ರಾಜ್ಯದೆಲ್ಲೆಡೆ ಉದ್ಯೋಗ ಖಾತ್ರಿ ಕಾಮಗಾರಿಗಳು ಭರದಿಂದ ಸಾಗಿವೆ – ಕೆ.ಎಸ್.ಈಶ್ವರಪ್ಪ

ಕಲಬುರಗಿ: ಕರೊನಾ ಸಂಕಷ್ಟದ ಈ ಸಮಯದಲ್ಲಿ ವಲಸೆ ಬಂದ ಹಾಗೂ ಲಾಕ್ ಡೌನ್‍ದಿಂದ ಮನೆಯಲ್ಲಿರುವ ರೈತಾಪಿ ವರ್ಗದ ದುಡಿಯುವ ಕೈಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ವರವಾಗಿದ್ದು, ಈ ಯೋಜನೆಯಡಿ ಕೆರೆ ಹೂಳೆತ್ತುವ, ಬದು ನಿರ್ಮಾಣ, ಚೆಕ್ ಡ್ಯಾಂದಂತಹ ಕಾಮಗಾರಿಗಳು ರಾಜ್ಯದಾದ್ಯಂತ ಭರದಿಂದ ಸಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶುಕ್ರವಾರ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ರೈತರ ಜಮೀನಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಬದು ನಿರ್ಮಾಣ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ 6021 ಗ್ರಾಮ ಪಂಚಾಯತಿಗಳ ಪೈಕಿ 5900 ಗ್ರಾ.ಪಂ.ಗಳಲ್ಲಿ ಈಗಾಗಲೆ ಉದ್ಯೋಗ ಖಾತ್ರಿ ಕೆಲಸಗಳು ಆರಂಭಿಸಲಾಗಿದೆ. ಗ್ರಾಮ ಪಂಚಾಯತಿಯ ಪ್ರತಿ ಹಳ್ಳಿಯಲ್ಲಿ ಕೆಲಸಗಳನ್ನು ಕಾಣಬಹುದಾಗಿದೆ ಎಂದರು.

ಪ್ರತಿ ಕೂಲಿ ಕಾರ್ಮಿಕನಿಗೂ ಉದ್ಯೋಗ ಸಿಗಬೇಕು ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯವಾಗಿದೆ. ಇದಕ್ಕಾಗಿ ಉದ್ಯೋಗ ಖಾತ್ರಿ ಯೋಜನೆಗೆ 60 ಸಾವಿರ ಕೋಟಿ ರೂ. ಜೊತೆಗೆ ಇತ್ತೀಚೆಗೆ ಕೊರೋನಾ ಪ್ಯಾಕೇಜ್ ಘೋಷಣೆ ಮಾಡಿದ ಮೊತ್ತದಲ್ಲಿ 20 ಸಾವಿರ ಕೋಟಿ ರೂ. ನರೇಗಾ ಕೆಲಸಗಳಿಗೆ ಮೀಸಲಿರಿಸಿದೆ ಎಂದರು.

ಉದ್ಯೋಗ ಖಾತ್ರಿ ಕೂಲಿ ಹಣ ಪಾವತಿಗೆ ಬಾಕಿ ಇದ್ದ 1860 ಕೋಟಿ ರೂ. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿದ್ದು, ಇನ್ನೂ ಮುಂದೆ ಕೂಲಿ ಪಾವತಿಗೆ ಯಾವುದೇ ಸಮಸ್ಯೆವಿಲ್ಲ. ಕೆಲಸ ಮುಗಿದ ವಾರದಲ್ಲಿಯೆ ಕೂಲಿ ಹಣ ಖಾತೆಗೆ ಜಮಾವಾಗಲಿದೆ. ಇದಲ್ಲದೆ ಪ್ರಸ್ತುತ ಈ ಯೋಜನೆಯಡಿ ಕೂಲಿ ಪಾವತಿಗೆಂದೆ ರಾಜ್ಯ ಸರ್ಕಾರದ ಬಳಿ 1000 ಕೋಟಿ ರೂ. ಅನುದಾನ ಲಭ್ಯವಿದೆ ಎಂದರು.

ಪ್ರತಿ ದಿನಕ್ಕೆ ನೀಡುತ್ತಿದ್ದ ಕೂಲಿ ಮೊತ್ತ 249 ರಿಂದ 275ಕ್ಕೆ ಹೆಚ್ಚಿಸಲಾಗಿದೆ. ಇದಲ್ಲವೆ ಪ್ರತಿ ವ್ಯಕ್ತಿಗೆ ಕೂಲಿ ದಿನಗಳನ್ನು ಸಹ 150ಕ್ಕೆ ಹೆಚ್ಚಿಸಲು ಕ್ರಮ ವಹಿಸಿದೆ. ಉದ್ಯೋಗ ಕೇಳಿ ಬರುವ ಎಲ್ಲಾ ಅರ್ಹರಿಗೆ ಉದ್ಯೋಗ ನೀಡಲಾಗುತ್ತದೆ ಎಂದ ಸಚಿವರು ರೈತರು ತಮ್ಮ ಹೊಲದಲ್ಲಿ ಪಪ್ಪಾಯ, ಬಾಳೆ ಬೆಳೆಯಲು ಇನ್ನೂ ಮುಂದೆ ಅವಕಾಶ ನೀಡಲಾಗುತ್ತದೆ ಎಂದರು.

ನರೇಗಾದಡಿ ಬಳ್ಳಾರಿ ಪ್ರಥಮ, ಕಲಬುರಗಿ ದ್ವಿತೀಯ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಅತ್ಯಾಧಿಕ 1.30 ಲಕ್ಷ ಕಾರ್ಮಿಕರಿಗೆ ಕೆಲಸ ನೀಡುವ ಮೂಲಕ ರಾಜ್ಯದಲ್ಲಿಯೆ ಪ್ರಥಮ ಸ್ಥಾನದಲ್ಲಿದೆ. ತದನಂತರದ ಸ್ಥಾನ ಕಲಬುರಗಿ ಮತ್ತು ರಾಯಚೂರು ಜಿಲ್ಲೆಯದಾಗಿದ್ದು, ಇಲ್ಲಿ 1.10 ಲಕ್ಷ ಜನರಿಗೆ ಉದ್ಯೋಗ ನೀಡುತ್ತಿರುವುದು ತಮಗೆ ಸಂತಸ ತಂದಿದೆ ಎಂದರು.

ಅಂತರ್ಜಲ ಹೆಚ್ಚಳಕ್ಕೆ “ ಅಂತರ್ಜಲ ಚೇತನ ”: ಕೆರೆ ಹೂಳೆತ್ತುವುದು, ಕೃಷಿ ಹೊಂಡ, ಪುಷ್ಕರಣಿ, ಗೋಕಟ್ಟಾ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಾರ್ವಜನಿಕ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಹೆಜ್ಜೆ ಇಟ್ಟಿದ್ದೇವೆ. ಈ ಸಂಬಂಧ ಆರ್ಟ್ ಆಫ್ ಲೀವಿಂಗ್‍ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು “ ಅಂತರ್ಜಲ ಚೇತನ ” ಎಂಬ ನೂತನ ಕಾರ್ಯಕ್ರಮ ಆರಂಭಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಸಚಿವರು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮದ ರಸ್ತೆ ಬದಿಯಲ್ಲಿ ಸಸಿ ನೆಟ್ಟು ನೀರೆರೆದರು. ಇದಕ್ಕೆ ಚುನಾಯಿತ ಜನಪ್ರತಿನಿಧಿಗಳು ಸಾಥ್ ನೀಡಿದರು.

ಗೋಕಟ್ಟಾ ವೀಕ್ಷಣೆ: ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊನ್ನಕಿರಣಗಿ ಗ್ರಾಮದಲ್ಲಿ ಈ ಹಿಂದೆ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡ ಗೋಕಟ್ಟಾದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ನೀರು ಸಂಗ್ರಹಣೆಗೊಂಡಿರುವುದುನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಾಲಾಜಿ, ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ಎಂ.ಎಲ್.ಸಿ. ಬಿ.ಜಿ.ಪಾಟೀಲ, ಮಾಜಿ ಶಾಸಕರಾದ ಮಾಲೀಕಯ್ಯ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶೋಭಾ ಸಿದ್ದು ಸಿರಸಗಿ, ಕೃಷಿ ಮತ್ತು ಕೈಗಾರಿಕೆ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಿ, ಸದಸ್ಯರಾದ ದಿಲೀಪ್ ಪಾಟೀಲ, ರೇವಣಸಿದ್ದಪ್ಪ ಸಂಕಾಲಿ, ಸಂಜೀವನ್ ಯಾಕಾಪುರ, ಅರವಿಂದ ಚವ್ಹಾಣ, ಶಿವಶರಣ ಶಂಕರ, ತಾಲೂಕು ಪಂಚಾಯತ್ ಅಧ್ಯಕ್ಷ ಶಿವರಾಜ ಸಜ್ಜನ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಜಗದೇವಿ ಗುರುನಾಥ ಜುಲ್ಫಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಪಿ.ಡಿ.ಓ ಮೇನಕಾ ಜಾಧವ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ರಾಜಕೀಯ

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿಕೊಂಡು ದೊಡ್ಡಬಳ್ಳಾಪುರ (Doddaballapura) ನಗರದ ಪ್ರವಾಸಿ ಮಂದಿರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="118224"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!