ಎಂಎಸ್ಐಎಲ್ ರಿಟೇಲ್‌ ಮದ್ಯ ಮಾರಾಟ ಮಳಿಗೆಯನ್ನು ತೆರೆಯಲು ದೊಡ್ಡತುಮಕೂರು ಗ್ರಾಮಸ್ಥರ ವಿರೋಧ

ದೊಡ್ಡಬಳ್ಳಾಪುರ : ತಾಲೂಕಿನ ದೊಡ್ಡತುಮಕೂರು ಗ್ರಾಮದ ಜನವಸತಿ ಪ್ರದೇಶದಲ್ಲಿ ಎಂಎಸ್‌ಐಎಲ್‌ ರಿಟೇಲ್‌ ಮದ್ಯ ಮಾರಾಟ ಘಟಕ ತೆರೆಯಲು ಪ್ರಯತ್ನ ನಡೆದಿದ್ದು, ಇದಕ್ಕೆ ಪರವಾನಗಿ ನೀಡದಂತೆ ಒತ್ತಾಯಿಸಿ ಇಲ್ಲಿನ ಗ್ರಾಮಸ್ಥರು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಗ್ರಾಮಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿ,ತಾಲೂಕು ಪಂಚಾಯಿತಿ ಇಒ ಮುರುಡಯ್ಯ ಹಾಗೂ ಪಿಡಿಒ ಸೌಮ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗ್ರಾಪಂ ಮಾಜಿ ಉಪಾಧ್ಯಕ್ಷ ರವಿಕುಮಾರ್,ದೊಡ್ಡತುಮಕೂರು ವ್ಯಾಪ್ತಿಯಲ್ಲಿನ ಜನತೆ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ.ರಿಟೇಲ್‌ ಮದ್ಯ ಮಾರಾಟ ಘಟಕ  ತೆರೆಯಲು ಅನುಮತಿ ನೀಡಿದಲ್ಲಿ ಇಲ್ಲಿನ ಜನರ ನೆಮ್ಮದಿ ಹಾಳಾಗಲಿದೆ.ಯಾವುದೆ ಕಾರಣಕ್ಕು ಘಟಕ ಸ್ಥಾಪನೆ ಅವಕಾಶ ನೀಡಬಾರದೆಂದರು.

ನಿವೃತ್ತ ಶಿಕ್ಷಕ ಚಿಕ್ಕಣಪ್ಪ ಮಾತನಾಡಿ, ಈ ಭಾಗದ ಜನರು ಬಹುತೇಕ ಕೂಲಿ ಕಾರ್ಮಿಕರಿದ್ದು, ನಿತ್ಯ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಈಗಾಗಲೇ ಹಲವೆಡೆ ಚಿಕ್ಕ ಮಕ್ಕಳಿಂದ ಹಿಡಿದು ಹಲವರು ಕುಡಿತದ ಚಟಕ್ಕೆ ಬಲಿಯಾಗಿದ್ದು,ಪ್ರತಿ ನಿತ್ಯ ಕುಟುಂಬಗಳು ಕಣ್ಣಿರಿನಲ್ಲಿ ಕೈತೊಳೆಯುವಂತಾಗಿದೆ. ಮದ್ಯದ ಅಂಗಡಿ ತೆರೆಯುವುದರಿಂದ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವುದರಿಂದ ಅನುಮತಿ ನೀಡಬಾರದೆಂದು ಒತ್ತಾಯಿಸಿದರು.

ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ  ಟಿ.ಜಿ.ಮಂಜುನಾಥ್ ಮಾತನಾಡಿ,ಮದ್ಯದಂಗಡಿ ತೆರೆಯಲು ಗೊತ್ತುಪಡಿಸಿದ ಸ್ಥಳ ಮುಖ್ಯ ರಸ್ತೆಯಲ್ಲಿದ್ದು, ಇಲ್ಲಿ ಮಹಿಳೆಯರು,ವಿದ್ಯಾರ್ಥಿಗಳು ಇದೇ ಸ್ಥಳದಲ್ಲಿ ಸಂಚರಿಸುವುದರಿಂದ ಭವಿಷ್ಯದಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯದಂಗಡಿ ಸ್ಥಾಪಿಸಲು ಪರವಾನಗಿ ನೀಡಬಾರದು. ಒಂದೊಮ್ಮೆ ಅವಕಾಶ ನೀಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಸ್ತ್ರೀ ಶಕ್ತಿ ಸಂಘದ ನರಸಮ್ಮ,ಕಮಲ,ಭಾಗ್ಯಮ್ಮ,ಅಂಬುಜಮ್ಮ,ಆಶಾ,ವೆಂಕಟೇಶಮ್ಮ,ಮರಿಯಮ್ಮ,ಗ್ರಾಮಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ,ವಿಎಸ್ ಎಸ್ ಎನ್ ಅಧ್ಯಕ್ಷ ಪ್ರಭಾಕರ್,ನಿರ್ದೇಶಕ ಶಿವಕುಮಾರ್,ಮುಖಂಡರಾದ ಚನ್ನಗೌಡ,ಆಂಜಿನಪ್ಪ,ಟಿ.ಎಲ್ ರಘು,ಲೋಕೇಶ್, ಟಿ.ಕೆ.ಶಿವಕುಮಾರ್ ,ವಸಂತ್ ಕುಮಾರ್, ಅಜಯ್ ಕುಮಾರ್,ನಾರಾಯಣಸ್ವಾಮಿ ಮತ್ತಿತರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!