ಡಿ.ಕೆ.ಶಿವಕುಮಾರ್ ಪದಗ್ರಹಣ ಕಾಂಗ್ರೆಸ್ ಸಂಘಟನಾ ಶಕ್ತಿಯಾಗಲಿದೆ – ಎನ್.ಎಸ್.ಬೋಸ್ ರಾಜ್

ದೊಡ್ಡಬಳ್ಳಾಪುರ : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಜೂನ್ 7 ರಂದು ನಡೆಯಲಿದ್ದು, ಈ ಕಾರ್ಯಕ್ರಮ ಕಾಂಗ್ರೆಸ್ ಸಂಘಟನಾ ಶಕ್ತಿಯಾಗಿ ರೂಪುಗೊಳ್ಳಲಿದೆ ಎಂದು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸ್ ರಾಜ್  ತಿಳಿಸಿದರು. 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣದ ಅಂಗವಾಗಿ ನಗರದ ಬಮೂಲ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವಲ್ಲಿ ವಿಫಲವಾಗುತ್ತಿದ್ದು, ಗ್ರಾಮ ಪಂಚಾಯಿತಿ ಚುನಾವಣೆ ಅವಧಿ ಮುಗಿದಿದ್ದರೂ ತಮ್ಮ ಪಕ್ಷದ ಕಾರ್ಯಕರ್ತರನ್ನು ಸಮಿತಿ ಸದಸ್ಯರನ್ನಾಗಿ ಮಾಡಲು ಹುನ್ನಾರ ನಡೆಸಿದೆ. ಪಕ್ಷ ಸಂಘಟನೆಗಾಗಿ ಕಾರ್ಯಕರ್ತರ ಸಹಭಾಗಿತ್ವವನ್ನು ವಿನೂತನ ರೀತಿಯಲ್ಲಿ ನಡೆಸಲಾಗುತ್ತಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ ಎಂದು ತಿಳಿಸಿದರು. 

ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಕರೊನಾ ವೈರಸ್ ತಡೆಗಟ್ಟುವುದರಲ್ಲಿ ವಿಫಲವಾಗಿವೆ. ದಿನೇ ದಿನೇ ಕೊರೊನಾ ವೈರಸ್ ಹೆಚ್ಚಾಗುತ್ತಿದೆ.  ಈ ನಿಟ್ಟಿನಲ್ಲಿ ಜೂನ್ 07 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ ಅವರ ಪದಗ್ರಹಣ ಮಾಡುತ್ತಿರುವುದರಿಂದ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರದ ವಿವಿಧ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಎಲ್ ಇಡಿ ಟಿ.ವಿ, ವ್ಯವಸ್ಥೆ ಮಾಡಿ, ಕಾರ್‍ಯಕ್ರಮ ವೀಕ್ಷಣೆಯಲ್ಲಿ ಎಲ್ಲಾ ಕಾರ್‍ಯಕರ್ತರು ಭಾಗವಹಿಸಬೇಕಿದೆ. ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ. ಕಾರ್‍ಯಕ್ರಮದಲ್ಲಿ ಬಳಸುವ ಪ್ಲೆಕ್ಸ್, ಕಾರ್‍ಯಕ್ರಮದ ಆಯೋಜನೆಯಲ್ಲಿ ಪಕ್ಷದ ಶಿಷ್ಟಾಚಾರ ಹಾಗೂ ಕಾರ್‍ಯಕ್ರಮದ ರೂಪುರೇಷೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪದಗ್ರಹಣ ಸಮಾರಂಭ ವೈಭವೀಕರಣವಾಗದೇ ಪಕ್ಷದ ಸಂಘಟನೆಯಲ್ಲಿ ಶಕ್ತಿಯುತವಾಗಿ ರೂಪುಗೊಳ್ಳಬೇಕಿದೆ ಎಂದರು.

ಸಭೆಯಲ್ಲಿ  ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಕಾರ್ಯದರ್ಶಿಗಳಾದ ಗೋವಿಂದಪ್ಪ, ಎ.ಸಿ.ಶ್ರೀನಿವಾಸ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮುನಿಶಾಮಪ್ಪ, ಕೆಪಿಸಿಸಿ ಸದಸ್ಯಜಿ.ಲಕ್ಷ್ಮೀಪತಿ,ವೀಕ್ಷಕ ಮಂಜುನಾಥ ಅದ್ದೆ, ಜಿಲ್ಲಾ ಉಸ್ತುವಾರಿ ರತ್ನಪ್ರಭಾ,  ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಉಪಾಧ್ಯಕ್ಷೆ ಪದ್ಮಾವತಿ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್,  ಕಾಂಗ್ರೆಸ್ ತಾಲೂಕು ಬ್ಲಾಕ್ ಅಧ್ಯಕ್ಷ  ಎಂ.ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ (ಅಪ್ಪಿ), ಜಿ.ಪಂ ಸದಸ್ಯ ಚುಂಚೇಗೌಡ, ತಾಲೂಕು ಪಂಚಾಯಿತಿ ಸದಸ್ಯ ನಾರಾಯಣ ಗೌಡ, ಎಸ್.ಸಿ.ಘಟಕದ ನಗರ ಅಧ್ಯಕ್ಷ ಬಿ.ಮುನಿರಾಜು, ತಾಲೂಕು ಅಧ್ಯಕ್ಷೆ ಪುಷ್ಪಲತ, ನಗರ ಘಟಕದ ಅಧ್ಯಕ್ಷೆ ಪ್ರಭಾವತಿ, ಎಪಿಎಂಸಿ ನಿರ್ದೇಶಕ ನಾರನಹಳ್ಳಿ ಎಂ.ಗೋವಿಂದರಾಜು ಮುಖಂಡರಾದ ತಿ.ರಂಗರಾಜು, ಬಿ.ಎಚ್.ಕೆಂಪಣ್ಣ  ಮೊದಲಾದವರು ಭಾಗವಹಿಸಿದ್ದರು. 

ರಾಜಕೀಯ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

[ccc_my_favorite_select_button post_id="117357"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]