ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ:ರೈತರು ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಕೋಲಾರದಲ್ಲಿ ಕಂಡುಬಂದಿರುವುದು ಸಾಮಾನ್ಯ ಎಕ್ಕೆಗಿಡದ ಮಿಡತೆಯಾಗಿದ್ದು, ಲೋಕ್ಟಸ್ ಮಿಡತೆಗೂ ಇದಕ್ಕೂ ಸಂಬಂಧವಿಲ್ಲ.ಕರ್ನಾಟಕಕ್ಕೆ ಲಾಕ್ಟಸ್ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆಯಿದ್ದು, ರೈತರು ಯಾವುದೇ ಕಾರಣಕ್ಕೂ ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ ಎಂದು ಕೃಷಿ ಸಚಿವ  ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಮಧ್ಯಪ್ರದೇಶ, ಮಹಾರಾಷ್ಟ್ರ ರಾಜಸ್ಥಾನ ಸೇರಿದಂತೆ ಇತರೆ ರಾಜ್ಯಗಳಲ್ಲಿ ರೈತರನ್ನು ಬಾಧಿಸಿರುವ ಲೋಕ್ಟಸ್ ಮಿಡತೆ ಹಾವಳಿ ರಾಜ್ಯಕ್ಕೆ ಬಾಧಿಸದಂತೆ ತೆಗೆದುಕೊಳ್ಳಬಹುದಾದ ಕ್ರಮಗಳು ಮುನ್ನೆಚ್ಚರಿಕೆಗಳ ಕುರಿತು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ವಿಕಾಸಸೌಧದಲ್ಲಿಂದು, ಕೃಷಿ ಅಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ಕೀಟಶಾಸ್ತ್ರಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು. 

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿಸಚಿವರು, ಮಿಡತೆ ಗಾಳಿಯನ್ನು ಅವಲಂಬಿಸಿರುವುದರಿಂದ ಗಾಳಿಯ ದಿಕ್ಕು ಬದಲಾದಂತೆ ಮಿಡತೆಗಳು ಪಸರಿಸುವುದು ಬದಲಾಗುತ್ತದೆ. ಕೃಷಿ ತಜ್ಞರ ಪ್ರಕಾರ ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ಕಡಿಮೆಯಿದೆ. ಮೇ.26 ರಿಂದ ಎರಡು ದಿನಗಳು ಮಾತ್ರ ದಕ್ಷಿಣಾಭಿಮುಖವಾಗಿ ಗಾಳಿ ಬೀಸುತ್ತಿದ್ದು, ಎರಡು ದಿನಗಳ ಬಳಿಕ ಅಂದರೆ ಮೇ.30 ರಷ್ಟೊತ್ತಿಗೆ ಅದರ ದಿಕ್ಕು ಬದಲಾಗುವ ಸಾಧ್ಯತೆಯಿದೆ. ಹೀಗಾಗಿಮಿಡತೆಗಳು ಕರ್ನಾಟಕ ಮುಟ್ಟುವ ಸಾಧ್ಯತೆ ಕಡಿಮೆಯಿದೆ. ಬೀದರ್ ಗಡಿಯಿಂದ ಮಿಡತೆಗಳು ಸುಮಾರು 450 ಕಿ.ಮೀ.ದೂರದಲ್ಲಿರುವುದರಿಂದ ರಾಜ್ಯ ಮುಟ್ಟುವ ಸಾಧ್ಯತೆ ಬಹಳಷ್ಟು ಕಡಿಮೆ ಇದೆ ಎಂದರು.

ಗಾಳಿಯ ದಿಕ್ಕು ಬದಲಾಗಿದೆ

ಒಂದು ವೇಳೆ  ಕಾರಣಾಂತರಗಳಿಂದ ಗಾಳಿ ದಿಕ್ಕು ಬದಲಾಗದೇ ಮಿಡತೆಗಳು ಕರ್ನಾಟಕ ಮುಟ್ಟಿದಲ್ಲಿ ಯಾವ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ಡೆವಲಪ್ಮೆಂಟ್ ಕಮಿಷನರ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಎಸ್ ಓಪಿ(STANDARD OPERATING PROCEDURE)ಸಿದ್ಧಗೊಳಿಸಲಾಗಿದೆ. ಅದೇ ರೀತಿ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಮುನ್ನೆಚ್ಚರಿಕೆ ನೀಡಿದ್ದು, ಅಗತ್ಯಬಿದ್ದಲ್ಲಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಅವಶ್ಯಕಕ್ರಮಗಳಲ್ಲಿ ಮುಖ್ಯವಾಗಿ ಮೊದಲನೆಯದಾಗಿ ರೈತರು ತಮ್ಮ ಜಮೀನುಗಳಲ್ಲಿ ಮಿಡತೆ ಬಾದೆ ಕಂಡುಬಂದಲ್ಲಿ ಶಬ್ದ ಮಾಡುವ ಮೂಲಕ ದೂರ ಓಡಿಸಬಹುದು. ಇಂತಹ ಬೆಳೆಗಳು ದುಬಾರಿ ಬೆಳೆಗಳಾಗಿದ್ದಲ್ಲಿ ಅವುಗಳ ರಕ್ಷಣೆಗೋಸ್ಕರ ಬೇವು ಆಧಾರಿತ ಕೀಟನಾಶಕಗಳನ್ನು ರೈತರೇ ಸಿಂಪಡಿಸಿಕೊಳ್ಳಬೇಕಾಗುತ್ತದೆ. ಮಿಡತೆಗಳು ಅವುಗಳ ಹಾರುವ ಕ್ರಮದಲ್ಲಿ ಸಾಮಾನ್ಯವಾಗಿ ಸಂಜೆ ವೇಳೆಗೆ ಯಾವುದಾದರೂ ಮರ ಗಿಡಗಳ ಮೇಲೆ ಕೂರುವುದು ಹೆಚ್ಚಿರುವುದರಿಂದ ಅಂತಹ ಸಂದರ್ಭಗಳಲ್ಲಿ ಇವುಗಳ ಹತೋಟಿಗಾಗಿ ಕ್ಲೋರ್ ಫೈರಿಫಾಸ್ ಅಥವಾ ಲಾಮ್ಡಾಸಿಹಲೋತ್ರಿನ್ ಔಷಧಿಗಳನ್ನು ಸರಿಯಾದ ಪ್ರಮಾಣದಲ್ಲಿ ಸಿಂಪಡಣೆ ಮಾಡುವುದು ಎಂದು ತೀರ್ಮಾನಿಸಲಾಗಿದೆ. ಇದಕ್ಕಾಗಿ ಅವಶ್ಯಕವಾದಂತಹ ಸಿಂಪಡಣಾ ವ್ಯವಸ್ಥೆಗಾಗಿ ಫೈರ್ ಇಂಜಿನ್ಸ್, ಟ್ರ್ಯಾಕ್ಟರ್ ಚಾಲಿತ ಸ್ಪ್ರೇಯರ್ ಗಳು ಹಾಗೂ ಡ್ರೋಣ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ ಮಹಾರಾಷ್ಟ್ರದ ಕೃಷಿ ಆಯುಕ್ತರೊಂದಿಗೆ ನಮ್ಮ ರಾಜ್ಯದ ಕೃಷಿ ಆಯುಕ್ತರು ಪ್ರತಿಗಂಟೆಗೊಮ್ಮೆ ಮಿಡತೆಗಳ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ನಿರ್ವಹಣಾ ಕ್ರಮಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ನಿರ್ವಹಣಾ ಕ್ರಮಗಳು:ಜಿಲ್ಲಾಮಟ್ಟದಲ್ಲಿ ಕೀಟನಾಶಕ ನಿರ್ವಹಣಾ ಸಮಿತಿ

ಜಿಲ್ಲಾಮಟ್ಟದಲ್ಲಿ ಕೀಟನಾಶಕ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿಯಿದ್ದು, ಸಮಿತಿಯಲ್ಲಿ ಜಂಟಿ ಕೃಷಿ ನಿರ್ದೇಶಕರು,ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ತೋಟಗಾರಿಕಾ ಉಪನಿರ್ದೇಶಕರು, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆಯನ್ನೊಳಗೊಂಡ ಸಮಿತಿಯಿದೆ. ಮಿಡತೆಗಳು ಹಗಲಿಗಿಂತ ರಾತ್ರಿವೇಳೆ ಹೆಚ್ಚು ಸಂಚರಿಸುವುದರಿಂದ ರಾತ್ರಿವೇಳೆ ಮರ,ಗಿಡಗಳ ಮೇಲೆ ಔಷಧಿ, ಕ್ರಿಮಿನಾಶಕ ಸಿಂಪಡಣೆ ಮಾಡಿ ನಾಶಮಾಡಬಹುದಾಗಿದೆ.

ಗಾಳಿಯ ದಿಕ್ಕು ಆಧರಿಸಿ ಲೋಕ್ಟಸ್ ಮಿಡತೆಗಳು ಚಲಿಸುವುದರಿಂದ ಇವುಗಳ ಚಲನವಲನಗಳ ಮೇಲೆ ನಿಗಾವಹಿಸಲು ಭಾರತೀಯ ಹವಾಮಾನ ಸಂಸ್ಥೆಯಿಂದ ಸತತವಾಗಿ ಗಾಳಿಯ ವೇಗ ಹಾಗೂ ದಿಕ್ಕಿನ ಮಾಹಿತಿ ಸಂಗ್ರಹಿಸಿ ಅದರಾಧರದ ಮೇಲೆ ಮುನ್ಸೂಚನೆ ನೀಡುವುದು.

ಹೋಗುತ್ತಿರುವ ದಾರಿಯಲ್ಲಿ ಹೊಗೆ ಹಚ್ಚಿಸಿ ಮಿಡತೆಗಳನ್ನು ಮಂಕಾಗಿಸಿ ಶಬ್ದಮಾಡಿ ನಾಶ ಮಾಡುವುದು.ರಾತ್ರಿ ಮರದಲ್ಲಿ ಇವು ವಿಶ್ರಮಿಸುವುದರಿಂದ ರಾಸಾಯನಿಕ ಸಿಂಪಡಣೆ ಬಳಸಿ ನಿಯಂತ್ರಿಸಬಹುದು. 

ರಾಜ್ಯಮಟ್ಟದ ತಂಡ ರಚನೆ 

ಮುಂಜಾಗ್ರತಾ ಕ್ರಮವಾಗಿ ರಾಜ್ಯಮಟ್ಟದಲ್ಲಿ ಕೃಷಿ ಮತ್ತು ತೋಟಗಾರಿಕಾ ನಿರ್ದೇಶಕರು ಹಾಗೂ ಉನ್ನತಮಟ್ಟದ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಈ ತಂಡ ಬೀದರ್, ಕೊಪ್ಪಳ, ಗುಲ್ಬರ್ಗಾ,ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಿ ಮಿಡತೆ ನಿಯಂತ್ರಣ ಮುನ್ನೆಚ್ಚರಿಕೆ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲು ಸೂಚನೆ ನೀಡಲಾಗಿದೆ.

ರಾಜ್ಯವಿಪತ್ತು ನಿರ್ವಹಣಾ ನಿಧಿಯಲ್ಲಿ ಶೇ.25 ರಷ್ಟನ್ನು ಮಿಡತೆ ನಿರ್ವಹಣೆಗೆ ಬಳಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದರು.ಈ ವೇಳೆ ತೋಟಗಾರಿಕಾ ಸಚಿವ ನಾರಾಯಣಗೌಡ,ಉಪಸ್ಥಿತರಿದ್ದರು

ರಾಜಕೀಯ

ಸರ್ ಯತ್ನಾಳ್ ಎಂದಿದಕ್ಕೆ ವಿಜಯೇಂದ್ರ ರಿಯಾಕ್ಷನ್ ಏನ್ ಗೊತ್ತಾ..?

ಸರ್ ಯತ್ನಾಳ್ ಎಂದಿದಕ್ಕೆ ವಿಜಯೇಂದ್ರ ರಿಯಾಕ್ಷನ್ ಏನ್ ಗೊತ್ತಾ..?

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ನಿಮಿತ್ತ ದೇಶಾದ್ಯಂತ ಬಿಜೆಪಿ ವತಿಯಿಂದ ವಾಜಪೇಯಿ ಅವರ ಜೊತೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು, ಅವರ ಜೊತೆ ಒಡನಾಟ, ನಮ್ಮ

[ccc_my_favorite_select_button post_id="102947"]
ರಾಷ್ಟ್ರ ಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ

ರಾಷ್ಟ್ರ ಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ

ದೊಡ್ಡಬಳ್ಳಾಪುರ (Doddaballapura): ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದೊಡ್ಡಬಳ್ಳಾಪುರದ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ ಆಯ್ಕೆಯಾಗಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ

[ccc_my_favorite_select_button post_id="102961"]
Delhi earthquake: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ.. ದೆಹಲಿ ಜನತೆ ಶಾಕ್.. video ನೋಡಿ

Delhi earthquake: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ.. ದೆಹಲಿ ಜನತೆ ಶಾಕ್.. video ನೋಡಿ

ನವದೆಹಲಿ: ಶನಿವಾರವಷ್ಟೇ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ (delhi earthquake) ಜನರು ಆತಂಕಕ್ಕೀಡು ಮಾಡಿದೆ. ಸೋಮವಾರ ಬೆಳಗ್ಗೆ ದಿಲ್ಲಿ, ನೋಯ್ಯಾ ಗುರುಗ್ರಾಮದಲ್ಲಿ ಬೆಳಗ್ಗೆ 5:30ಕ್ಕೆ

[ccc_my_favorite_select_button post_id="102890"]

Aero India 2025: ಏರ್‌ಶೋಗೆ ಇಂದು ಚಾಲನೆ..

[ccc_my_favorite_select_button post_id="102489"]

ಹರ ಹರ ಮಹಾದೇವ!: ಕುಂಭಮೇಳದಲ್ಲಿ ಡಿಸಿಎಂ‌ ಡಿಕೆ

[ccc_my_favorite_select_button post_id="102476"]

ಗುಂಡಿನ ಚಕಮಕಿ: 31 ಮಂದಿ ನಕ್ಸಲರ ಹತ್ಯೆ..

[ccc_my_favorite_select_button post_id="102472"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

ದೊಡ್ಡಬಳ್ಳಾಪುರ, (Doddaballapura): ನಗರದ ಹೊರವಲಯದ ದೇವನಹಳ್ಳಿ ರಸ್ತೆಯ ಹುತಾತ್ಮ ಪಿಎಸ್ಐ ಜಗದೀಶ್ ವೃತ್ತದ ಬಳಿ ಅಗ್ನಿ ಅವಘಡದಿಂದಾಗಿ ಹಾಸಿಗೆ, ಬೆಡ್‌ಶೀಟ್‌ಗಳನ್ನು ಮಾರುವ ಎರಡು ಅಂಗಡಿಗಳಲ್ಲಿದ್ದ ಹಾಸಿಗೆ ಬೆಡ್‌ಶೀಟ್ ಬಟ್ಟೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ

[ccc_my_favorite_select_button post_id="102923"]
Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

ದೊಡ್ಡಬಳ್ಳಾಪುರ, (Doddaballapura): ವಾಹನವೊಂದನ್ನು ಓವರ್ ಟೇಕ್ ಮಾಡಲು ಮುಂದಾದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ದುರ್ಗ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಬೆಂಗಳೂರಿನ‌

[ccc_my_favorite_select_button post_id="102935"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಇತ್ತೀಚೆಗಷ್ಟೇ ತಮ್ಮ ಜನ್ಮ ದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಜನ್ಮದಿನದ ಸಂಭ್ರಮ ಆಚರಿಸುತ್ತಿದ್ದ ಅವರು, ಅನಾರೋಗ್ಯದ ಕಾರಣ ಈ ವರ್ಷ ಅಭಿಮಾನಿಗಳನ್ನು

[ccc_my_favorite_select_button post_id="102944"]
error: Content is protected !!