ನಾಳೆಯಿಂದ ಗ್ರಾಮೀಣ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಕಲಬುರಗಿ: ಕರೊನಾ ಲಾಕ್ ಡೌನ್ ಸಡಿಲಿಕೆ ಪರಿಣಾಮ ರಾಜ್ಯದ ಸಾರಿಗೆ ಸಂಸ್ಥೆಗಳಿ ಕಳೆದ ಮೇ-22 ರಿಂದ ಅಂತರ ಜಿಲ್ಲಾ ಸಂಚಾರವನ್ನು ರಾಜ್ಯದೊಳಗೆ ಹಂತ-ಹಂತವಾಗಿ ಆರಂಭಿಸಲಾಗಿದೆ.ಇದೀಗ ಜಿಲ್ಲೆಯೊಳಗೆ ಹೋಬಳಿಯಿಂದ ಗ್ರಾಮದವರೆಗೂ ಬಸ್ ಸಂಚಾರ ಅರಂಭಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಿದ್ದು, ಮಂಗಳವಾರದಿಂದ ಗ್ರಾಮದ ಕಡೆ ಸಾರಿಗೆ ಬಸ್‍ಗಳು ಮುಖ ಮಾಡಲಿವೆ ಎಂದು ರಾಜ್ಯದ ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಹೇಳಿದರು.

ಸೋಮವಾರ ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಲಾಕ್ ಡೌನ್‍ನಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಸುಮಾರು 2200 ಕೋಟಿ ರೂ. ನಷ್ಠ ಅನುಭವಿಸಿದೆ. ಇನ್ನೂ 3500 ಕೋಟಿ ರೂ. ನಷ್ಠ ಅನುಭವಿಸುವ ಸಾಧ್ಯತೆಯಿದೆ. ಪ್ರತಿನಿತ್ಯ 1 ಕೋಟಿ ಜನರು ಸಂಚರಿಸುತ್ತಿದ್ದ ಬಸ್‍ನಲ್ಲಿ ಇದೀಗ ಪ್ರಯಾಣಿಕರ ಸಂಖ್ಯೆ 14 ಲಕ್ಷಕ್ಕೆ ಇಳಿಕೆಯಾಗಿದೆ. ಕೊರೋನಾ ಭಯದಿಂದ ಜನರು ಇನ್ನೂ ಹೊರಬಾರದ ಕಾರಣ ಶೇ.86ರಷ್ಟು ಪ್ರಯಾಣಿಕರ ಕೊರತೆಯನ್ನು ಬಸ್‍ಗಳು ಕಾಣುತ್ತಿವೆ ಎಂದರು.

ಬಸ್ ಸಂಚಾರಕ್ಕೆ ಪ್ರಯಾಣಿಕರ ಆರೋಗ್ಯ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಹಾರಾಷ್ಟ್ರ ಹೊರತುಪಡಿಸಿ ಕೇರಳ, ಆಂಧ್ರ ಪ್ರದೇಶ, ಗೋವಾ, ತಮಿಳನಾಡು ನಡುವೆ ಅಂತರ ರಾಜ್ಯ ಬಸ್ ಸಂಚಾರ ಆರಂಭಿಸಲು ಪರಸ್ಪರ ಒಪ್ಪಂದ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ ಎಂದರು.

ಕೊರೋನಾ ಸಂಕಷ್ಟದ ಸಮಯದಲ್ಲಿ ಸಂಸ್ಥೆ ಆರ್ಥಿಕವಾಗಿ ನಷ್ಟ ಅನುಭವಿಸಿದ್ದರಿಂದ 1.35 ಲಕ್ಷ ಸಿಬ್ಬಂದಿಗಳ ಏಪ್ರಿಲ್ ಮತ್ತು ಮೇ ಮಾಹೆಯ ವೇತನ ಪಾವತಿಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ ಪರಿಣಾಮ 652 ಕೊಟಿ ರೂ. ಸಂಸ್ಥೆಗೆ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ ಮಾಹೆಯ ವೇತನ ಈಗಾಗಲೇ ಸಿಬ್ಬಂದಿಗಳಿಗೆ ಪಾವತಿಸಿದ್ದು, ಮೇ ಮಾಹೆಯ ವೇತನ ಸಹ ಶೀಘ್ರ ಸಿಬ್ಬಂದಿಗಳ ಕೈಸೇರಲಿದೆ ಎಂದರು.

ಸಂಸ್ಥೆ ನಷ್ಠದಲ್ಲಿದೆ ಎಂದು ಯಾವುದೇ ಕಾರಣಕ್ಕೂ ಸಿಬ್ಬಂದಿಗಳ ವೇತನ ಕಡಿತ ಮಾಡುವಾಗಲಿ ಅಥವಾ ಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚಿಸದಂತೆ ಅಧಿಕಾರಿಗಳಿಗೆ ನಿರ್ದೇಶನ  ನೀಡಿದ್ದೇನೆ. ಸಾರಿಗೆ ಸೇವೆ ಹೆಚ್ಚಳವಾಗುತ್ತಿದ್ದಂತೆ ಸಿಬ್ಬಂದಿಗಳ ಅವಶ್ಯಕತೆ ಇದ್ದಾಗ ಅಧಿಕಾರಿಗಳು ಕರೆ ಕಳುಹಿಸಿದಾಗ ಸಿಬ್ಬಂದಿಗಳು ಕೆಲಸಕ್ಕೆ ಹಾಜರಾಗಬೇಕು ಎಂದರು.

ದರ ಹೆಚ್ಚಿಸುವ ಪ್ರಸ್ತಾವನೆ ಇಲ್ಲ

ಕಳೆದ ನಾಲ್ಕು ತಿಂಗಳ ಹಿಂದೆ ಶೇ.12.5 ರಷ್ಟು ಸಾರಿಗೆ ದರವನ್ನು ಹೆಚ್ಚಿಸಿದ್ದು, ಪ್ರಸ್ತುತ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಠಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ, ಡಾ.ಅವಿನಾಶ ಜಾಧವ, ಎಂ.ಎಲ್.ಸಿ. ಬಿ.ಜಿ.ಪಾಟೀಲ ಇದ್ದರು.

ಸೂಪರ್ ಮಾರ್ಕೆಟ್ ಬಸ್ ನಿಲ್ದಾಣಕ್ಕೆ ಭೇಟಿ

20 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಸಿಟಿ ಬಸ್ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]