ನೇಕಾರರ ವಿದ್ಯುತ್ ಶುಲ್ಕ ಸಂಪೂರ್ಣ ಮನ್ನಾ ಮಾಡಲು ಆಗ್ರಹ

ದೊಡ್ಡಬಳ್ಳಾಪುರ : ನೇಕಾರರ ವಿದ್ಯುತ್ ಶುಲ್ಕ ಸಂಪೂರ್ಣ ಮನ್ನಾ ಮಾಡಲು ಒತ್ತಾಯಿಸಿ ಹಾಗೂ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ರಾಜ್ಯ ಮತ್ತು ಕೇಂದ್ರ ನೀತಿ ಖಂಡಿಸಿ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ನಗರ ಘಟಕದ ಅಧ್ಯಕ್ಷ  ಪಿ.ಎ.ವೆಂಕಟೇಶ್, ಉಪಾಧ್ಯಕ್ಷ ಆರ್.ಎಸ್.ಶ್ರೀನಿವಾಸ್, ಲಾಕ್ಡೌನ್ ಸಂದರ್ಭದಲ್ಲಿ ಸ್ಥಗಿತವಾಗಿರುವ ನೇಕಾರಿಕೆ ಉದ್ಯಮ ಇನ್ನು ಆರಂಭವೇ ಆಗಿಲ್ಲ. ಇಂತಹ ಸಂದರ್ಭದಲ್ಲಿ ಬೆಸ್ಕಾಂ ಸಿಬ್ಬಂದಿ ತಮಗೆ ಇಷ್ಟ ಬಂದಷ್ಟು ವಿದ್ಯುತ್ ಬಿಲ್ ಬರೆದುಕೊಂಡು ಹೋಗಿದ್ದಾರೆ.ಈಗ ನೋಡಿದರೆ ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಸಂಪರ್ಕವನ್ನು ಕಡಿತಮಾಡುವ ಎಚ್ಚರಿಕೆ ನೀಡುತಿದ್ದಾರೆ. ಇಲ್ಲಿಯವರೆಗೂ ವಿದ್ಯುತ್ ಮಗ್ಗಗಳಿಗೆ ರಿಯಾಯಿತಿ ದೊರೆಯುತಿತ್ತು.ಪ್ರಸ್ತಾವಿತ ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದಾಗಿ  ವಿದ್ಯುತ್ ಕ್ಷೇತ್ರ ಖಾಸಗಿಯವರ ಪಾಲಾಗಿ ನೇಕಾರರ ಬದುಕು ಮತ್ತಷ್ಟು ಕಷ್ಟವಾಗಲಿದೆ. ವಿದ್ಯುತ್ ರಿಯಾಯಿತಿ ಕೈತಪ್ಪಲಿದೆ. ನೇಕಾರಿಕೆ ಉದ್ಯಮ ಉತ್ತಮಗೊಳ್ಳುವವರೆಗೂ ಗೃಹಬಳಕೆ ಹಾಗೂ ಮಗ್ಗಕ್ಕೆ ಬಳಸುವ ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು.ನಂತರ ನೇಕಾರರಿಗೆ ಉಚಿತ ವಿದ್ಯುತ್ ಹಾಗೂ ನಿರಂತರ ವಿದ್ಯುತ್ ಸೌಲಭ್ಯ ನೀಡಬೇಕಿದೆ. ವಿದ್ಯುತ್ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ನೀಡಬಾರದು. ನೇಕಾರರು ನೇಯ್ದ ಬಟ್ಟೆ ಮಾರಾಟವಾಗದೇ ದಿವಾಳಿಯಾಗಿ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನೇಕಾರರಿಗೆ 10 ಲಕ್ಷ ರೂ ಪರಿಹಾರವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಕಾರ್ಯಪಾಲಕ ಅಭಿಯಂತರ ಗಂಗರಾಜು ವಿದ್ಯುತ್ ಬಿಲ್ಗಳಲ್ಲಿ ಆಗಿರುವ ವ್ಯತ್ಯಾಸವನ್ನು ಸರಿಪಡಿಸಿ, ಬಿಲ್ ಮೊತ್ತ ಹಚ್ಚಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಶುಲ್ಕ ಮನ್ನಾ ಮಾಡುವುದು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕಿದ್ದು, ನೇಕಾರರ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಕಾರ್ಯದರ್ಶಿ ಅಶೋಕ್,ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಶ್, ಸಹಕಾರ್ಯದರ್ಶಿಗಳಾದ ಈಶ್ವರ್, ಕೆ.ರಘುಕುಮಾರ್, ಸಿ.ಅಶ್ವತ್ಥ್, ಚೌಡಯ್ಯ,ಆದಿರಾಯಣರೆಡ್ಡಿ, ಸಂಚಾಲಕರಾದ ಸುರೇಶ್, ರಾಮಣ್ಣ, ಉಪಾಧ್ಯಕ್ಷರಾದ ಎಂ.ರಾಮಚಂದ್ರ, ರಾಮಾಂಜಿನಪ್ಪ, ರಾಜಶೇಖರ್, ಸುರೇಶ್, ಚೌಡಪ್ಪ, ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಭಾಗವಹಿಸಿದ್ದರು.

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!