ಆನ್ ಲೈನ್ ಬೋಧನೆ ಕುರಿತಂತೆ ಪೋಷಕರಿಗೆ ಸ್ಪಷ್ಟೀಕರಣ ನೀಡಿದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ದೊಡ್ಡಬಳ್ಳಾಪುರ :ಜೂ 10ರಂದು ನಿಮ್ಹಾನ್ಸ್ ಸಂಸ್ಥೆಯ ಮಕ್ಕಳ ಮಾನಸಿಕ ತಜ್ಞರು, ಯುನಿಸೆಫ್ ಪ್ರತಿನಿಧಿ, ಅಜೀಮ್‌ ಪ್ರೇಮ್‌ ಜೀ ಫೌಂಡೇಶನ್ ಸೇರಿದಂತೆ ವಿದ್ಯಾರ್ಥಿ ಶಿಕ್ಷಣದಲ್ಲಿ ಸಂಶೋಧನಾನಿರತ ಶಿಕ್ಷಣ ತಜ್ಞರು, ಹಾಗೂ ಇನ್ನು ಕೆಲ ಪರಿಣಿತರೊಂದಿಗೆ ಚರ್ಚಿಸಿ ಹಾಗೆಯೇ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಮಾರ್ಗದರ್ಶಿ ಸೂತ್ರಗಳನ್ವಯ ವಿದ್ಯಾರ್ಥಿಗಳ ಹಿತರಕ್ಷಿಸುವ ಸಂಬಂಧದ ಒಂದು ಸೂಕ್ತ ನಿರ್ಣಯವೊಂದನ್ನು On line ಶಿಕ್ಷಣ ಕುರಿತಂತೆ ಕೈಗೊಳ್ಳಲಾಗುವುದು ಎಂದು ಶಿಕ್ಷಣಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಆನ್ಲೈನ್ ಶಿಕ್ಷಣ ಕುರಿತು ಸಾರ್ವಜನಿಕರು ಹಾಗೂ ಪೋಷಕರಿಂದ ಆಕ್ರೋಶ ಕೇಳಿಬಂದ ಹಿನ್ನೆಲೆ ಈ ಕುರಿತು ಸಚಿವರು ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಸುಮಾರು 58 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ.ರಾಜ್ಯ ಪಠ್ಯ ಕ್ರಮವನ್ನು ಅನುಸರಿಸುವ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸುಮಾರು 31 ಲಕ್ಷ ವಿದ್ಯಾರ್ಥಿಗಳು ಅಭ್ಯಸಿಸುತ್ತಿದ್ದಾರೆ.

ಈ ಶಾಲೆಗಳ ವಿದ್ಯಾರ್ಥಿಗಳಿಗೆ ಕೋವಿಡ್ ಸಂದರ್ಭದಲ್ಲಿ ಪರ್ಯಾಯ ಬೋಧನೆಯನ್ನು ಸರ್ಕಾರವು ಆಲೋಚಿಸುತ್ತಿದ್ದು,ದೂರದರ್ಶನದ ಚಂದನ ವಾಹಿನಿಯಲ್ಲಿ ರಜಾ ಅವಧಿಯ ಬೋಧನೆಗೆ ನುರಿತ ಶಿಕ್ಷಕರ ಮೂಲಕ ಬೋಧನಾ ತರಗತಿಗಳನ್ನು ರೂಪಿಸಿ ಬಿತ್ತರಿಸುವ ಪೂರ್ವಭಾವಿ ಕ್ರಮಗಳಿಗೆ ಇಲಾಖೆಯು ಈಗಾಗಲೇ ಚಾಲನೆ ನೀಡಿದೆ.

ಗ್ರಾಮಾಂತರ ಪ್ರದೇಶಗಳಲ್ಲಿರುವ ಸರ್ಕಾರಿ, ಖಾಸಗಿ ಅನುದಾನ ರಹಿತ ಶಾಲೆಗಳ ಮಕ್ಕಳು ರಾಜ್ಯ ಸರ್ಕಾರದ ನೀತಿಗೆ ಅಗುಣವಾಗಿ ಬೋಧನಾ ಕ್ರಮಗಳನ್ನು ಯಾವುದೇ ಸಮಸ್ಯೆಯಿಲ್ಲದೇ ಅಳವಡಿಸಿಕೊಳ್ಳುವುದು ಈ ಶಾಲೆಗಳಲ್ಲಿ ಕಲಿಯುತ್ತಿರುವ ಈ ಸುಮಾರು 90 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾದ ಕ್ರಮವಾಗಿರುತ್ತದೆ. 

ನಗರ ಕೇಂದ್ರಿತವಾದ ಕೇಂದ್ರ/ ಇತರೆ ಪಠ್ಯಕ್ರಮಗಳಲ್ಲಿ (CBSE, ICSE) ಕಲಿಯುತ್ತಿರುವ ಸುಮಾರು 14 ಲಕ್ಷ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿಗಳು ಮಾತ್ರ ಆನ್ಲೈನ್ ಬೋಧನೆಯ ಪರ್ಯಾಯ ಕ್ರಮಗಳನ್ನು ಪೋಷಕರ ಮತ್ತು ವಿದ್ಯಾರ್ಥಿಗಳ ಮೇಲೆ ಹೇರಿವೆ. 

ಈ ಸಮಸ್ಯೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಲ್ಲಿ ಸಾಮಾನ್ಯವಾಗಿ ಕಂಡುಬರುವುದಿಲ್ಲ. ಖಾಸಗಿ ಶಾಲಾ ಸಂಸ್ಥೆಗಳ ರಾಜ್ಯ ಸಂಘಟನೆಗಳು, ಶಿಕ್ಷಣ ತಜ್ಞರುಗಳೊಂದಿಗೆ ಇಂದು ನನ್ನ ನೇತೃತ್ವದಲ್ಲಿ ಸಮಾಲೋಚನೆ ನಡೆಸಲಾಗಿದೆ.ಈ ಸುದೀರ್ಘ ಸಮಾಲೋಚನೆಯಲ್ಲಿ ಎಲ್ ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ ತರಗತಿಗಳಲ್ಲಿ ಆನ್ ಲೈನ್ ಮೂಲಕ ಶಿಕ್ಷಣವನ್ನು ನೀಡುವುದು ಆರೋಗ್ಯಕರವೂ ಅಲ್ಲ ಮತ್ತು ಯೋಗ್ಯವೂ ಅಲ್ಲ. ಹಾಗೂ ಇನ್ನುಳಿದ ತರಗತಿಗಳಿಗೆ ಮಕ್ಕಳ ಏಕಾಗ್ರತಾ ಅವಧಿ ಹಾಗೂ ಇಂತಹ ವಿನೂತನ ಬೋಧನಾ ಉಪಕ್ರಮಗಳು ಈ ವಿದ್ಯಾರ್ಥಿ ಸಮುದಾಯದ ಆರೋಗ್ಯದ ಮೇಲೆ ಉಂಟು ಮಾಡಬಹುದಾದ ದುಷ್ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಬಹುದಾಗಿದೆ ಎಂಬ ಅಭಿಪ್ರಾಯಗಳು  ಹೊರಹೊಮ್ಮಿವೆ ಎಂದಿರುವ ಅವರು ಇವುಗಳು ಅಭಿಪ್ರಾಯಗಳು_ಮಾತ್ರ. ತೀರ್ಮಾನವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]