ರೈತರು ಪರಿಹಾರ ಪಡೆಯಲು ತಪ್ಪದೇ ತ್ವರಿತವಾಗಿ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಿ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಬೇಕೆಂದು ಕೃಷಿ ಸಚಿವ  ಬಿ.ಸಿ.ಪಾಟೀಲರು ಮನವಿ ಮಾಡಿದ್ದಾರೆ.

ವಿಕಾಸಸೌಧದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸರ್ಕಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಯಡಿ ಡಿಬಿಟಿ ಮಾರ್ಗಸೂಚಿಯಂತೆ ವಿದ್ಯುನ್ಮಾನವಾಗಿ ನೇರವಾಗಿ ರೈತರ ಖಾತೆಗೆ ಆಧಾರ್ ಆಧಾರಿತ ವ್ಯವಸ್ಥೆಯ ಮೂಲಕವರ್ಗಾಯಿಸಲಾಗುತ್ತಿದೆ. ಬಹುತೇಕ ರೈತರು ತಮ್ಮ ಆಧಾರ್ ಕಾರ್ಡನ್ನು ಅಕೌಂಟ್ ನಂ.ಗೆ ಲಿಂಕ್ ಮಾಡಿಲ್ಲ.ರೈತರು ತಮ್ಮತಮ್ಮ ಆಧಾರ್ ಕಾರ್ಡನ್ನು ತಾವು ಉಪಯೋಗಿಸುತ್ತಿರುವ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಮನವಿ ಮಾಡಿದರು.ಮೆಕ್ಕೆಜೋಳ ಹಾಗೂ ಹೂವುಬೆಳೆದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು

ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ   ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಆನ್ಲೈನ್ ಮೂಲಕ  ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ಹೋಗಿದೆ.ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ.ಇನ್ನೂ ಕೆಲವು ಹೋಗಿದೆ.

ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿದ್ದಾರೆ.ಹೀಗಾಗಿ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗೆ ಪರಿಹಾರದ ಹಣ ಹೋಗಿರುವುದು ತಮ್ಮ ಗಮನಕ್ಕೆ ಬಂದಿದೆ.ಏರ್‌ಟೆಲ್ ಯಾವುದೇ ಶಾಖೆಗಳನ್ನು ಹೊಂದಿಲ್ಲ.ಹೀಗಾಗಿ ಏರ್‌ಟೆಲ್ ಔಟ್‌ಲೆಟ್‌ಗಳಿಗೆ ಹೋಗಿ ಹಣ ಪಡೆಯಬೇಕಿದೆ.ಬೇರೆ ಜಿಲ್ಲೆಗಳಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ.ಇದನ್ನು ನಾವು ಪತ್ತೆ ಹಚ್ಚಿದ್ದೇವೆ.ಈ ಬಗ್ಗೆ ಏರ್ಟೆಲ್ ಕಂಪೆನಿಯ ಗಮನಕ್ಕೂ ತಂದು ಸೂಕ್ತ ಕ್ರಮಕೈಗೊಳ್ಳಲಾಗುವುದುಈ ಸಂಬಂಧ ಅಧಿಕಾರಿಗಳ ಜೊತೆ  ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದೆಂದು ಚರ್ಚಿಸಲಾಗುವುದು ಎಂದರು.

ಮುಂದುವರೆದ ನಕಲಿ ಬೀಜ ಮಾರಾಟ ಜಾಲ ಪತ್ತೆ

ವಿಚಕ್ಷಣಾ ದಳದಿಂದ ನಕಲಿ ಬೀಜ ಮಾರಾಟ ಪತ್ತೆ ಮುಂದುವರೆದಿದೆ.ಮೆಕ್ಕೆಜೋಳದಂತೆ ನಕಲಿ ಹತ್ತಿಬೀಜ ಮಾರಾಟ ಜಾಲವೂ ಪತ್ತೆಯಾಗಿದೆ.ರಾಯಚೂರಿನ ತುರುವೆಹಾಳದಲ್ಲಿ ಕಳೆದ ಬುಧವಾರ ತೇಜಸ್ ಎನ್ನುವ ಆಂದ್ರ ಮೂಲಕ ಖಾಸಗಿ ಕಂಪೆನಿಗೆ ಸೇರಿದ ಮೈ ಸೀಡ್ಸ್ ಹೆಸರಿನ ಕಳಪೆ ನೂರು ಕೆಜಿ ಕಳಪೆ ಹತ್ತಿಬೀಜ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ.ಕಳೆದ ಹದಿನೈದು ದಿನಗಳ ಹಿಂದೆ ಈ ಖಾಸಗಿ ಕಂಪೆನಿಯಿಂದ ಬೀಜ ಕೊಂಡು ಬಿತ್ತಿದ ರೈತರಿಗೆ ಸಸಿ ಬಂದಿಲ್ಲ.ಇದನ್ನು ಗಮನಿಸಿದ ರಾಯಚೂರು ಎಡಿ ಹಾಗೂ ವಿಚಕ್ಷಣಾದಳ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಅದೇ ರೀತಿ ಮೇ.30 ರಂದು ಯಾದಗಿರಿಯ ಗೋದಾಮಿನಲ್ಲಿ ಹೈದರಾಬಾದಿನ ಮೂಲದ ಕಂಪೆನಿಯೊಂದು ಅಕ್ರಮವಾಗಿ ದಾಸ್ತಾನು ಮಾಡಿದ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ನಡೆಸಿದ ದಾಳಿಯಲ್ಲಿ ಸುಮಾರು 34,595ಕ್ವಿಂಟಾಲ್ ಹತ್ತಿಬೀಜ ವಶಪಡಿಸುಕೊಳ್ಳಲಾಗಿದ್ದು, ಅನಧಿಕೃತ ಸಂಗ್ರಹ ಹಾಗೂ ಪ್ಯಾಕಿಂಗ್ ದಂಧೆ ಮಾಡುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ವಶಪಡಿಸಿಕೊಂಡ ಹತ್ತಿಬೀಜಗಳನ್ನು ಗುಣಮಟ್ಟ ಪತ್ತೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಕೃಷಿಸಚಿವರು ಸ್ಪಷ್ಟಪಡಿಸಿದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!