ಮೋದಿಯವರ ಮೊದಲ ಅವಧಿಯಲ್ಲಿನ ವೈಫಲ್ಯಗಳ ಸರಣಿ ಎರಡನೇ ಅವಧಿಯಲ್ಲಿಯೂ ಮುಂದುವರೆದಿದೆ – ಸಿದ್ದರಾಮಯ್ಯ

ದೊಡ್ಡಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಒಂದು ವರ್ಷ ಪೂರೈಸಿದೆ. ಮೊದಲ ಅವಧಿಯಲ್ಲಿನ ವೈಫಲ್ಯಗಳ ಸರಣಿ ಎರಡನೇ ಅವಧಿಯಲ್ಲಿಯೂ ಮುಂದುವರೆದಿದ್ದು, ಅವರ ಆಡಳಿತ ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಎರಡನೆ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ ಇಂದಿಗೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರಣಿ ಟ್ವಿಟ್ ಮೂಲಕ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ಸಂವಿಧಾನದ 370ನೇ ಆರ್ಟಿಕಲ್ ರದ್ದತಿ, ಅಯೋಧ್ಯೆ ತೀರ್ಪು, ತ್ರಿವಳಿ ತಲಾಖ್ ರದ್ದತಿ ತಮ್ಮ ಸಾಧನೆ ಎಂದು ಪ್ರಧಾನಿಯವರು ಜನರಿಗೆ ಬರೆದ ಪತ್ರದಲ್ಲಿ  ಹೇಳಿಕೊಂಡಿದ್ದಾರೆ.‌ ಇವನ್ನು ಬಿಟ್ಟು ದೇಶದ ಬಡವರು, ರೈತರು, ಕಾರ್ಮಿಕರು, ಮಹಿಳೆಯರಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿರುವ ಅವರು.

ಹಿಂದೆ ಹೇಳಿದ್ದ ಸುಳ್ಳುಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದೇ ಪ್ರಧಾನಿ ಮೋದಿಯವರ ಕಳೆದ ಒಂದು ವರ್ಷದ ಸಾಧನೆ.ನಿನ್ನೆ ಅವರು ದೇಶದ ಜನರನ್ನು ಕುರಿತು ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಸಂವಿಧಾನದ 370ನೇ ಆರ್ಟಿಕಲ್ ರದ್ದತಿ, ರಾಮಮಂದಿರ, ತ್ರಿವಳಿ ತಲಾಖ್ ರದ್ದತಿಯನ್ನು ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿಯವರೇ, ಮೊದಲ‌ ಅವಧಿಯಲ್ಲಿ ನೀವೇ ನೀಡಿದ್ದ ಕಪ್ಪು ಹಣ ವಾಪಸ್, ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಬಗೆಗಿನ ಆಶ್ವಾಸನೆಗಳೇನಾಯ್ತು? ಇವುಗಳ ಬಗ್ಗೆ ಜನತೆಗೆ ಬರೆದಿದ್ದ ಪತ್ರದಲ್ಲಿ ತಿಳಿಸಬೇಕಿತ್ತಲ್ಲಾ?

ಇಂದು ಕೇಂದ್ರ ಅಂಕಿಅಂಶಗಳ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಡಿಪಿ ಕಳೆದ ಡಿಸೆಂಬರ್ ಅಂತ್ಯಕ್ಕೆ 4.1℅ಕ್ಕೆ ತಲುಪಿದೆ. ಇದು ಈ ವರ್ಷದ ಮೊದಲ 3 ತಿಂಗಳಲ್ಲಿ 3.1% ಮುಟ್ಟಿದೆ. ಕಳೆದ 11 ವರ್ಷಗಳಲ್ಲೆ ಇದು ಕನಿಷ್ಠ ದರ.

ಮಾತು ಮಾತಿಗೆ ಪಾಕಿಸ್ತಾನದ ಕಡೆ ಬೊಟ್ಟು ಮಾಡುವ ಬಿಜೆಪಿಗರೇ, ಈ ಸಾಲಿನ ಭಾರತದ ಜಿಡಿಪಿ ಪಾಕಿಸ್ತಾನ ಮಾತ್ರವಲ್ಲ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳದ ಜಿಡಿಪಿಗಿಂತಲೂ ಕಡಿಮೆ ಇದೆ ಎನ್ನುವುದು ಗೊತ್ತಾ? ಇದಕ್ಕೆ ಯಾರು ಹೊಣೆ?

ಪ್ರಧಾನಿ ನರೇಂದ್ರಮೋದಿಯವರೇ, ತ್ರಿವಳಿ ತಲಾಖ್, ಆರ್ಟಿಕಲ್370 ರದ್ದತಿ ಬದಿಗಿಡಿ, ಉದ್ಯೋಗ ಸೃಷ್ಟಿ, ಕೃಷಿ, ಕೈಗಾರಿಕೆ, ಸೇವಾ ವಲಯ, ಬಂಡವಾಳ ಹೂಡಿಕೆಯ ಬೆಳವಣಿಗೆಗೆ ಸಂಬಂಧಿಸಿದ ದಾಖಲೆಗಳನ್ನು ಜನರಿಗೆ ತೋರಿಸಿ, ನಿಮ್ಮ ಸಾಧನೆ ಏನೆಂದು ಎಲ್ಲರೂ ನೋಡಲಿ.

ಒಬ್ಬ ವ್ಯಕ್ತಿಯ ನಾಯಕತ್ವ ಮತ್ತು ಸಾಮರ್ಥ್ಯವನ್ನು ಭಾವನಾತ್ಮಕ ವಿಚಾರಗಳಿಂದ ಅಥವಾ ಭಾಷಣಗಳಿಂದ ಅಳೆಯುವುದಲ್ಲ. ದೇಶದ ಜನರ ಬದುಕಿನಲ್ಲಿ ಏನು ಬದಲಾವಣೆ ತಂದಿದ್ದಾರೆ ಎಂಬುದು ಮುಖ್ಯ.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಾಗದ ಭಯದಿಂದ ಪ್ರಧಾನಿಗಳು ಪತ್ರದ ಮೂಲಕ ತಮ್ಮ ವೈಫಲ್ಯಗಳನ್ನು ಸಾಧನೆಗಳೆಂದು ಹೇಳಲು ಹೊರಟಿದ್ದಾರೆ.

‌ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಿರುವುದರಿಂದ ರೈತರ ಆದಾಯ ಸ್ಥಿರವಾಗಿದೆ ಎಂದು ಮೋದಿಯವರು ಪತ್ರದಲ್ಲಿ ಹೇಳಿದ್ದಾರೆ. ಆದರೆ ನಮ್ಮದೇ ರಾಜ್ಯದ ಬೀದರ್, ಕಲಬುರಗಿ, ರಾಯಚೂರು ಭಾಗದಲ್ಲಿ ಬೆಳೆದ ತೊಗರಿ ಬೇಳೆ ಕೊಳ್ಳುವವರಿಲ್ಲದೆ ಬೆಳೆಗಾರರ ಬದುಕು ಸಂಕಷ್ಟದಲ್ಲಿದೆ. ಇತರೆ ಬೆಳೆಗಳನ್ನು ಬೆಳೆದ ರೈತರ ಪಾಡು ಇದಕ್ಕಿಂದ ಭಿನ್ನವಲ್ಲ.

ಪ್ರಧಾನಿ ಮೋದಿ ಅವರೇ, ನಿಮಗೆ ನಿಜವಾಗಿ ರೈತರ ಬಗ್ಗೆ ಕಾಳಜಿಯಿದ್ದರೆ ವಿರೋಧ ಪಕ್ಷಗಳು, ರೈತರ ವಿರೋಧದ ಹೊರತಾಗಿಯೂ ಎಂಪಿಎಂಸಿ ಕಾಯಿದೆಗೆ ತಿದ್ದುಪಡಿ ಏಕೆ ಮಾಡಿದ್ರಿ?ಬಂಡವಾಳಶಾಹಿಗಳು ಮತ್ತು ಉದ್ದಿಮೆದಾರರನ್ನು ಉದ್ಧಾರ ಮಾಡಲು ಕಾಯಿದೆಗೆ ತಿದ್ದುಪಡಿ ತಂದು, ರೈತರ ಬಗ್ಗೆ ಕಾಳಜಿ ಇದೆ ಎಂದರೆ ಹೇಗೆ ಎಂದು ಆರೋಪಿಸಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!