ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಬ್ಬ ವ್ಯಕ್ತಿಯಲ್ಲಿ ಇಂದು ಕರೊನಾ ವೈರಾಣು ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಇಲ್ತೊರೆ ಗ್ರಾಮದ ನಿವಾಸಿಯಾದ 35 ವರ್ಷದ ವ್ಯಕ್ತಿ (ಪಿ-2550), ಇನ್ಫ್ಲೂಯೆನ್ಜಾ ಲೈಕ್ ಇಲ್ನೆಸ್ (ಐಎಲ್ಐ) ತೊಂದರೆಯಿರುವ ಹಿನ್ನೆಲೆ, ದೇವನಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೊನಾ ವೈರಾಣು ಸೋಂಕಿನ ಆರೋಗ್ಯ ತಪಾಸಣೆಗೊಳಪಟ್ಟಾಗ ಸೋಂಕು ದೃಢಪಟ್ಟಿದೆ.
ಸೋಂಕಿತ ವ್ಯಕ್ತಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ ಬಳಸಲಾಗಿದೆ)