ವಿವಾದಗಳಿಗೆ ಅವಕಾಶ ನೀಡದಂತೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಬೇಕು: ಎಸ್. ಸುರೇಶ್ ಕುಮಾರ್

ಹಾಸನ : ರಾಜ್ಯಾದ್ಯಂತ ಜೂ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯು ಆರಂಭವಾಗಲಿದ್ದು, ಯಾವುದೇ ರೀತಿಯ ವಿವಾದಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತಗಳು ಪಣ ತೊಡಬೇಕು ಎಂದು ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಡನೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಎಸ್.ಎಸ್.ಎಲ್.ಸಿ ಪರೀಕ್ಷೆಯ ಕುರಿತಾಗಿ  ಹೈಕೋರ್ಟ್ ನೀಡಿರುವ ಸೂಚನೆಗಳನ್ನು ಚಾಚೂ ತಪ್ಪದೆ ನಾವೆಲ್ಲರೂ ಪಾಲಿಸಬೇಕು ಎಂದರು.

ರಾಜ್ಯಾದ್ಯಂತ ಒಟ್ಟು 2,879 ಪರೀಕ್ಷಾ ಕೇಂದ್ರಗಳಿದ್ದು, 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೋವಿಡ್ ಸಂದರ್ಭದಲ್ಲಿ 70 ಪರೀಕ್ಷಾ ಕೇಂದ್ರಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಮಾಡಲಾಗಿತ್ತು, ಅವುಗಳನ್ನು ತೆರವುಗೊಳಿಸಿ ಸ್ಯಾನಿಟೈಸ್ ಮಾಡಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಸೂಚಿಸಿದರಲ್ಲದೆ, ಪರೀಕ್ಷೆಗೆ 2 ದಿನಗಳ ಮುಂಚಿತವಾಗಿ ಹಾಗೂ ಪರೀಕ್ಷೆ ಪ್ರಾರಂಭವಾದ ನಂತರ ಪ್ರತಿದಿನ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿಸಬೇಕು ಎಂದರು.

ಸುಮಾರು 12,674 ವಿದ್ಯಾರ್ಥಿಗಳು ಹೊರರಾಜ್ಯಗಳಿಂದ ಬಂದ ವಲಸೆ ಕಾರ್ಮಿಕರ ಮಕ್ಕಳಾಗಿದ್ದು, ಅವರು ಪರೀಕ್ಷೆ ಬರೆಯಲು ಸ್ಥಳೀಯ ಪರೀಕ್ಷಾ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಪರೀಕ್ಷೆ ಬರೆಯಲು ಬರುವ ಮಕ್ಕಳಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಬೇಕು. ಈ ಸಂದರ್ಭದಲ್ಲಿ ಗೊಂದಲವಾಗದಂತೆ ಪ್ರತಿ 200 ಮಕ್ಕಳಿಗೆ ಒಂದು ಥರ್ಮಲ್ ಸ್ಕ್ರೀನಿಂಗ್ ಯಂತ್ರವನ್ನು ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ 3.1/2 ಅಡಿ ಅಂತರ ಕಾಯ್ದುಕೊಳ್ಳುವಂತೆ ಬೆಂಚ್‍ಗಳನ್ನು ವ್ಯವಸ್ಥಿತವಾಗಿ ಅಳವಡಿಸಬೇಕು. ಆರೋಗ್ಯ ಇಲಾಖೆಯಿಂದ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಆರೊಗ್ಯ ತಪಾಸಣಾ ಕೇಂದ್ರಗಳನ್ನು ಅಳವಡಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯ ಆರೋಗ್ಯ ತಪಾಸಣೆ ಮಾಡಬೇಕು ಎಂದು ತಿಳಿಸಿದರು.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಯಾರಿಗಾದರೂ ಆರೋಗ್ಯ ಸಮಸ್ಯೆ ಇದ್ದಲ್ಲಿ, ಅಂತಹ ವಿದ್ಯಾರ್ಥಿಯನ್ನು ಯಾವುದೇ ರೀತಿಯ ಕಳವಳಕ್ಕೆ ಆಸ್ಪದ ನೀಡದೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಬೇಕು ಎಂದು ಸಚಿವರು ಹೇಳಿದರು. 

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆ ಇರುವುದರಿಂದ ಜಿಲ್ಲಾಡಳಿತ ಜಿಲ್ಲೆಯ ಕಟ್ಟಕಡೆಯ ವಿದ್ಯಾರ್ಥಿಗೂ ಸಹ ಪರೀಕ್ಷೆ ಬರೆಯಲು ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ ಬಸ್‍ಗಳನ್ನು ಪರೀಕ್ಷೆ ಸಮಯಕ್ಕೆ ಅನುಗುಣವಾಗುವಂತೆ ವ್ಯವಸ್ಥೆ ಮಾಡಬೇಕು, ಇಲ್ಲವಾದಲ್ಲಿ ಖಾಸಗಿ ಶಾಲೆಗಳ ಹೆಚ್ಚುವರಿ ಬಸ್‍ಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಹೈಕೋರ್ಟ್‍ನ ಆದೇಶದಂತೆ ಪ್ರತಿ ಜಿಲ್ಲೆಯಲ್ಲಿಯೂ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲು ಸಹಾಯವಾಣಿಯನ್ನು ಮಾಡಿ ಅದರ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಬೇಕು. ಅಲ್ಲದೆ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳೊಡನೆ ದೂರವಾಣಿ ಮೂಲಕ ಪ್ರತಿನಿತ್ಯ ಸಂಪರ್ಕದಲ್ಲಿದ್ದು, ಸಾರಿಗೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ವರದಿ ನೀಡಬೇಕು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸುರೇಶ್ ಕುಮಾರ್ ಅವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪೋಷಕರು ಹಾಗೂ ಇತರೆ ಸಂಬಂಧಿಕರು ಬರುವುದರಿಂದ ಹೆಚ್ಚು ಜನಸಂದಣಿಯಾಗುವ ಸಾದ್ಯತೆ ಇದೆ. ಹಾಗಾಗಿ ಎಲ್ಲಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗುವಾಗ ಹಾಗೂ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ಖಜಾನೆಗೆ ತರುವಾಗ ಬಿಗಿ ಬಂದೋಬಸ್ತ್ ನೀಡಬೇಕು ಎಂದರಲ್ಲದೆ, ಪ್ರಶ್ನೆಪತ್ರಿಕೆ ಸೋರಿಕೆ ಎಂದು ಸುಳ್ಳುಸುದ್ಧಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಜಗದೀಶ್ ಅವರು ಮಾತನಾಡಿ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಪ್ರಾರಂಭವಾಗಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ನೀರು ಸೋರಿಕೆಯಾಗುವುದು, ವಿದ್ಯುತ್ ಸಮಸ್ಯೆ ಸೇರಿದಂತೆ ಕಟ್ಟಡಗಳ ನಿರ್ವಹಣೆಯನ್ನು ಅಗತ್ಯವಾಗಿ ಮಾಡಿಸಬೇಕು. ಇದಕ್ಕೆ ಅನುದಾನದ ಅವಶ್ಯಕತೆ ಇದ್ದಲ್ಲಿ ಸಂಚಿತ ನಿಧಿಯಿಂದ ಬಳಸಿಕೊಳ್ಳಬಹುದು ಎಂದರು. 

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಂದರ್ಭದಲ್ಲಿ 2 ಮಾಸ್ಕ್‍ಗಳನ್ನು ವಿತರಿಸಲಾಗುತ್ತಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸ್ಯಾನಿಟೈಸರ್ ಬಳಸುವಂತೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಇತರೆ ಸಂಸ್ಥೆಗಳ ಸ್ವಯಂ ಸೇವಕರು ಪಾಲ್ಗೊಂಡು ಸೇವೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಕಂಟೈನ್ಮೆಂಟ್ ವಲಯಗಳಿಂದ ಬರುವ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತ ತಮ್ಮದೇ ಜವಾಬ್ದಾರಿಯಿಂದ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಬೇಕು ಅಥವಾ ಕನಿಷ್ಠ ಆರು ಅಡಿಗಳ ಅಂತರ ಕಾಯ್ದುಕೊಳ್ಳುವಂತೆ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಅಂತಹ ವಿದ್ಯಾರ್ಥಿಗಳನ್ನು 1 ತಿಂಗಳ ನಂತರ ನಡೆಯುವ ಮರುಪರೀಕ್ಷೆಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಕಲ್ಪಿಸಲಾಗುವುದು, ಆದರೆ ಆ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಪ್ರಥಮ ಪ್ರಯತ್ನ ಎಂದೇ ಪರಿಗಣಿಸಲಾಗುವುದು ಎಂದು ಜಗದೀಶ್ ಹೇಳಿದರು.

ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಹಾಗೂ ನೀರನ್ನು ಮನೆಯಿಂದಲೇ ಕೊಟ್ಟು ಕಳುಹಿಸಬೇಕು ಎಂದು ಪೋಷಕರಿಗೆ ಸೂಚನೆ ನೀಡಲಾಗುವುದು. ಒಟ್ಟಾರೆಯಾಗಿ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಆತ್ಮಸ್ಥೈರ್ಯವನ್ನು ಹೆಚ್ಚಿಸುವುದು ಜಿಲ್ಲಾಡಳಿತಗಳ ಪ್ರಮುಖ ಕಾರ್ಯ ಎಂದರು.

ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಹೆಚ್. ಮಂಜುನಾಥ್ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!