ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದಿದ್ದಲ್ಲಿ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ : ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು : ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ,  ಬಿ.ಬಿ.ಎಂ.ಪಿ ನಿಯಂತ್ರಣಾ ಕೊಠಡಿ/ಸಹಾಯವಾಣಿಗಳಿಗೆ  ಸಾರ್ವಜನಿಕರಿಂದ ಬರುವ ಕರೆಗಳನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಬೇಕು. ಕರೆ ಸ್ವೀಕರಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.  

ಮುಂಗಾರು ಮಳೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಅವರ  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.   

ನಿನ್ನೆ ಮೊನ್ನೆ ಸುರಿದ ಅಕಾಲಿಕ ಮಳೆಯಿಂದ ಸಾವೀಗೀಡಾದ ಇಬ್ಬರು ಹೆಣ್ಣು ಮಕ್ಕಳ ಕುಟುಂಬಕ್ಕೆ ಬಿ.ಬಿ.ಎಂ.ಪಿ ವತಿಯಿಂದ ತಲಾ 5 ಲಕ್ಷ ರೂ.ಗಳ ಪರಿಹಾರ ಕೊಡಲಾಯಿತು. ಅಪಾಯಕಾರಿ ರೆಂಬೆ ಕೊಂಬೆಗಳನ್ನು ಗುರುತಿಸಿ ಕತ್ತರಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದ ಅವರು,  ಎರಡು ದಿನಗಳಲ್ಲಿ ನಗರದಲ್ಲಿ  ಮಳೆಯಿಂದ ಬಿದ್ದ ಮರಗಳನ್ನು  ತೆರವುಗೊಳಿಸಲು   ಅಧಿಕಾರಿಗಳಿಗೆ ಸೂಚಿಸಿದರು. ನಗರ ಸಂಚಾರಕ್ಕೆ ಬಂದ ಸಂದರ್ಭದಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.  ನಗರದಲ್ಲಿ ಯಾವುದೇ ಸಾವು, ನೋವು ಸಂಭವಿಸದಂತೆ ಅಗತ್ಯವಿರುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. 

ಬಿ.ಬಿ.ಎಂ.ಪಿ, ಪೊಲೀಸ್, ಅರಣ್ಯ, ಸಾರಿಗೆ ಹಾಗೂ ಅಗ್ನಿಶಾಮಕ ಇಲಾಖೆಗಳು ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಆದೇಶಿಸಿದರು. ಮರಗಳ ಕೆಳೆಗೆ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಮುನ್ನೆಚ್ಚರಿಕೆ ವಹಿಸಿ ಅನಾಹುತವಾಗುವುದನ್ನು ತಡೆಗಟ್ಟಲು ಕ್ರಮ ವಹಿಸಲು ಸೂಚಿಸಿದ ಅವರು, ನಗರದ 8 ವಲಯಗಳಲ್ಲಿ ಮ್ಯಾನ್ ಹೋಲ್‍ಗಳನ್ನು ಮುಚ್ಚಬೇಕು. ಜೆಟ್ಟಿಂಗ್ ಮೆಶೀನ್‍ಗಳು ಲಭ್ಯವಿರಬೇಕು ಎಂದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಬೆಂಗಳೂರು ನಗರದ ಎಲ್ಲ ಎಂಟು ವಲಯಗಳಲ್ಲಿ ಬಿ.ಬಿ.ಎಂ.ಪಿ, ಬೆಸ್ಕಾಂ, ಒಳಚರಂಡಿ ಮಂಡಳಿ ಹಾಗೂ ಪೋಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳನ್ನು  ಒಳಗೊಂಡ ತಂಡವನ್ನು ರಚಿಸಿ ಮಳೆ ಸಂಬಂಧಿ ದೂರುಗಳು ಬಂದಲ್ಲಿ ತಕ್ಷಣವೇ ಕ್ರಮವಹಿಸಬೇಕು ಎಂದರು.  ಅನಾಹುತಗಳು ಸಂಭವಿಸಿದಲ್ಲಿ  ಸಹಾಯಕ ಅಭಿಯಂತರರನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದರು. 

ಸಚಿವ ಭೈರತಿ ಬಸವರಾಜ್, ಮುಖ್ಯ ಕಾರ್ಯದರ್ಶಿ ಟಿ.ಯೆಂ.ವಿಜಯಭಾಸ್ಕರ್,  ಬಿ.ಬಿ.ಎಂ.ಪಿ.ಆಯುಕ್ತ ಬಿ.ಹೆಚ್ .ಅನಿಲ್ ಕುಮಾರ್,  ಬೆಂಗಳೂರು ನಗರ ಪೋಲೀಸ್ ಆಯುಕ್ತ ಭಾಸ್ಕರ್ ರಾವ್,  ನಗರಾಭಿವೃದ್ಧಿ ಇಲಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಉಪಸ್ಥಿತರಿದ್ದರು. 

ರಾಜಕೀಯ

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ (D.K.Shivakumar) ಮಂಗಳವಾರ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="110364"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!