ಕರೊನಾ ಇದು ಸರಿನಾ..? ಧ್ವನಿ ಸುರುಳಿ ಬಿಡುಗಡೆ

ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶ್ರೀ ಹರ ಮ್ಯೂಸಿಕಲ್ ವಲ್ರ್ಡ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತಾಶ್ರಯಲ್ಲಿ  ಬುಧವಾರ ಜಿಲ್ಲಾಡಳಿತ ಭವನದ ತುಂಗಾಭದ್ರಾ ಸಂಭಾಗಣದಲ್ಲಿ ಆಯೋಜಿಸಲಾಗಿದ್ದ ‘ಕರೊನಾ ಇದು ಸರಿನಾ’ ಎಂಬ ಧ್ವನಿ ಸುರುಳಿ ಬಿಡುಗಡೆ  ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೋಲಿಸ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ, ಗೃಹರಕ್ಷಕದಳ ಸೇರಿದಂತೆ ಕೊರೊನಾ ವಿರುದ್ದ ಹೋರಾಡುತ್ತಿರುವ ಕರೊನಾ ಸೈನಿಕರಿಗೆ ಮತ್ತು ಪೌರ ಕಾರ್ಮಿಕರಿಗೆ, ಡಿಸಿ, ಎಸ್ಪಿ ಸೇರಿದಂತೆ ಜಿಲ್ಲಾಡಳಿತದ ವತಿಯಿಂದ ಹೂ ಮಳೆ ಸುರಿಸುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಿ.ಎಸ್.ಷಡಾಕ್ಷರಿ ಮಾತನಾಡಿ, ಕೋವಿಡ್-19 ಸಂಬಂಧಿಸಿದಂತೆ ಲಾಕ್‍ಡೌನ್ ಆಗಿರುವ ಸಂದರ್ಭದಲ್ಲಿ ಸರ್ಕಾರಿ ನೌಕರರು ಕೋವಿಡ್ ವಿರುದ್ದ ಹೋರಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹದಲ್ಲಿ ನೆರೆ ಸಂತ್ರಸ್ತರ ಪರವಾಗಿ ಹಾಗೂ ಲಾಕ್‍ಡೌನ್ ಸಮಯದಲ್ಲಿ ತಮ್ಮ ಒಂದು ದಿನದ ವೇತನ ಒಟ್ಟು ರೂ. 200 ಕೋಟಿಗಳನ್ನು ರಾಜ್ಯ ಸರ್ಕಾರಕ್ಕೆ ನೀಡಿದ್ದೇವೆ ಎಂದರು.

ಗ್ರಾಮ ಮಟ್ಟದಲ್ಲಿ ಪಿಡಿಓ ಮತ್ತು ಕಾರ್ಯದರ್ಶಿಗಳು ಸೇರಿದಂತೆ ಹಲವು ಇಲಾಖೆಗಳ ಸರ್ಕಾರಿ ನೌಕರರು ಕೊರೊನಾ ಕುರಿತು ಹಳ್ಳಿಗಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಉತ್ತರ ಕರ್ನಾಟಕದದಲ್ಲಿ ನೆರೆ ಸಂಭವಿಸಿದಾಗಲೂ ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನವನ್ನು ಸರ್ಕಾರಕ್ಕೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ ದೆಹಲಿ, ತಮಿಳುನಾಡು ಇತರೆ ರಾಜ್ಯಗಳಿಗೆ  ಹೋಲಿಸಿದರೆ ಕರ್ನಾಟಕದಲ್ಲಿ ಸರ್ಕಾರಿ ನೌಕರರು ಹೆಚ್ಚು ವೇತನವನ್ನು ಸರ್ಕಾರಕ್ಕೆ ನೀಡಿದ್ದಾರೆ ಎಂದು ಪ್ರಶಂಸಿದ ಅವರು ಮುಂದಿನ ದಿನಗಳಲ್ಲಿ ಜ್ಯೋತಿ ಸಂಜೀವಿನಿ ಯೋಜನೆಯ ಮೂಲಕ ನೌಕರರಿಗೆ ನಗದುರಹಿತ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಕೋವಿಡ್-19 ಸಂಬಂಧ ಯಾವ ನೌಕರರು ಭಯ ಪಡುವುದು ಬೇಡ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹಂತ ಹಂತವಾಗಿ ಸರ್ಕಾರಿ ನೌಕರರ ವೇತನ ಮತ್ತು ಡಿಎ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಲಾಗುವದು. ಸರ್ಕಾರ ನಮ್ಮೊಂದಿಗಿದೆ. ನೌಕರರು ಈ ಕುರಿತು ಯಾವುದೇ ಆತಂಕಕ್ಕೆ ಒಳಪಡುವುದು ಬೇಡ. ಜೊತೆಗೆ ಜಿಲ್ಲಾಧಿಕಾರಿಗಳು ನೌಕರರ ಪರವಾಗಿದ್ದಾರೆ. ಈ ಮೂಲಕ ನಮ್ಮೆಲ್ಲರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಬೇಕು ಎಂದರು.ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ,  ಕೋವಿಡ್-19 ಸಂದರ್ಭದಲ್ಲಿ ಸರ್ಕಾರಿ ನೌಕರರು ಒಟ್ಟು 13 ಕಂಟೈನ್‍ಮೆಂಟ್ ಜೋನ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಕೋವಿಡ್ ಸೋಂಕಿತರು ಇನ್ನೂ ಹೆಚ್ಚಾದರು ಸಹ ಸರ್ಕಾರಿ ನೌಕರರು ಎಂದೆಂದಿಗೂ ನಮ್ಮ ಜೊತೆ ಇರುತ್ತಾರೆ ಎಂಬ ಭರವಸೆಯಿದೆ ಎಂದ ಅವರು ಜಿಲ್ಲೆಯಲ್ಲಿ  ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಎಲ್ಲಾ ಸರ್ಕಾರಿ ನೌಕರರು ಕೋವಿಡ್ ಯುದ್ದದಲ್ಲಿ ಹೋರಾಡಲು ಭಾಗಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಹನುಮಂತರಾಯ ಮಾತನಾಡಿ, ಕೋವಿಡ್-19 ನಿಂದ ಜಿಲ್ಲೆ ಇನ್ನೂ ಮುಕ್ತವಾಗಿಲ್ಲ. ಸಾರ್ವಜನಿಕರು ತುಂಬಾ ಜಾಗರೂಕತೆಯಿಂದ ಇರಬೇಕು. ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣಕಾಸಿನ ಅನುಕೂಲಕ್ಕಾಗಿ ಇಂದು ಮೊಬೈಲ್ ಎ.ಟಿ.ಎಂ ಅನ್ನು ಉದ್ಘಾಟನೆ ಮಾಡುತ್ತಿದ್ದೇವೆ. ಲಾಕಡೌನ್ ಸಮಯದಲ್ಲಿ ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಲಾಗಿದೆ. ನಾವು ನಿಮ್ಮೊಂದಿಗೆ  ಇದ್ದೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಬಿ. ಪಾಲಾಕ್ಷಿ,  ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್,  ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಸರ್ಕಾರಿ ನೌಕರ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ. ಸುರೇಶ್

"ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

[ccc_my_favorite_select_button post_id="119818"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!