ಕರೊನಾ ನಡುವೆಯೇ ಮಿಡತೆ ಕೀಟಗಳ ಆತಂಕ

ಕಲಬುರಗಿ : ಮಹಾರಾಷ್ಟ್ರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಲಸೆಗಾರ ಬೆಳೆನಾಶಕ ಮರುಭೂಮಿ ಮಿಡತೆ ಕೀಟ  (Desert Locust) ಗಳ ಹಾವಳಿ ಕಂಡುಬಂದಿದ್ದು, ಯಾವುದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯಲ್ಲಿ  ಈ ಮಿಡತೆ ಕೀಟಗಳು ಬರುವ ಸಂಭವ ಇರುತ್ತದೆ. ಈ ಮಿಡತೆ ಕೀಟಗಳ ಹಾವಳಿ ಹತೋಟಿಗಾಗಿ ಜಿಲ್ಲೆಯ  ರೈತರು ವಿವಿಧ ಹಂತದಲ್ಲಿ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಲು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ ಅವರು ಸಲಹೆ ನೀಡಿದ್ದಾರೆ. 

ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಕಾಲದ ಬೆಳೆಗಳು, ಕಟಾವು ಹಂತದಲ್ಲಿರುವ ತೋಟಗಾರಿಕೆ ಹಾಗೂ ಅರಣ್ಯೀಕರಣದ ಗಿಡಮರಗಳು ಈ ಮಿಡತೆ ಕೀಟಗಳಿಂದ ಹಾನಿಗೊಳಗಾಗಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಿಡತೆ ಕೀಟಗಳ ನಿರ್ವಹಣಾ ಕ್ರಮಗಳು ಇಂತಿವೆ.  

ತತ್ತಿಗಳನ್ನು ನಾಶಪಡಿಸುವುದು: ಮಿಡತೆಗಳು ತತ್ತಿಗಳಿರಿಸಿದ ಜಾಗವನ್ನು ಗುರುತಿಸಿ ಅವುಗಳ ಸುತ್ತಲು ಕಂದಕ (2 ಅಡಿ ಅಗಲ  ಮತ್ತು 2 ಅಡಿ ಆಳ) ವನ್ನು ನಿರ್ಮಿಸಿ ತತ್ತಿಯಿಂದ ಬರುವ ಮರಿಗಳನ್ನು ಆ ಕಂದಕಗಳಲ್ಲಿ ಬಿಡುವಂತೆ ಮಾಡುವುದು. ಅಲ್ಲದೆ ತತ್ತಿಗಳನ್ನು ನಾಶಪಡಿಸಲು ಮೇಲಿಂದ ಮೇಲೆ ಉಳುಮೆ ಮಾಡಬೇಕು.  ರೈತರು ಮಿಡತೆ ಕಾಣಿಸಿಕೊಂಡಾಗ ತಗಡಿನ ಡಬ್ಬಿ, ಡ್ರಮ್ಮು, ತಟ್ಟೆ ಇವುಗಳನ್ನು ಬಾರಿಸುವ ಮೂಲಕ ಭಾರಿ ಶಬ್ದವನ್ನು ಹುಟ್ಟಿಸುವುದು. ರೇಡಿಯೋ ಅಥವಾ ಎಲೆಕ್ಟ್ರಾನಿಕ್ ಸೌಂಡ್‍ಗಳನ್ನು ಹಚ್ಚುವುದು. ಇದರಿಂದ ಮಿಡತೆ ತಂಡಗಳು ಭೂಮಿಯ ಮೇಲಿನ ಬೆಳೆಗಳಿಗೆ ಬರುವುದಿಲ್ಲ. 

ಬೇವು ಆಧಾರಿತ ಸಿಂಪರಣೆ ಮಾಡುವುದು. (0.15% ಇ.ಸಿ) 45 ಮಿ.ಲಿ. ಅನ್ನು 15 ಲೀ. ನೀರಿನಲ್ಲಿ ಬೆರೆಸಿ ಹಾಲಿ ಬೆಳೆಗಳಿಗೆ ಹಾಗೂ ಸುತ್ತಮುತ್ತ ಗಿಡಗಳಿಗೆ ಸಿಂಪಡಿಸುವುದು. ತೇವಾಂಶ ಹೊಂದಿದ ಮರಳು ಮಣ್ಣಿನಲ್ಲಿ ಮಿಡತೆಗಳು ತತ್ತಿ ಇಟ್ಟಿರುವ ಜಾಗಗಳನ್ನು ಗುರುತಿಸಿ, ರಾಸಾಯನಿಕಗಳನ್ನು ಸಿಂಪಡಿಸಿ ತತ್ತಿ ಹಂತದಲ್ಲಿ ನಾಶಪಡಿಸುವುದು. ಬೆಳೆದು ನಿಂತ ಬೆಳೆಗೆ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ. ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು.

ರೈತರು ಕಡ್ಡಾಯವಾಗಿ ಮೈ ತುಂಬಾ ಬಟ್ಟೆ ಧರಿಸಿ, ಮುಖಕ್ಕೆ ಮಾಸ್ಕ್, ಕೈ ಚೀಲಗಳು, ಟೋಪಿ ಹಾಗೂ ಕನ್ನಡಕವನ್ನು ಧರಿಸಿ ಬೆಳಗಿನ 7 ರಿಂದ 10 ಗಂಟೆಯೊಳಗಾಗಿ 500 ಮಿ.ಲಿ. ಡಿ.ಡಿ.ವಿ.ಪಿ. 76 % ಇ.ಸಿ. ಯನ್ನು 1500 ಲೀ. ನೀರಿಗೆ ಬೇರೆಸಿ ಅಥವಾ 100 ಕೆ.ಜಿ. ಮರಳು ಮಣ್ಣಿನ ಜೊತೆ ಬೆರೆಸಿ ಎರಚುವುದು. ಈ ಪುಡಿಯನ್ನು ಚೆಲ್ಲಿದ ನಂತರ ಕೂಡಲೇ ಹೊಲದಿಂದ ಹೊರಬರುವುದು. ಬಲಿಯುತ್ತಿರುವ ಮಿಡತೆಗಳು ಹೊಲದಲ್ಲಿ ಓಡಾಡುವಾಗ ಒಣಹುಲ್ಲು, ಕಸಕಡ್ಡಿಗಳಿಗೆ ಬೆಂಕಿ ಹಚ್ಚಿ ಸುಡುವುದು. ಸಾಗುವಳಿ ರಹಿತ ಜಮೀನಿನಲ್ಲಿ ಮಿಡತೆಗಳು ಗುಂಪು-ಗುಂಪಾಗಿ ಹರಡಿದಾಗ ಕ್ವಿನಾಲ್‍ಪಾಸ್ 1.5 % ಡಿ.ಪಿ. ಅಥವಾ ಕ್ಲೋರಿಪೈರಿಪಾಸ್ 1.5% ಡಿ.ಪಿ, ಅಥವಾ ಮಿಥೈಲ್ ಪ್ಯಾರಾಥೀಯಾನ್ 2% ಡಿ.ಪಿ. ಪುಡಿಯನ್ನು ಪ್ರತಿ ಹೇಕ್ಟೇರ್‍ಗೆ 25 ಕೆ.ಜಿ. ಯಂತೆ ಧೂಳಿಕರಿಸುವುದು ಅಥವಾ ಮೆಲಾಥಿಯಾ 96% ಯು.ಎಲ್.ವಿ.  1 ಲೀ. ಪ್ರತಿ ಹೇಕ್ಟರ್‍ಗೆ ಯು.ಎಲ್.ವಿ. ಸಿಂಪರಣೆ ಯಂತ್ರದ ಮೂಲಕ ನೇರವಾಗಿ ಮಿಡತೆಗಳ ಮೇಲೆ ಸಿಂಪಡಿಸುವುದು.

ಉತ್ತರ ಭಾರತದಲ್ಲಿನ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಮಿಡತೆಯ ಹಾವಳಿ ಉಲ್ಬಣವಾಗಿದ್ದು, ಪೂರ್ವ ಮಹಾರಾಷ್ಟ್ರದ ಭಾಗದಲ್ಲಿಯೂ ಹರಡುತ್ತಿದೆ. ಪಂಜಾಬ್ ಹಾಗೂ ಗುಜರಾತ್ ರೈತರಿಗೂ ಕೂಡ ಮಿಡತೆಗಳ ಹಾವಳಿ ಬಗ್ಗೆ ಎಚ್ಚರಿಸಲಾಗಿದೆ. ಈ ಮಿಡತೆಗಳು ಅಲೆ ಅಲೆಯಾಗಿ ಗುಂಪಿನಲ್ಲಿ ಒಂದು ದಿನದಲ್ಲಿ 150 ಕಿ.ಮೀ. ದೂರ ಗಾಳಿಯ ದಿಕ್ಕಿನಲ್ಲಿ ಹಾರಬಲ್ಲವು. ಒಂದು ಮಿಡತೆಯು ತನ್ನಷ್ಟೆ ತೂಕದ ಆಹಾರವನ್ನು ತಿನ್ನಬಲ್ಲವು. ಎಫ್.ಪಿ.ಓ. ವರದಿ ಪ್ರಕಾರ ಒಂದು ಚ.ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡ ಈ ಮಿಡತೆಗಳ ಸೈನ್ಯ (ಸುಮಾರು 40 ಮಿಲಿಯನ್) ಒಂದು ದಿನದಲ್ಲಿ 35,000 ಸಾವಿರ ಜನರು ತಿನ್ನುವಷ್ಟು ಅಹಾರವನ್ನು ತಿನ್ನಬಲ್ಲವು. 

ಈ ಮಿಡತೆಗಳು ಬಹುಭಕ್ಷಕ ಕೀಟಗಳಾಗಿದ್ದು, ಯಾವುದೇ ಗಿಡದ ಅಥವಾ ಬೆಳೆಯ ಎಲೆಗಳು ಹೂ, ಹಣ್ಣು, ಬೀಜ, ಮರದ ತೊಗಟೆ ಹಾಗೂ ಬೆಳೆಯ ಕುಡಿಗಳನ್ನು ನಿರ್ದಾಕ್ಷಿಣ್ಯವಾಗಿ ಭಕ್ಷಿಸುತ್ತವೆ. ಪ್ರಪಂಚದಲ್ಲಿ ಮಿಡತೆಗಳಲ್ಲಿ 10 ಪ್ರಬೇದಗಳಿದು,್ದ ಭಾರತದಲ್ಲಿ ನಾಲ್ಕು ಪ್ರಭೇದಗಳಿರುತ್ತದೆ. ಹೆಣ್ಣು ಮಿಡತೆಯು ತೇವಾಂಶ ಹೊಂದಿರುವ ಮರಳು ಮಿಶ್ರಿತ ಮಣ್ಣಿನಲ್ಲಿ ತನ್ನ ಜೀವಾವಧಿಯಲ್ಲಿ ವಾರಕ್ಕೊಮ್ಮೆ 1000 ತತ್ತಿಗಳನ್ನು ಪ್ರತಿ ಚದುರ ಅಡಿಗೆ ಇಡುತ್ತಿದ್ದು, 3 ಸಲ ಈ ಆವೃತ್ತಿ ಇರುತ್ತದೆ. ಪ್ರಭುದ್ಧತೆ ಮಿಡತೆಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ 12-16 ಕಿ. ಮೀ. ವೇಗದಲ್ಲಿ ಹಾರುತ್ತವೆ.

ಮಿಡತೆಗಳು ಕಡಿಮೆ ಸಂಖ್ಯೆಯಲ್ಲಿದ್ದಾಗ ಅಷ್ಟೇನು ಹಾನಿ ಮಾಡುವುದಿಲ್ಲ. ಆದರೆ ಅನೂಕೂಲಕರ ಹವಾಮಾನ ಸಂದರ್ಭದಲ್ಲಿ ಅಂದರೆ ಬೇಸಿಗೆ ನಡುವೆ ಸರಣಿ ಮಳೆಗಳು ಬಂದಾಗ ತೇವಾಂಶವುಳ್ಳ ಪರಿಸರ ಇವುಗಳಿಗೆ ಹುಟ್ಟಿಕೊಳ್ಳಲು ಪೂರಕ ಪರಿಸ್ಥಿತಿ ಎನಿಸುತ್ತದೆ.  ಪ್ರಸ್ತುತ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಾನಾ ಬಗೆಯ ಚಂಡಮಾರುತಗಳು ಈ ಮಿಡತೆಗಳ ಹುಟ್ಟಿಗೆ ಪೂರಕವಾದ ವಾತಾವರಣ ಸೃಷ್ಟಿಸಿವೆ ಎನ್ನುವುದು ತಜ್ಞರ ಅಭಿಪ್ರಾಯ. ಈ ಸಂದರ್ಭದಲ್ಲಿನ ಅಪರಿಮಿತ ಸಂಖ್ಯೆಯಲ್ಲಿ ಹುಟ್ಟಿಕೊಂಡು ತಾವು ಹುಟ್ಟಿಕೊಂಡ ಪ್ರದೇಶದಿಂದ ಕೋಟ್ಯಾಂತರ ಸಂಖ್ಯೆಯಲ್ಲಿ ಚಕ್ರವಾಗಿ ಹರಡುತ್ತಾ ಕೆಳಗಿಳಿದು ಹೊಲದಲ್ಲಿರುವ ಬೆಳೆಗಳನ್ನು ಕ್ಷಣಾರ್ಧದಲ್ಲಿ  ತಿಂದು ದ್ವಂಸ ಮಾಡುತ್ತಾ ಅಲ್ಲಿಯೇ ಸಂತ್ತಾನೋತ್ಪತ್ತಿ ಮಾಡಿ ಮತ್ತಷ್ಟು ಸಂಖ್ಯೆಯಲ್ಲಿ ಬೆಳೆಯುತ್ತಾ ಹೋಗುತ್ತವೆ.

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]