ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ / ಹಣ್ಣು, ತರಕಾರಿ ಬೆಳೆಗಳ ನಷ್ಟಕ್ಕೆ ಪರಿಹಾರಧನ / ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ

ದೊಡ್ಡಬಳ್ಳಾಪುರ : ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಯೋಜನೆ, ಪ್ರೇರಣಾ ಯೋಜನೆ, ಸಮೃದ್ಧಿ ಯೋಜನೆ, ಉನ್ನತಿಯೋಜನೆ, ಐರಾವತ ಯೋಜನೆ, ಸ್ಪೂರ್ತಿ ಯೋಜನೆ, ಪ್ರಬುದ್ಧ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು 2020ರ ಜೂನ್ 30ರವರೆಗೆ ವಿಸ್ತರಿಸಲಾಗಿದೆ. 

ಆನ್ಲೈನ್ ಮೂಲಕ ವೈಬ್ಸೈಟ್  www.ksskdc.kar.nic.in ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-23221320/080-29781036   ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಣ್ಣು, ತರಕಾರಿ ಬೆಳೆಗಳ ನಷ್ಟಕ್ಕೆ ಪರಿಹಾರಧನ

ದೊಡ್ಡಬಳ್ಳಾಪುರ  : ಕೋವಿಡ್-19 ನಿಂದಾಗಿ ರಾಜ್ಯಾದ್ಯಾಂತ ಸಂಪೂರ್ಣ ಲಾಕ್ ಡೌನ್ ಆದ ಕಾರಣ ರಾಜ್ಯದಲ್ಲಿ ಕೂಲಿ ಕಾರ್ಮಿಕರ ಅಭಾವದಿಂದ ಹಣ್ಣು ಮತ್ತು ತರಕಾರಿ ಬೆಳೆಗಳ ಕಟಾವು, ಸಾಗಾಣಿಕೆ, ಮಾರಾಟ ಹಾಗೂ ಸಂಸ್ಕರಣೆ ಮಾಡಲು ಸಾಧ್ಯವಾಗಿರುವುದಿಲ್ಲ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಡಿಕೆ ಇಲ್ಲದ ಕಾರಣ ಕೆಲವು ಹಣ್ಣು ಮತ್ತು ತರಕಾರಿ ಬೆಳೆಗಳ ಧಾರಣೆಯಲ್ಲಿ ಕುಸಿತ ಕಂಡುಬಂದಿರುತ್ತದೆ ಅಲ್ಲದೇ ಸಾರಿಗೆ ಅಭಾವದಿಂದ ಹೊರರಾಜ್ಯ ಹಾಗೂ ಹೊರದೇಶಗಳಿಗೂ ಮಾರಾಟ ಮಾಡಲು ಹಿನ್ನೆಡೆಯಾಗಿರುತ್ತದೆ. ಈ ಎಲ್ಲಾ ಕಾರಣಗಳಿಂದ ರಾಜ್ಯದ ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ಆರ್ಥಿಕವಾಗಿ ಬಹಳ ನಷ್ಟವಾಗಿದ್ದು, ಸದರಿ ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾರವಾಗಿ ಗರಿಷ್ಟ ಒಂದು ಹೆಕ್ಟೇರ್ ಗೆ ರೂ.15.000/- ಮೀರದಂತೆ ಹಾಗೂ ಕನಿಷ್ಟ ರೂ.2000/- ಗಳ ಪರಿಹಾರ ಧನವನ್ನು ನೀಡಲಾಗುವುದು. ರೈತರು ಬೆಳೆದಿರುವ ಹಣ್ಣು ಮತ್ತು ತರಕಾರಿ ಬೆಳೆಯ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರೊರಾಟಾ (PRORATA) ಆಧರಿಸಿ ಗರಿಷ್ಟ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಮಿತಿಗೊಳಿಸಿ ಹಣ್ಣಿನ ಬೆಳೆಗಳಾದ ಬಾಳೆ, ಪಪ್ಪಾಯ, ದ್ರಾಕ್ಷಿ (ಟೇಬಲ್), ಅಂಜೂರ, ಅನಾನಸ್, ಕಲ್ಲಂಗಡಿ ಮತ್ತು ಕರಬೂಜ ಮಾತ್ರ ಮತ್ತು ತರಕಾರಿ ಬೆಳೆಗಳಾದ, ಟೊಮೆಟೋ, ಹಸಿರುಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಕ್ಯಾರೆಟ್, ಈರುಳ್ಳಿ, ದಪ್ಪ ಮೆಣಸಿಣಕಾಯಿ ಬೆಳಗಳಿಗೆ ಮಾತ್ರ ಪರಿಹಾರಧನ ನೀಡಲಾಗುವುದು.

ಕರ್ನಾಟಕ ಸರ್ಕಾರದ ಇ-ಆಡಳಿತ ವತಿಯಿಂದ ಕೈಗೊಳ್ಳಲಾದ 1019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆಯ ಮಾಹಿತಿಯನ್ನು ಆಧರಿಸಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಪರಿಹಾರಧನ ನೀಡಲಾಗುವುದು. 2019-20 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಹಣ್ಣು ಮತ್ತು ತರಕಾರಿ ಬೆಳೆದ ರೈತರು ಯಾವುದೇ ದಾಖಲಾತಿಗಳನ್ನು ನೀಡುವ ಅವಶ್ಯಕತೆ ಇರುವುದಿಲ್ಲ. ಫಲಾನುಭವಿಯ ಆಯ್ಕೆಯನ್ನು ಹಾಲಿ ಲಭ್ಯವಿರುವ 2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆಯ ಅನುಗುಣವಾಗಿ ಮಾತ್ರ ಪರಿಗಣಿಸಲಾಗುವುದು, ಆದರೆ ಕಲ್ಲಂಗಡಿ ಮತ್ತು ಕರಬೂಜ ಬೇಸಿಗೆ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾಗಿಲ್ಲದಿದ್ದರೆ  ಅಂತಹ ರೈತರು ಹಾಗೂ ಬಾಳೆ ಹಾಗೂ ಈರುಳ್ಳಿ ಬೆಳೆಗೆ ಸಂಬಂಧಿಸಿದಂತೆ ಮಾರ್ಚ್ 2ನೇ ವಾರದ ನಂತರ ಕಟಾವಿಗೆ ಬಂದಿರುವ ಫಸಲಿಗೆ ಮಾತ್ರ ಪರಿಹಾರಧನ ನೀಡಲಾಗುತ್ತಿದ್ದು, ಸದರಿ ಫಸಲಿಗೆ ಒಳಪಡುವ ರೈತರು ಮತ್ತು  ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ರೈತರ ಎಫ್ಐಡಿ (FID) ದಾಖಲಾಗದೇ ಇದ್ದಲ್ಲಿ ಫಲಾನುಭವಿವಾರು ಎಫ್ಐಡಿ (FID) ಸೃಷ್ಟಿಸಲು ರೈತರು ಅರ್ಜಿಯೊಂದಿಗೆ ಆರ್ಟಿಸಿ (RTC), ಆಧಾರ್ ಕಾರ್ಡ್, ರೈತರ ಬ್ಯಾಂಕ್ ಪುಸ್ತಕದ ಜೆರಾಕ್ಸ್, ಸ್ವಯಂ ಧೃಢೀಕೃತ ಘೋಷಣಾ ಪತ್ರದೊಂದಿಗೆ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆಗೆ 2020ರಜೂನ್ 11ರ, ಸಂಜೆ 5.00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸುವುದು. ತದನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸದರಿ ಹಣ್ಣು ಮತ್ತು ತರಕಾರಿ ಬೆಳೆಗಾರರು ಸಲ್ಲಿಸುವ ಅರ್ಜಿಗಳ ತಾಕುಗಳನ್ನು ಹೋಬಳಿ ಮಟ್ಟದ ಸಮಿತಿಯು ಶೇಕಡ 100 ರಷ್ಟು ತಾಕು ಪರಿಶೀಲನೆ ಕೈಗೊಂಡು ಧೃಢೀಕರಿಸಿ 2020ರ ಜೂನ್ 24ರೊಳಗಾಗಿ ತಾಲ್ಲೂಕು ಮಟ್ಟದ ಸಮಿತಿಗೆ ಸಲ್ಲಿಸುವುದು

ಮುಂದುವರೆದು, ಮಾರ್ಚ್ 4ನೇ ವಾರದ ನಂತರ ನಾಟಿ ಮಾಡಿರುವ ತರಕಾರಿ ಮತ್ತು ಹಣ್ಣು ಬೆಳೆಗಾರರನ್ನು ಸದರಿ ಯೋಜನೆಯಡಿ ಪರಿಹಾರಕ್ಕೆ ಪರಿಗಣಿಸಲು ಅವಕಾಶವಿರುವುದಿಲ್ಲ. ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ, ಗ್ರಾಮ ಪಂಚಾಯತಿ ಹಾಗೂ ತಾಲ್ಲೂಕು ತೋಟಗಾರಿಕೆ ಇಲಾಖೆಯ ಸೂಚನಾ ಫಲಕದಲ್ಲಿ 2019ರ ಮುಂಗಾರು ಹಾಗೂ 2019ರ ಹಿಂಗಾರು (Crpo Survey) ರೈತರ ಪಟ್ಟಿಯನ್ನು ಪ್ರಕಟಿಸಲಾಗುವುದು, ಸದರಿ ಮಾಹಿತಿಯನ್ನು ಜಿಲ್ಲೆಯ ಎಲ್ಲಾ ರೈತರು ಪರಿಶೀಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸಬಹುದು. ದೇವನಹಳ್ಳಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9448001644, ತಾಂತ್ರಿಕ ಸಹಾಯಕರು ಮೊ.ಸಂ.: 9886736664, ಕಚೇರಿ  ದೂ.ಸಂ.: 080 27681204. ದೊಡ್ಡಬಳ್ಳಾಪುರ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9632410677, ತಾಂತ್ರಿಕ ಸಹಾಯಕರು ಮೊ.ಸಂ.: 9741895988, ಕಚೇರಿ  ದೂ.ಸಂ.: 080 27623770. ಹೊಸಕೋಟೆ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9538953939, ತಾಂತ್ರಿಕ ಸಹಾಯಕರು ಮೊ.ಸಂ.: 8453966868, ಕಚೇರಿ  ದೂ.ಸಂ.: 080 29716626. ಹಾಗೂ ನೆಲಮಂಗಲ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ಮೊ.ಸಂ.: 9901754339, ತಾಂತ್ರಿಕ ಸಹಾಯಕರು ಮೊ.ಸಂ.: 9980276248, ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಉಪ ನಿರ್ದೇಶಕರು(ಜಿಪಂ) ಮಾಹಾಂತೇಶ ಮುರಗೋಡ (ಮೊ.ಸಂ.: 9448999214) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ

ದೊಡ್ಡಬಳ್ಳಾಪುರ : ಲಾಕ್ಡೌನ್ ಅವಧಿಯಲ್ಲಿ ದೈನಂದಿನ ಉಟೋಪಚಾರಕ್ಕಾಗಿ ವಲಸೆ ಕಾರ್ಮಿಕರಿಗೆ ತೊಂದರೆಯಾಗದಂತೆ ಕೇಂದ್ರ ಸರ್ಕಾರವು ಆತ್ಮ ನಿರ್ಭರ್ ಅಭಿಯಾನ್ ಯೋಜನೆಯಡಿ, ಷರತ್ತುಬದ್ಧವಾಗಿ ಉಚಿತ ಪಡಿತರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೆಲೆಸಿರುವ ವಲಸೆ ಕಾರ್ಮಿಕರಿಗೆ ವಿತರಿಸಲಾಗುವುದು. 

ವಲಸೆ ಕಾರ್ಮಿಕ ಕುಟುಂಬದ ಪ್ರತಿ ಸದಸ್ಯರಿಗೆ 06 ಕೆ.ಜಿ.ಅಕ್ಕಿ ಹಾಗೂ ಕೇಂದ್ರ ಸರ್ಕಾರದಿಂದ ಪ್ರತಿಯೊಂದು ಕುಟುಂಬಕ್ಕೆ ನೀಡುವ ಹಂಚಿಕೆಯಂತೆ ಕಡಲೇಕಾಳು ಉಚಿತವಾಗಿ ನೀಡಲಾಗುವುದು.

ವಲಸೆ ಕಾರ್ಮಿಕರಿಗೆ ಮೇ ಮತ್ತು ಜೂನ್ ಮಾಹೆಯಲ್ಲಿ ಉಚಿತ ಪಡಿತರ ವಿತರಿಸಲು ಕ್ರಮವಹಿಸಲಾಗಿದ್ದು, ಮೇ ಮಾಹೆಯಲ್ಲಿ ಉಚಿತ ಪಡಿತರ ಪಡೆಯದಿರುವವರು, ಜೂನ್  ಮಾಹೆಯಲ್ಲೂ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜೂನ್ 10ರ ವರೆಗೆ ಉಚಿತ ಪಡಿತರ ವಿತರಣೆಯಾಗಲಿದೆ.      

ಸರ್ಕಾರದ ಆದೇಶ ಪ್ರಕಾರ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹಾಗೂ ಒಂದು ತಾಲ್ಲೂಕಿನಿಂದ ಮತ್ತೊಂದು ತಾಲ್ಲೂಕಿಗೆ ಜೀವನ ನಿರ್ವಹಣೆಗಾಗಿ ಹೋಗಿರುವವರನ್ನು ವಲಸೆ ಕಾರ್ಮಿಕರು ಎಂಬುದಾಗಿ ಪರಿಗಣಿಸಲಾಗಿದ್ದು, ಫಲಾನುಭವಿಯು ಹಾಲಿ ನೆಲೆಸಿರುವ ಸ್ಥಳದಲ್ಲಿ ಸ್ವಂತ ಮನೆಯನ್ನು ಹೊಂದಿರಬಾರದು ಹಾಗೂ  ಆದಾಯ ತೆರಿಗೆ ಪಾವತಿದಾರರಾಗಿರಬಾ

ರಾಜಕೀಯ

KPCC ಅಧ್ಯಕ್ಷ ಸ್ಥಾನ ಬದಲಾವಣೆ .. ಊಹಾಪೋಹದ ಸುದ್ದಿ ಮಾಡಬೇಡಿ ಎಂದು ಖರ್ಗೆ ಕಿಡಿ

KPCC ಅಧ್ಯಕ್ಷ ಸ್ಥಾನ ಬದಲಾವಣೆ .. ಊಹಾಪೋಹದ ಸುದ್ದಿ ಮಾಡಬೇಡಿ ಎಂದು ಖರ್ಗೆ

ತಿರುಚಿ, ಮಾಲ್ ಮಸಾಲ್ ಹಚ್ಚುತ್ತೀರಿ..ಅದಕ್ಕೆ ಬಹಳ ಜನ ನಿಮಗೆ ನಿಜ ಹೇಳೋದಿಲ್ಲ. ನಾವ್ ಒಂದ್ ಹೇಳುದ್ರೆ ನಿಮ್ ಆಫೀಸ್ ಓದ ನಂತರ ಮತ್ತೊಂದು ಪ್ರಸಾರ ಆಗುತ್ತೆ. Mallikarjun Kharge

[ccc_my_favorite_select_button post_id="102672"]
ವಿಜಯೇಂದ್ರನ ತೆಗೆದುಬಿಡ್ತಾರೆ ಅಂತ ಕೆಲ ನ್ಯೂಸ್ ಚಾನಲ್ ಬಾಸ್‌ಗಳಿಗೆ ಚಿಂತೆಯಾಗಿದೆ; ಯತ್ನಾಳ್ ಲೇವಡಿ

ವಿಜಯೇಂದ್ರನ ತೆಗೆದುಬಿಡ್ತಾರೆ ಅಂತ ಕೆಲ ನ್ಯೂಸ್ ಚಾನಲ್ ಬಾಸ್‌ಗಳಿಗೆ ಚಿಂತೆಯಾಗಿದೆ; ಯತ್ನಾಳ್ ಲೇವಡಿ

ನ್ಯೂಸ್ ಚಾನಲ್ ನಲ್ಲಿ ಸೇರ್ಕೊಂಡು ಅವನ ಪರವಾಗಿಯೇ ಸುದ್ದಿ ಮಾಡ್ತಾ ಇದ್ದಾರೆ. ಅವರನ್ನ ಗಮನಿಸಿದ್ದಾರೆ. ನಿಮ್ದ್ ನೀವ್ ಹೊಡಿತಾ ಇರಿ, ನಮ್ದ್ ನಾವ್ ಮಾಡ್ತಾ ಇರ್ತೀವಿ ಎಂದರು. bjp

[ccc_my_favorite_select_button post_id="102468"]
MahaKumbhamela: ಮಹಾ ಕುಂಭಮೇಳದಲ್ಲಿ ಮಿಂದೆದ್ದ ರಾಷ್ಟ್ರಪತಿ| Video

MahaKumbhamela: ಮಹಾ ಕುಂಭಮೇಳದಲ್ಲಿ ಮಿಂದೆದ್ದ ರಾಷ್ಟ್ರಪತಿ| Video

ರಾಷ್ಟ್ರಪತಿ ದೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನದ ಬಳಿಕ ತ್ರಿವೇಣಿ ಸಂಗಮದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. Maha Kumbhamela

[ccc_my_favorite_select_button post_id="102507"]

Aero India 2025: ಏರ್‌ಶೋಗೆ ಇಂದು ಚಾಲನೆ..

[ccc_my_favorite_select_button post_id="102489"]

ಹರ ಹರ ಮಹಾದೇವ!: ಕುಂಭಮೇಳದಲ್ಲಿ ಡಿಸಿಎಂ‌ ಡಿಕೆ

[ccc_my_favorite_select_button post_id="102476"]

ಗುಂಡಿನ ಚಕಮಕಿ: 31 ಮಂದಿ ನಕ್ಸಲರ ಹತ್ಯೆ..

[ccc_my_favorite_select_button post_id="102472"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ..!

ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ..!

ಸಿದ್ದೇಶ್ ಹಾಗೂ ಜಗದೀಶ್ ನಡುವೆ ಕುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಇದು ಅತಿರೇಕ ಮಾಡಿಕೊಂಡು ಜಗದೀಶ್ ಮೇಲೆ ಕಲ್ಲು ಎತ್ತಿ ಹಾಕಿ ಸಿದ್ದೇಶ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102670"]
ಚಾಲಕನಿಗೆ ಮೂರ್ಛೆ. ಮರಕ್ಕೆ KSRTC ಬಸ್‌ ಡಿಕ್ಕಿ..!

ಚಾಲಕನಿಗೆ ಮೂರ್ಛೆ. ಮರಕ್ಕೆ KSRTC ಬಸ್‌ ಡಿಕ್ಕಿ..!

ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೇ ಹೋಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಂಡು ಎಡಭಾಗಕ್ಕೆ ಪಲ್ಟಿಯಾಗಿ ಅಪಾರ ಸಾವು-ನೋವು ಆಗುತ್ತಿತ್ತು KSRTC

[ccc_my_favorite_select_button post_id="102495"]

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು

[ccc_my_favorite_select_button post_id="102325"]

Doddaballapura: ಬಸ್ ಅಪಘಾತ News update.. ಚಿಕಿತ್ಸೆ

[ccc_my_favorite_select_button post_id="102061"]

Doddaballapura: ಮತ್ತದೇ ಜಾಗದಲ್ಲಿ KSRTC ಬಸ್ ಅಪಘಾತ..!

[ccc_my_favorite_select_button post_id="102046"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!