ಕಳಪೆ ಆಹಾರ ಧಾನ್ಯ ಕಂಡು ಸಚಿವ ಗೋಪಾಲಯ್ಯ ಗರಂ

ಯಾದಗಿರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಡಿತರ ಧಾನ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆಹಾರ ಖಾತೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ಯಾದಗಿರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ಯಾದಗಿರಿ ಜಿಲ್ಲೆಯ ಜಿಲ್ಲಾ ಮಟ್ಟದ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಪ್ರತಿ ತಿಂಗಳು ಅನೇಕ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು,ಅದರಂತೆ ಇಂದು ಯಾದಗಿರಿ ಜಿಲ್ಲೆಗೆ ಆಗಮಿಸಿದ್ದೇನೆ. ಪ್ರಸುತ್ತ ಯಾದಗಿರಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬರುವ ಪಡಿತರ ಧಾನ್ಯಗಳು ಬಡವರಿಗೆ ತಲುಪುತ್ತಿದೆಯೋ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಎಂದರು.

ಇನ್ನು ಜಿಲ್ಲೆಯ ಡಿಸಿ,ಜಿ.ಪಂ.ಸಿಇಓ,ಎಸಿ, ತಹಶೀಲ್ದಾರ್ ಸೇರಿದಂತೆ ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು,ಏಪ್ರಿಲ್‌ನಲ್ಲಿ ಕೊಟ್ಟಿರುವ ಪಡಿತರ ಧಾನ್ಯ ಎಷ್ಟು ಖರ್ಚಾಗಿದೆ.ಮೇ ತಿಂಗಳಿನಲ್ಲಿ ಎಷ್ಟು ಜನರಿಗೆ ಕೊಟ್ಟಿದ್ದೇವೆ ಎಂಬುದಾಗಿ ಮಾಹಿತಿ ಪಡೆದಿದ್ದೇನೆ ಜೊತೆಗೆ ಇವತ್ತಿನಿಂದ ವಿತರಣೆ ಮಾಡಲಾಗುತ್ತಿರುವ ಪಡಿತರ ಧಾನ್ಯಗಳ ಗುಣಮಟ್ಟದ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ ಎಂದರು.

ಇದಲ್ಲದೆ, ಹಿಂದುಳಿದ ಯಾದಗಿರಿ ಜಿಲ್ಲೆಗೆ ಮಹಾರಾಷ್ಟ್ರ ಹಾಗೂ ಬೆಂಗಳೂರುನಿಂದ ಸಾವಿರಾರು ಜನರು ಇಲ್ಲಿಗೆ ಬಂದಿದ್ದಾರೆ.ಈ ವೇಳೆ ಜಿಲ್ಲಾಡಳಿತ,ಶಾಸಕರು,ಸಂಸದರು ಶಕ್ತಿ ಮೀರಿ ಕೊರೊನಾ ತಡೆಯಲು ಪ್ರಯತ್ನ ಮಾಡಿದ್ದು,ಅವರೆಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದರು.

ಇನ್ನು ಆಹಾರ ಇಲಾಖೆಯಲ್ಲಿ ಕಟ್ಟಕಡೆಯ ಮನುಷ್ಯನಿಗೂ ಆಹಾರ ತಲುಪಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಿರುವ ಆತ್ಮನಿರ್ಭಾರ್ ಯೋಜನೆಯಲ್ಲಿ ಹೊರ ಜಿಲ್ಲೆ,ಹೊರ ರಾಜ್ಯಗಳಿಂದ ಬಂದಿರುವ ಹಾಗೂ ಕಾರ್ಡ್ಗಳಿಲ್ಲದವರಿಗೆ 2 ತಿಂಗಳು ತಲಾ 10 ಕೆಜಿ ಅಕ್ಕಿ ಮತ್ತು 2ಕೆಜಿ ಕಡಲೇ ಕಾಳು ಕೊಡಲು ತೀರ್ಮಾನ ಮಾಡಿ,ರಾಜ್ಯದಲ್ಲಿ 40ಲಕ್ಷ ಜನರಿಗೆ ವಿತರಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಆಹಾರ ಧಾನ್ಯಗಳನ್ನು ಕಳುಹಿಸಿದೆ ಎಂದು ಮಾಹಿತಿ ನೀಡಿದರು.

ವಿಶೇಷವಾಗಿ ಜಿಲ್ಲೆಯಲ್ಲಿ ಎಲ್ಲಾ ಬಡ ಕುಟುಂಬದವರಿಗೆ ಆಹಾರ ಧ್ಯಾನಗಳನ್ನು ತಲುಪಿಸುವುದು,ಗುಣಮಟ್ಟದ ಆಹಾರವನ್ನು ಸರಿಯಾಗಿ ಸರಬರಾಜು ಮಾಡಲು ಆಗದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು.ದೂರದ ಊರುಗಳಲ್ಲಿ 4-5ಕಿಲೋ ಮೀಟರ್ ದೂರ ಪಡಿತರ ಅಂಗಡಿಗಳು ಇದ್ದರೇ ಆ ಊರುಗಳಿಗೆ ಖುದ್ದಾಗಿ ತೆರಳಿ ಬಡವರಿಗೆ ಆಹಾರ ಧಾನ್ಯ ವಿತರಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು ಆ ಊರುಗಳಿಗೆ ಹೊಸ ಅಂಗಡಿ ನೀಡಲು ಪ್ರಸ್ತಾವನೆ ಸಲ್ಲಿಸಿದರೇ ಮುಂದಿನ ದಿನಗಳಲ್ಲಿ ಅದನ್ನು ಮಂಜೂರು ಮಾಡಲಾಗುವುದು ಎಂದರು.

ಇನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ 3 ತಿಂಗಳು ಗ್ಯಾಸ್ ಕೊಟ್ಟಿದ್ದೇವೆ,ಮುಖ್ಯಮಂತ್ರಿ ಅನಿಲ್ ಭಾಗ್ಯ ಯೋಜನೆಯಲ್ಲಿ 

3 ತಿಂಗಳು ಉಚಿತ ಗ್ಯಾಸ್ ಕೊಡುತ್ತಿದ್ದು,ಯಾದಗಿರಿ ಜಿಲ್ಲೆಗೆ 2,5೦೦ ಗ್ಯಾಸ್ ಕನೆಕ್ಷನ್ ಹೆಚ್ಚುವರಿಗೆ ಕೊಡಲಾಗಿದ್ದು,ಅದನ್ನು ಬಡವರಿಗೆ ತಲುಪಿಸಲು ವ್ಯವಸ್ಥೆ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದಲ್ಲದೆ,ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯ ಗೋದಾಮು ಕಟ್ಟಲು 5 ಎಕರೆ ಜಾಗ ಕೊಡಲು ಜಿಲ್ಲಾಡಳಿತಕ್ಕೆ ಸಲ್ಲಿಸಲು ಆಹಾರ ಇಲಾಖೆ ಅಧಿಕಾರಿಗಳು ಸಲ್ಲಿಸಲು ಹೇಳಿದ್ದೇನೆ ಎಂದರು.

ಈ ನಡುವೆ ಯಾದಗಿರಿ ಯರಗೋಳ ನ್ಯಾಯ ಬೆಲೆ ಅಂಗಡಿ ಮತ್ತು ಗೋದಾಮುಗಳಿಗೆ ಭೇಟಿ ನೀಡಿದ ಆಹಾರ ಖಾತೆ ಸಚಿವ ಗೋಪಾಲಯ್ಯ ಪಡಿತರದಾರರಿಗೆ ನೀಡುತ್ತಿರುವ ಆಹಾರ ಧಾನ್ಯಗಳ ಗುಣಮಟ್ಟ ವೀಕ್ಷಿಸಿದರು.ಈ ವೇಳೆ ಕಳಪೆ ಮಟ್ಟದ ಬೇಳೆ,ಕಡಲೆ ಕಾಳು ನೋಡಿದ ಸಚಿವರು ಅಧಿಕಾರಿಗಳ ಮೇಲೆ ಗರಂ ಅದರು.

ಅಲ್ಲದೆ, ಈ ಕಳಪೆ ಆಹಾರವನ್ನು ನಿಮ್ಮ ಮನೆಗಳಲ್ಲಿರುವವರಿಗೆ ಕೊಡಿ ಅವರು ತಿನ್ನುತಾರ ನೋಡಿ ಎಂದು ಅಧಿಕಾರಿಗಳನ್ನು ನೇರವಾಗಿ ತರಾಟೆಗೆ ತೆಗೆದುಕೊಂಡರು.ಜೊತೆಗೆ ಯಾವುದೇ ಕಾರಣಕ್ಕೂ ಈ ಕಾಳುಗಳನ್ನು ನೀಡಬೇಡಿ ಹಿಂದಿರುಗಿಸಿ ಎಂದು ಖಡಕ್ ಸೂಚನೆ ನೀಡಿದರು.

**********************

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಯುದ್ಧದ ಪರಿಣಾಮ ಸೂಕ್ತ ಮುಂಜಾಗ್ರತೆ ಕೈಗೊಳ್ಳದ ಕಾರಣ ಭಾರತೀಯರ ಮೇಲೆ ತೀವ್ರತರವಾದ ಸಂಕಷ್ಟ ಎದುರಾಗಿದ್ದು, ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಡುಗೆ ಅನಿಲ ಅಭಾವದಿಂದ ಹೋಟೆಲ್ ನಡೆಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ *** ನಗರದಲ್ಲಿ ನಡೆದಿದೆ‌.

[ccc_my_favorite_select_button post_id="120411"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!