ಮೋದಿಯವರ ಮೊದಲ ಅವಧಿಯಲ್ಲಿನ ವೈಫಲ್ಯಗಳ ಸರಣಿ ಎರಡನೇ ಅವಧಿಯಲ್ಲಿಯೂ ಮುಂದುವರೆದಿದೆ – ಸಿದ್ದರಾಮಯ್ಯ

ದೊಡ್ಡಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಒಂದು ವರ್ಷ ಪೂರೈಸಿದೆ. ಮೊದಲ ಅವಧಿಯಲ್ಲಿನ ವೈಫಲ್ಯಗಳ ಸರಣಿ ಎರಡನೇ ಅವಧಿಯಲ್ಲಿಯೂ ಮುಂದುವರೆದಿದ್ದು, ಅವರ ಆಡಳಿತ ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಎರಡನೆ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ ಇಂದಿಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರಣಿ ಟ್ವಿಟ್ ಮೂಲಕ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ಸಂವಿಧಾನದ 370ನೇ ಆರ್ಟಿಕಲ್ ರದ್ದತಿ, ಅಯೋಧ್ಯೆ ತೀರ್ಪು, ತ್ರಿವಳಿ ತಲಾಖ್ ರದ್ದತಿ ತಮ್ಮ ಸಾಧನೆ ಎಂದು ಪ್ರಧಾನಿಯವರು ಜನರಿಗೆ ಬರೆದ ಪತ್ರದಲ್ಲಿ  ಹೇಳಿಕೊಂಡಿದ್ದಾರೆ.‌ ಇವನ್ನು ಬಿಟ್ಟು ದೇಶದ ಬಡವರು, ರೈತರು, ಕಾರ್ಮಿಕರು, ಮಹಿಳೆಯರಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿರುವ ಅವರು.

ಹಿಂದೆ ಹೇಳಿದ್ದ ಸುಳ್ಳುಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದೇ ಪ್ರಧಾನಿ ಮೋದಿಯವರ ಕಳೆದ ಒಂದು ವರ್ಷದ ಸಾಧನೆ.ನಿನ್ನೆ ಅವರು ದೇಶದ ಜನರನ್ನು ಕುರಿತು ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಸಂವಿಧಾನದ 370ನೇ ಆರ್ಟಿಕಲ್ ರದ್ದತಿ, ರಾಮಮಂದಿರ, ತ್ರಿವಳಿ ತಲಾಖ್ ರದ್ದತಿಯನ್ನು ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿಯವರೇ, ಮೊದಲ‌ ಅವಧಿಯಲ್ಲಿ ನೀವೇ ನೀಡಿದ್ದ ಕಪ್ಪು ಹಣ ವಾಪಸ್, ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಬಗೆಗಿನ ಆಶ್ವಾಸನೆಗಳೇನಾಯ್ತು? ಇವುಗಳ ಬಗ್ಗೆ ಜನತೆಗೆ ಬರೆದಿದ್ದ ಪತ್ರದಲ್ಲಿ ತಿಳಿಸಬೇಕಿತ್ತಲ್ಲಾ?

ಇಂದು ಕೇಂದ್ರ ಅಂಕಿಅಂಶಗಳ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಡಿಪಿ ಕಳೆದ ಡಿಸೆಂಬರ್ ಅಂತ್ಯಕ್ಕೆ 4.1℅ಕ್ಕೆ ತಲುಪಿದೆ. ಇದು ಈ ವರ್ಷದ ಮೊದಲ 3 ತಿಂಗಳಲ್ಲಿ 3.1% ಮುಟ್ಟಿದೆ. ಕಳೆದ 11 ವರ್ಷಗಳಲ್ಲೆ ಇದು ಕನಿಷ್ಠ ದರ.

ಮಾತು ಮಾತಿಗೆ ಪಾಕಿಸ್ತಾನದ ಕಡೆ ಬೊಟ್ಟು ಮಾಡುವ ಬಿಜೆಪಿಗರೇ, ಈ ಸಾಲಿನ ಭಾರತದ ಜಿಡಿಪಿ ಪಾಕಿಸ್ತಾನ ಮಾತ್ರವಲ್ಲ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳದ ಜಿಡಿಪಿಗಿಂತಲೂ ಕಡಿಮೆ ಇದೆ ಎನ್ನುವುದು ಗೊತ್ತಾ? ಇದಕ್ಕೆ ಯಾರು ಹೊಣೆ?

ಪ್ರಧಾನಿ ನರೇಂದ್ರಮೋದಿಯವರೇ, ತ್ರಿವಳಿ ತಲಾಖ್, ಆರ್ಟಿಕಲ್370 ರದ್ದತಿ ಬದಿಗಿಡಿ, ಉದ್ಯೋಗ ಸೃಷ್ಟಿ, ಕೃಷಿ, ಕೈಗಾರಿಕೆ, ಸೇವಾ ವಲಯ, ಬಂಡವಾಳ ಹೂಡಿಕೆಯ ಬೆಳವಣಿಗೆಗೆ ಸಂಬಂಧಿಸಿದ ದಾಖಲೆಗಳನ್ನು ಜನರಿಗೆ ತೋರಿಸಿ, ನಿಮ್ಮ ಸಾಧನೆ ಏನೆಂದು ಎಲ್ಲರೂ ನೋಡಲಿ.

ಒಬ್ಬ ವ್ಯಕ್ತಿಯ ನಾಯಕತ್ವ ಮತ್ತು ಸಾಮರ್ಥ್ಯವನ್ನು ಭಾವನಾತ್ಮಕ ವಿಚಾರಗಳಿಂದ ಅಥವಾ ಭಾಷಣಗಳಿಂದ ಅಳೆಯುವುದಲ್ಲ. ದೇಶದ ಜನರ ಬದುಕಿನಲ್ಲಿ ಏನು ಬದಲಾವಣೆ ತಂದಿದ್ದಾರೆ ಎಂಬುದು ಮುಖ್ಯ.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಾಗದ ಭಯದಿಂದ ಪ್ರಧಾನಿಗಳು ಪತ್ರದ ಮೂಲಕ ತಮ್ಮ ವೈಫಲ್ಯಗಳನ್ನು ಸಾಧನೆಗಳೆಂದು ಹೇಳಲು ಹೊರಟಿದ್ದಾರೆ.

‌ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಿರುವುದರಿಂದ ರೈತರ ಆದಾಯ ಸ್ಥಿರವಾಗಿದೆ ಎಂದು ಮೋದಿಯವರು ಪತ್ರದಲ್ಲಿ ಹೇಳಿದ್ದಾರೆ. ಆದರೆ ನಮ್ಮದೇ ರಾಜ್ಯದ ಬೀದರ್, ಕಲಬುರಗಿ, ರಾಯಚೂರು ಭಾಗದಲ್ಲಿ ಬೆಳೆದ ತೊಗರಿ ಬೇಳೆ ಕೊಳ್ಳುವವರಿಲ್ಲದೆ ಬೆಳೆಗಾರರ ಬದುಕು ಸಂಕಷ್ಟದಲ್ಲಿದೆ. ಇತರೆ ಬೆಳೆಗಳನ್ನು ಬೆಳೆದ ರೈತರ ಪಾಡು ಇದಕ್ಕಿಂದ ಭಿನ್ನವಲ್ಲ.

ಪ್ರಧಾನಿ ಮೋದಿ ಅವರೇ, ನಿಮಗೆ ನಿಜವಾಗಿ ರೈತರ ಬಗ್ಗೆ ಕಾಳಜಿಯಿದ್ದರೆ ವಿರೋಧ ಪಕ್ಷಗಳು, ರೈತರ ವಿರೋಧದ ಹೊರತಾಗಿಯೂ ಎಂಪಿಎಂಸಿ ಕಾಯಿದೆಗೆ ತಿದ್ದುಪಡಿ ಏಕೆ ಮಾಡಿದ್ರಿ?ಬಂಡವಾಳಶಾಹಿಗಳು ಮತ್ತು ಉದ್ದಿಮೆದಾರರನ್ನು ಉದ್ಧಾರ ಮಾಡಲು ಕಾಯಿದೆಗೆ ತಿದ್ದುಪಡಿ ತಂದು, ರೈತರ ಬಗ್ಗೆ ಕಾಳಜಿ ಇದೆ ಎಂದರೆ ಹೇಗೆ ಎಂದು ಆರೋಪಿಸಿದ್ದಾರೆ.

ರಾಜಕೀಯ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

[ccc_my_favorite_select_button post_id="117357"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]