ಗ್ರಾಮಪಂಚಾಯಿತಿ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ದೊಡ್ಡಬಳ್ಳಾಪುರ : ಗ್ರಾಮಪಂಚಾಯಿತಿ ಅವಧಿ ಅಂತ್ಯದ ಹಿನ್ನೆಲೆ ಚುನಾವಣೆ ನಡೆಸುವಂತೆ ವಿರೋಧ ಪಕ್ಷ ಒತ್ತಡ ಹಾಗೂ ಆಡಳಿತ ಸಮಿತಿ ನೇಮಿಸಲು ಸರ್ಕಾರದ ಪ್ರಯತ್ನದ ನಡುವೆಯೇ ಕರೊನಾ ಸೋಂಕಿನ ಕಾರಣ ಗ್ರಾಮಪಂಚಾಯಿತಿ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ಆದೇಶಿಸಿದೆ.

ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ನೀಡಿರುವ ಮಾದ್ಯಮ ಪ್ರಕಟಣೆಯಲ್ಲಿ ಈ ಕುರಿತು ಅವರು,ಉಲ್ಲೇಖಿಸಿದ್ದಾರೆ.

ಜೂನ್ ಹಾಗೂ ಆಗಸ್ಟ್‌ ತಿಂಗಳಲ್ಲಿ ಸುಮಾರು 5800 ಗ್ರಾಮಪಂಚಾಯಿತಿ ಅವಧಿ ಮುಕ್ತಾಯವಾಗುತ್ತಿದ್ದ ಹಿನ್ನೆಲೆ ಚುನಾವಣಾ ಆಯೋಗ ಚುನಾವೆಣೆ ನಡೆಸಲು ಸಿದ್ದತೆ ಕೈಗೊಳ್ಳಲಾಗಿತ್ತು.ಈ ಹಂತದಲ್ಲಿ ದೇಶದಾದ್ಯಂತ ಕರೊನಾ ಸೋಂಕು ನಿಯಂತ್ರಣಕ್ಕಾಗಿ ಘೋಷಿಸಲಾದ ಲಾಕ್ ಡೌನ್ ಕಾರಣ ಸಿದ್ದತೆಗಳನ್ನು ನಿಲ್ಲಿಸಲಾಯಿತು.ಅಲ್ಲದೆ ಚುನಾವಣೆ ಪ್ರಕ್ರಿಯೆಗೆ ಲಾಕ್ ಡೌನ್ ಅಡ್ಡಿಯಾಗಿದೆ.

ಈ ನಡುವೆ ಚುನಾವಣೆ ಪ್ರಕ್ರಿಯೆ ನಡೆಸಲು,ಜಿಲ್ಲಾಧಿಕಾರಿಗಳ ಅಭಿಪ್ರಾಯ ಕೇಳಲಾಗಿ,ಜಿಲ್ಲಾಡಳಿತ ಕರೊನಾ ನಿಯಂತ್ರಣದಲ್ಲಿ ತೊಡಗಿರುವುದರಿಂದ ಚುನಾವಣೆ ಕಾರ್ಯಕ್ಕೆ ಸಿಬ್ಬಂದಿಗಳ ಕೊರತೆ,ಸಾರಿಗೆ ವ್ಯವಸ್ಥೆ ಕೊರತೆ,ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತೊಂದರೆಗಳು ಉಂಟಾಗುವ ಕಂಡು ಬಂದಿರುತ್ತದೆ.ಅಲ್ಲದೆ ಚುನಾವಣೆ ಕಾರ್ಯದ ವೇಳೆ ಜನಸಾಮಾನ್ಯರ ಆರೋಗ್ಯದ ರಕ್ಷಣೆಗೆ ತೊಂದರೆ ಮತ್ತು ಕರೊನಾ ಸೋಂಕು ಹರಡುವಿಕೆಗೆ ಅವಕಾಶ ಉಂಟಾಗುತ್ತದೆ‌ ಎಂಬ ಮಾಹಿತಿ ದೊರಕಿದೆ.

ಸರ್ವೋಚ್ಚ ನ್ಯಾಯಾಲಯವು ಕಿಷನ್ ಸಿಂಗ್ ತೋಮರ್ ವಿರುದ್ದ ಸಿಟಿ ಮುನಿಸಿಪಲ್ ಕಾರ್ಪೊರೇಷನ್, ಅಹಮದಾಬಾದ್ ಮತ್ತು ಇತರರು, ಪ್ರಕರಣದಲ್ಲಿ ನೀಡಿರುವ ಆದೇಶದಲ್ಲಿ,ಮಾನವ ನಿರ್ಮಿತ ಅವಘಡಗಳಿಂದಾಗಿ ಕಾನೂನು ಸುವ್ಯವಸ್ಥೆ ಹಾಳಾದ ಪರಿಸ್ಥಿತಿಯಲ್ಲಿ.ಅಥವಾ, ನೈಸರ್ಗಿಕ ವಿಪತ್ತು ಸಂದರ್ಭದಲ್ಲಿ ಚುನಾವಣೆ ಪ್ರಕ್ರಿಯೆ ಕೈಗೊಳ್ಳುವ ಪ್ರಾಧಿಕಾರಗಳಿಗೆ ಚುನಾವಣೆ ನಡೆಸುವುದು ಕಷ್ಟ ಸಾಧ್ಯವೆಂದು ಹಾಗೂ ಇಂತಹ ಪರಿಸ್ಥಿತಿಯೆ ಅಸಾಧಾರಣ ಪರಿಸ್ಥಿತಿ (EXCEPTIONAL CIRCUMSTANCES) ಎಂದು ಉಲ್ಲೇಖಿಸಲಾಗಿರುತ್ತದೆ.

ರಾಜ್ಯ ಚುನಾವಣಾ ಆಯೋಗವು,ಗ್ರಾಮಪಂಚಾಯಿತಿ ಸಾರ್ವತ್ರಿಕ ಚುನಾವಣೆಯನ್ನು ನಡೆಸುವ ಸಾಧ್ಯಸಾಧ್ಯತೆಗಳ ಬಗ್ಗೆ ಪರಿಶೀಲಿಸಿ,ಪ್ರಸ್ತುತ ಪರಿಸ್ಥಿತಿಯನ್ನು ಅಸಾಧಾರಣ ಪರಿಸ್ಥಿತಿ (EXCEPTIONAL CIRCUMSTANCES)  ಎಂದು ಪರಿಗಣಿಸಿ,ಭಾರತ ಸಂವಿಧಾನದ ಪರಿಚ್ಛೇದ 243-ಕೆ ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಪಂಚಾಯಿತಿಗಳ ಚುನಾವಣೆಯನ್ನು ನಡೆಸುವ ಸಂಬಂಧ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಗ್ರಾಮಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ಅನಿವಾರ್ಯತೆಯಿಂದ ತಾತ್ಕಾಲಿಕವಾಗಿ ಮುಂದೂಡಲು ತೀರ್ಮಾನಿಸಿದೆ,ಅಲ್ಲದೆ ಮುಂದಿನ ದಿನಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವುದಾಗಿ ತಿಳಿಸಿದೆ.

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!