾಗ ತಗಡಿನ ಡಬ್ಬಿ, ಡ್ರಮ್ಮು, ತಟ್ಟೆ ಇವುಗಳನ್ನು ಬಾರಿಸುವ ಮೂಲಕ ಭಾರಿ ಶಬ್ದವನ್ನು ಹುಟ್ಟಿಸುವುದು. ರೇಡಿಯೋ ಅಥವಾ ಎಲೆಕ್ಟ್ರಾನಿಕ್ ಸೌಂಡ್‍ಗಳನ್ನು ಹಚ್ಚುವುದು. ಇದರಿಂದ ಮಿಡತೆ ತಂಡಗಳು ಭೂಮಿಯ ಮೇಲಿನ ಬೆಳೆಗಳಿಗೆ ಬರುವುದಿಲ್ಲ. 

ಬೇವು ಆಧಾರಿತ ಸಿಂಪರಣೆ ಮಾಡುವುದು. (0.15% ಇ.ಸಿ) 45 ಮಿ.ಲಿ. ಅನ್ನು 15 ಲೀ. ನೀರಿನಲ್ಲಿ ಬೆರೆಸಿ ಹಾಲಿ ಬೆಳೆಗಳಿಗೆ ಹಾಗೂ ಸುತ್ತಮುತ್ತ ಗಿಡಗಳಿಗೆ ಸಿಂಪಡಿಸುವುದು. ತೇವಾಂಶ ಹೊಂದಿದ ಮರಳು ಮಣ್ಣಿನಲ್ಲಿ ಮಿಡತೆಗಳು ತತ್ತಿ ಇಟ್ಟಿರುವ ಜಾಗಗಳನ್ನು ಗುರುತಿಸಿ, ರಾಸಾಯನಿಕಗಳನ್ನು ಸಿಂಪಡಿಸಿ ತತ್ತಿ ಹಂತದಲ್ಲಿ ನಾಶಪಡಿಸುವುದು. ಬೆಳೆದು ನಿಂತ ಬೆಳೆಗೆ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ. ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು.

ರೈತರು ಕಡ್ಡಾಯವಾಗಿ ಮೈ ತುಂಬಾ ಬಟ್ಟೆ ಧರಿಸಿ, ಮುಖಕ್ಕೆ ಮಾಸ್ಕ್, ಕೈ ಚೀಲಗಳು, ಟೋಪಿ ಹಾಗೂ ಕನ್ನಡಕವನ್ನು ಧರಿಸಿ ಬೆಳಗಿನ 7 ರಿಂದ 10 ಗಂಟೆಯೊಳಗಾಗಿ 500 ಮಿ.ಲಿ. ಡಿ.ಡಿ.ವಿ.ಪಿ. 76 % ಇ.ಸಿ. ಯನ್ನು 1500 ಲೀ. ನೀರಿಗೆ ಬೇರೆಸಿ ಅಥವಾ 100 ಕೆ.ಜಿ. ಮರಳು ಮಣ್ಣಿನ ಜೊತೆ ಬೆರೆಸಿ ಎರಚುವುದು. ಈ ಪುಡಿಯನ್ನು ಚೆಲ್ಲಿದ ನಂತರ ಕೂಡಲೇ ಹೊಲದಿಂದ ಹೊರಬರುವುದು. ಬಲಿಯುತ್ತಿರುವ ಮಿಡತೆಗಳು ಹೊಲದಲ್ಲಿ ಓಡಾಡುವಾಗ ಒಣಹುಲ್ಲು, ಕಸಕಡ್ಡಿಗಳಿಗೆ ಬೆಂಕಿ ಹಚ್ಚಿ ಸುಡುವುದು. ಸಾಗುವಳಿ ರಹಿತ ಜಮೀನಿನಲ್ಲಿ ಮಿಡತೆಗಳು ಗುಂಪು-ಗುಂಪಾಗಿ ಹರಡಿದಾಗ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ, ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು ಅಥವಾ ಮೆಲಾಥಿಯಾ 96% ಯು.ಎಲ್.ವಿ.  1 ಲೀ. ಪ್ರತಿ ಹೇಕ್ಟರ್‍ಗೆ ಯು.ಎಲ್.ವಿ. ಸಿಂಪರಣೆ ಯಂತ್ರದ ಮೂಲಕ ನೇರವಾಗಿ ಮಿಡತೆಗಳ ಮೇಲೆ ಸಿಂಪಡಿಸುವುದು.

ಉತ್ತರ ಭಾರತದಲ್ಲಿನ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಮಿಡತೆಯ ಹಾವಳಿ ಉಲ್ಬಣವಾಗಿದ್ದು, ಪೂರ್ವ ಮಹಾರಾಷ್ಟ್ರದ ಭಾಗದಲ್ಲಿಯೂ ಹರಡುತ್ತಿದೆ. ಪಂಜಾಬ್ ಹಾಗೂ ಗುಜರಾತ್ ರೈತರಿಗೂ ಕೂಡ ಮಿಡತೆಗಳ ಹಾವಳಿ ಬಗ್ಗೆ ಎಚ್ಚರಿಸಲಾಗಿದೆ. ಈ ಮಿಡತೆಗಳು ಅಲೆ ಅಲೆಯಾಗಿ ಗುಂಪಿನಲ್ಲಿ ಒಂದು ದಿನದಲ್ಲಿ 150 ಕಿ.ಮೀ. ದೂರ ಗಾಳಿಯ ದಿಕ್ಕಿನಲ್ಲಿ ಹಾರಬಲ್ಲವು. ಒಂದು ಮಿಡತೆಯು ತನ್ನಷ್ಟೆ ತೂಕದ ಆಹಾರವನ್ನು ತಿನ್ನಬಲ್ಲವು. ಎಫ್.ಪಿ.ಓ. ವರದಿ ಪ್ರಕಾರ ಒಂದು ಚ.ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡ ಈ ಮಿಡತೆಗಳ ಸೈನ್ಯ (ಸುಮಾರು 40 ಮಿಲಿಯನ್) ಒಂದು ದಿನದಲ್ಲಿ 35,000 ಸಾವಿರ ಜನರು ತಿನ್ನುವಷ್ಟು ಅಹಾರವನ್ನು ತಿನ್ನಬಲ್ಲವು. 

ಈ ಮಿಡತೆಗಳು ಬಹುಭಕ್ಷಕ ಕೀಟಗಳಾಗಿದ್ದು, ಯಾವುದೇ ಗಿಡದ ಅಥವಾ ಬೆಳೆಯ ಎಲೆಗಳು ಹೂ, ಹಣ್ಣು, ಬೀಜ, ಮರದ ತೊಗಟೆ ಹಾಗೂ ಬೆಳೆಯ ಕುಡಿಗಳನ್ನು ನಿರ್ದಾಕ್ಷಿಣ್ಯವಾಗಿ ಭಕ್ಷಿಸುತ್ತವೆ. ಪ್ರಪಂಚದಲ್ಲಿ ಮಿಡತೆಗಳಲ್ಲಿ 10 ಪ್ರಬೇದಗಳಿದು,್ದ ಭಾರತದಲ್ಲಿ ನಾಲ್ಕು ಪ್ರಭೇದಗಳಿರುತ್ತದೆ. ಹೆಣ್ಣು ಮಿಡತೆಯು ತೇವಾಂಶ ಹೊಂದಿರುವ ಮರಳು ಮಿಶ್ರಿತ ಮಣ್ಣಿನಲ್ಲಿ ತನ್ನ ಜೀವಾವಧಿಯಲ್ಲಿ ವಾರಕ್ಕೊಮ್ಮೆ 1000 ತತ್ತಿಗಳನ್ನು ಪ್ರತಿ ಚದುರ ಅಡಿಗೆ ಇಡುತ್ತಿದ್ದು, 3 ಸಲ ಈ ಆವೃತ್ತಿ ಇರುತ್ತದೆ. ಪ್ರಭುದ್ಧತೆ ಮಿಡತೆಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ 12-16 ಕಿ. ಮೀ. ವೇಗದಲ್ಲಿ ಹಾರುತ್ತವೆ.

ಮಿಡತೆಗಳು ಕಡಿಮೆ ಸಂಖ್ಯೆಯಲ್ಲಿದ್ದಾಗ ಅಷ್ಟೇನು ಹಾನಿ ಮಾಡುವುದಿಲ್ಲ. ಆದರೆ ಅನೂಕೂಲಕರ ಹವಾಮಾನ ಸಂದರ್ಭದಲ್ಲಿ ಅಂದರೆ ಬೇಸಿಗೆ ನಡುವೆ ಸರಣಿ ಮಳೆಗಳು ಬಂದಾಗ ತೇವಾಂಶವುಳ್ಳ ಪರಿಸರ ಇವುಗಳಿಗೆ ಹುಟ್ಟಿಕೊಳ್ಳಲು ಪೂರಕ ಪರಿಸ್ಥಿತಿ ಎನಿಸುತ್ತದೆ.  ಪ್ರಸ್ತುತ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಾನಾ ಬಗೆಯ ಚಂಡಮಾರುತಗಳು ಈ ಮಿಡತೆಗಳ ಹುಟ್ಟಿಗೆ ಪೂರಕವಾದ ವಾತಾವರಣ ಸೃಷ್ಟಿಸಿವೆ ಎನ್ನುವುದು ತಜ್ಞರ ಅಭಿಪ್ರಾಯ. ಈ ಸಂದರ್ಭದಲ್ಲಿನ ಅಪರಿಮಿತ ಸಂಖ್ಯೆಯಲ್ಲಿ ಹುಟ್ಟಿಕೊಂಡು ತಾವು ಹುಟ್ಟಿಕೊಂಡ ಪ್ರದೇಶದಿಂದ ಕೋಟ್ಯಾಂತರ ಸಂಖ್ಯೆಯಲ್ಲಿ ಚಕ್ರವಾಗಿ ಹರಡುತ್ತಾ ಕೆಳಗಿಳಿದು ಹೊಲದಲ್ಲಿರುವ ಬೆಳೆಗಳನ್ನು ಕ್ಷಣಾರ್ಧದಲ್ಲಿ  ತಿಂದು ದ್ವಂಸ ಮಾಡುತ್ತಾ ಅಲ್ಲಿಯೇ ಸಂತ್ತಾನೋತ್ಪತ್ತಿ ಮಾಡಿ ಮತ್ತಷ್ಟು ಸಂಖ್ಯೆಯಲ್ಲಿ ಬೆಳೆಯುತ್ತಾ ಹೋಗುತ್ತವೆ.

ರಾಜಕೀಯ

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ

ಪಕೋಡಾ ಮಾರುವುದು ಎಂದು ಉದ್ಯೋಗವೇ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಈಗ ನಮ್ಮ ಸರ್ಕಾರದ ಕಡಿಮೆ ದರದಲ್ಲಿ ಸಿಗುವ ಇಂಟರ್ನೆಟ್ ಬಳಸಿ ಇನ್ಸ್ಟಾಗ್ರಾಮ್ (Instagram) ಮೂಲಕ ರೀಲ್ಸ್ (Reels) ಮಾಡಿ

[ccc_my_favorite_select_button post_id="115475"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!