ಮೋದಿಯವರ ಮೊದಲ ಅವಧಿಯಲ್ಲಿನ ವೈಫಲ್ಯಗಳ ಸರಣಿ ಎರಡನೇ ಅವಧಿಯಲ್ಲಿಯೂ ಮುಂದುವರೆದಿದೆ – ಸಿದ್ದರಾಮಯ್ಯ

ದೊಡ್ಡಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಒಂದು ವರ್ಷ ಪೂರೈಸಿದೆ. ಮೊದಲ ಅವಧಿಯಲ್ಲಿನ ವೈಫಲ್ಯಗಳ ಸರಣಿ ಎರಡನೇ ಅವಧಿಯಲ್ಲಿಯೂ ಮುಂದುವರೆದಿದ್ದು, ಅವರ ಆಡಳಿತ ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಎರಡನೆ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ ಇಂದಿಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರಣಿ ಟ್ವಿಟ್ ಮೂಲಕ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ಸಂವಿಧಾನದ 370ನೇ ಆರ್ಟಿಕಲ್ ರದ್ದತಿ, ಅಯೋಧ್ಯೆ ತೀರ್ಪು, ತ್ರಿವಳಿ ತಲಾಖ್ ರದ್ದತಿ ತಮ್ಮ ಸಾಧನೆ ಎಂದು ಪ್ರಧಾನಿಯವರು ಜನರಿಗೆ ಬರೆದ ಪತ್ರದಲ್ಲಿ  ಹೇಳಿಕೊಂಡಿದ್ದಾರೆ.‌ ಇವನ್ನು ಬಿಟ್ಟು ದೇಶದ ಬಡವರು, ರೈತರು, ಕಾರ್ಮಿಕರು, ಮಹಿಳೆಯರಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿರುವ ಅವರು.

ಹಿಂದೆ ಹೇಳಿದ್ದ ಸುಳ್ಳುಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದೇ ಪ್ರಧಾನಿ ಮೋದಿಯವರ ಕಳೆದ ಒಂದು ವರ್ಷದ ಸಾಧನೆ.ನಿನ್ನೆ ಅವರು ದೇಶದ ಜನರನ್ನು ಕುರಿತು ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಸಂವಿಧಾನದ 370ನೇ ಆರ್ಟಿಕಲ್ ರದ್ದತಿ, ರಾಮಮಂದಿರ, ತ್ರಿವಳಿ ತಲಾಖ್ ರದ್ದತಿಯನ್ನು ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿಯವರೇ, ಮೊದಲ‌ ಅವಧಿಯಲ್ಲಿ ನೀವೇ ನೀಡಿದ್ದ ಕಪ್ಪು ಹಣ ವಾಪಸ್, ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಬಗೆಗಿನ ಆಶ್ವಾಸನೆಗಳೇನಾಯ್ತು? ಇವುಗಳ ಬಗ್ಗೆ ಜನತೆಗೆ ಬರೆದಿದ್ದ ಪತ್ರದಲ್ಲಿ ತಿಳಿಸಬೇಕಿತ್ತಲ್ಲಾ?

ಇಂದು ಕೇಂದ್ರ ಅಂಕಿಅಂಶಗಳ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಡಿಪಿ ಕಳೆದ ಡಿಸೆಂಬರ್ ಅಂತ್ಯಕ್ಕೆ 4.1℅ಕ್ಕೆ ತಲುಪಿದೆ. ಇದು ಈ ವರ್ಷದ ಮೊದಲ 3 ತಿಂಗಳಲ್ಲಿ 3.1% ಮುಟ್ಟಿದೆ. ಕಳೆದ 11 ವರ್ಷಗಳಲ್ಲೆ ಇದು ಕನಿಷ್ಠ ದರ.

ಮಾತು ಮಾತಿಗೆ ಪಾಕಿಸ್ತಾನದ ಕಡೆ ಬೊಟ್ಟು ಮಾಡುವ ಬಿಜೆಪಿಗರೇ, ಈ ಸಾಲಿನ ಭಾರತದ ಜಿಡಿಪಿ ಪಾಕಿಸ್ತಾನ ಮಾತ್ರವಲ್ಲ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳದ ಜಿಡಿಪಿಗಿಂತಲೂ ಕಡಿಮೆ ಇದೆ ಎನ್ನುವುದು ಗೊತ್ತಾ? ಇದಕ್ಕೆ ಯಾರು ಹೊಣೆ?

ಪ್ರಧಾನಿ ನರೇಂದ್ರಮೋದಿಯವರೇ, ತ್ರಿವಳಿ ತಲಾಖ್, ಆರ್ಟಿಕಲ್370 ರದ್ದತಿ ಬದಿಗಿಡಿ, ಉದ್ಯೋಗ ಸೃಷ್ಟಿ, ಕೃಷಿ, ಕೈಗಾರಿಕೆ, ಸೇವಾ ವಲಯ, ಬಂಡವಾಳ ಹೂಡಿಕೆಯ ಬೆಳವಣಿಗೆಗೆ ಸಂಬಂಧಿಸಿದ ದಾಖಲೆಗಳನ್ನು ಜನರಿಗೆ ತೋರಿಸಿ, ನಿಮ್ಮ ಸಾಧನೆ ಏನೆಂದು ಎಲ್ಲರೂ ನೋಡಲಿ.

ಒಬ್ಬ ವ್ಯಕ್ತಿಯ ನಾಯಕತ್ವ ಮತ್ತು ಸಾಮರ್ಥ್ಯವನ್ನು ಭಾವನಾತ್ಮಕ ವಿಚಾರಗಳಿಂದ ಅಥವಾ ಭಾಷಣಗಳಿಂದ ಅಳೆಯುವುದಲ್ಲ. ದೇಶದ ಜನರ ಬದುಕಿನಲ್ಲಿ ಏನು ಬದಲಾವಣೆ ತಂದಿದ್ದಾರೆ ಎಂಬುದು ಮುಖ್ಯ.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಾಗದ ಭಯದಿಂದ ಪ್ರಧಾನಿಗಳು ಪತ್ರದ ಮೂಲಕ ತಮ್ಮ ವೈಫಲ್ಯಗಳನ್ನು ಸಾಧನೆಗಳೆಂದು ಹೇಳಲು ಹೊರಟಿದ್ದಾರೆ.

‌ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಿರುವುದರಿಂದ ರೈತರ ಆದಾಯ ಸ್ಥಿರವಾಗಿದೆ ಎಂದು ಮೋದಿಯವರು ಪತ್ರದಲ್ಲಿ ಹೇಳಿದ್ದಾರೆ. ಆದರೆ ನಮ್ಮದೇ ರಾಜ್ಯದ ಬೀದರ್, ಕಲಬುರಗಿ, ರಾಯಚೂರು ಭಾಗದಲ್ಲಿ ಬೆಳೆದ ತೊಗರಿ ಬೇಳೆ ಕೊಳ್ಳುವವರಿಲ್ಲದೆ ಬೆಳೆಗಾರರ ಬದುಕು ಸಂಕಷ್ಟದಲ್ಲಿದೆ. ಇತರೆ ಬೆಳೆಗಳನ್ನು ಬೆಳೆದ ರೈತರ ಪಾಡು ಇದಕ್ಕಿಂದ ಭಿನ್ನವಲ್ಲ.

ಪ್ರಧಾನಿ ಮೋದಿ ಅವರೇ, ನಿಮಗೆ ನಿಜವಾಗಿ ರೈತರ ಬಗ್ಗೆ ಕಾಳಜಿಯಿದ್ದರೆ ವಿರೋಧ ಪಕ್ಷಗಳು, ರೈತರ ವಿರೋಧದ ಹೊರತಾಗಿಯೂ ಎಂಪಿಎಂಸಿ ಕಾಯಿದೆಗೆ ತಿದ್ದುಪಡಿ ಏಕೆ ಮಾಡಿದ್ರಿ?ಬಂಡವಾಳಶಾಹಿಗಳು ಮತ್ತು ಉದ್ದಿಮೆದಾರರನ್ನು ಉದ್ಧಾರ ಮಾಡಲು ಕಾಯಿದೆಗೆ ತಿದ್ದುಪಡಿ ತಂದು, ರೈತರ ಬಗ್ಗೆ ಕಾಳಜಿ ಇದೆ ಎಂದರೆ ಹೇಗೆ ಎಂದು ಆರೋಪಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!