ದೊಡ್ಡಬಳ್ಳಾಪುರ : ಮಹಾಮಾರಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿನ ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ರಾಘವ ಎಸ್.ಗೌಡ ಅವರ ಕರ್ತವ್ಯವನ್ನು ಪ್ರಶಂಸಿಸಿ ಐಜಿಪಿ ಶರತ್ ಚಂದ್ರ ನೆನಪಿನ ಕಾಣಿಕೆ ನೀಡಿ ಗೌರವಿಸಿದ್ದಾರೆ.
ಬೆಂಗಳೂರಿನ ಐಜಿಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ.ಕರೊನಾ ವಿರುದ್ದ ಹೋರಾಟ ನಡೆಸಿದ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ಮಹಾ ನಿರೀಕ್ಷಕರು ಕೇಂದ್ರ ವಲಯ ಅವರ ನೇತೃತ್ವದಲ್ಲಿ ಕೋವಿಡ್-19 ವಿರುದ್ಧ ಅವರ ಹೋರಾಟದ ಬಗ್ಗೆ ಪ್ರಶಂಸಿಸಿ ನೆನಪಿನ ಕಾಣಿಕೆ ನೀಡಿ ಪ್ರೋತ್ಸಾಹಿಸಿದ್ದಾರೆ.
ಈ ವೇಳೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಮತ್ತಿತರರಿದ್ದರು.