ಎಂಎಸ್ಐಎಲ್ ರಿಟೇಲ್‌ ಮದ್ಯ ಮಾರಾಟ ಮಳಿಗೆಯನ್ನು ತೆರೆಯಲು ದೊಡ್ಡತುಮಕೂರು ಗ್ರಾಮಸ್ಥರ ವಿರೋಧ

ದೊಡ್ಡಬಳ್ಳಾಪುರ : ತಾಲೂಕಿನ ದೊಡ್ಡತುಮಕೂರು ಗ್ರಾಮದ ಜನವಸತಿ ಪ್ರದೇಶದಲ್ಲಿ ಎಂಎಸ್‌ಐಎಲ್‌ ರಿಟೇಲ್‌ ಮದ್ಯ ಮಾರಾಟ ಘಟಕ ತೆರೆಯಲು ಪ್ರಯತ್ನ ನಡೆದಿದ್ದು, ಇದಕ್ಕೆ ಪರವಾನಗಿ ನೀಡದಂತೆ ಒತ್ತಾಯಿಸಿ ಇಲ್ಲಿನ ಗ್ರಾಮಸ್ಥರು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಗ್ರಾಮಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿ,ತಾಲೂಕು ಪಂಚಾಯಿತಿ ಇಒ ಮುರುಡಯ್ಯ ಹಾಗೂ ಪಿಡಿಒ ಸೌಮ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗ್ರಾಪಂ ಮಾಜಿ ಉಪಾಧ್ಯಕ್ಷ ರವಿಕುಮಾರ್,ದೊಡ್ಡತುಮಕೂರು ವ್ಯಾಪ್ತಿಯಲ್ಲಿನ ಜನತೆ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ.ರಿಟೇಲ್‌ ಮದ್ಯ ಮಾರಾಟ ಘಟಕ  ತೆರೆಯಲು ಅನುಮತಿ ನೀಡಿದಲ್ಲಿ ಇಲ್ಲಿನ ಜನರ ನೆಮ್ಮದಿ ಹಾಳಾಗಲಿದೆ.ಯಾವುದೆ ಕಾರಣಕ್ಕು ಘಟಕ ಸ್ಥಾಪನೆ ಅವಕಾಶ ನೀಡಬಾರದೆಂದರು.

ನಿವೃತ್ತ ಶಿಕ್ಷಕ ಚಿಕ್ಕಣಪ್ಪ ಮಾತನಾಡಿ, ಈ ಭಾಗದ ಜನರು ಬಹುತೇಕ ಕೂಲಿ ಕಾರ್ಮಿಕರಿದ್ದು, ನಿತ್ಯ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಈಗಾಗಲೇ ಹಲವೆಡೆ ಚಿಕ್ಕ ಮಕ್ಕಳಿಂದ ಹಿಡಿದು ಹಲವರು ಕುಡಿತದ ಚಟಕ್ಕೆ ಬಲಿಯಾಗಿದ್ದು,ಪ್ರತಿ ನಿತ್ಯ ಕುಟುಂಬಗಳು ಕಣ್ಣಿರಿನಲ್ಲಿ ಕೈತೊಳೆಯುವಂತಾಗಿದೆ. ಮದ್ಯದ ಅಂಗಡಿ ತೆರೆಯುವುದರಿಂದ ಗ್ರಾಮದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವುದರಿಂದ ಅನುಮತಿ ನೀಡಬಾರದೆಂದು ಒತ್ತಾಯಿಸಿದರು.

ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ  ಟಿ.ಜಿ.ಮಂಜುನಾಥ್ ಮಾತನಾಡಿ,ಮದ್ಯದಂಗಡಿ ತೆರೆಯಲು ಗೊತ್ತುಪಡಿಸಿದ ಸ್ಥಳ ಮುಖ್ಯ ರಸ್ತೆಯಲ್ಲಿದ್ದು, ಇಲ್ಲಿ ಮಹಿಳೆಯರು,ವಿದ್ಯಾರ್ಥಿಗಳು ಇದೇ ಸ್ಥಳದಲ್ಲಿ ಸಂಚರಿಸುವುದರಿಂದ ಭವಿಷ್ಯದಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯದಂಗಡಿ ಸ್ಥಾಪಿಸಲು ಪರವಾನಗಿ ನೀಡಬಾರದು. ಒಂದೊಮ್ಮೆ ಅವಕಾಶ ನೀಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಸ್ತ್ರೀ ಶಕ್ತಿ ಸಂಘದ ನರಸಮ್ಮ,ಕಮಲ,ಭಾಗ್ಯಮ್ಮ,ಅಂಬುಜಮ್ಮ,ಆಶಾ,ವೆಂಕಟೇಶಮ್ಮ,ಮರಿಯಮ್ಮ,ಗ್ರಾಮಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ,ವಿಎಸ್ ಎಸ್ ಎನ್ ಅಧ್ಯಕ್ಷ ಪ್ರಭಾಕರ್,ನಿರ್ದೇಶಕ ಶಿವಕುಮಾರ್,ಮುಖಂಡರಾದ ಚನ್ನಗೌಡ,ಆಂಜಿನಪ್ಪ,ಟಿ.ಎಲ್ ರಘು,ಲೋಕೇಶ್, ಟಿ.ಕೆ.ಶಿವಕುಮಾರ್ ,ವಸಂತ್ ಕುಮಾರ್, ಅಜಯ್ ಕುಮಾರ್,ನಾರಾಯಣಸ್ವಾಮಿ ಮತ್ತಿತರಿದ್ದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!