ಸೈನಿಕ ಹುಳುವಿನ ಹತೋಟಿಗೆ ಕ್ರಮ: ಸಹಾಯಕ ಕೃಷಿ ನಿರ್ದೇಶಕಿ ರಾಜೇಶ್ವರಿ

ದೊಡ್ಡಬಳ್ಳಾಪುರ: ಮುಸುಕಿನ ಜೋಳಕ್ಕೆ ಕಾಡುವ ಸೈನಿಕ ಹುಳು ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ರಾಜೇಶ್ವರಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು.ತಾಲ್ಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ (ಎಮಾಮ್ಯಕ್ಟಿನ್ ಬೆಂಜಾಯಿಟ್)ಕೀಟನಾಶಕದ ದಾಸ್ತಾನು ಮಾಡಲಾಗಿದ್ದು ರಿಯಾಯಿತಿ ದರದಲ್ಲಿ ರೈತರು ಪಡೆಯಬಹುದಾಗಿದೆ ಎಂದಿದ್ದಾರೆ.

ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿ ರಾಗಿ ಮತ್ತು ಮುಸುಕಿನ ಜೋಳ ಮುಖ್ಯ ಬೆಳೆಗಳಾಗಿದ್ದು ಇತ್ತೀಚಿನ ದಿನಗಳಲ್ಲಿ ಸ್ಪೊಡಾಪ್ಟರಾ ಜಾತಿಗೆ ಸೇರಿದ (ಸ್ಪೊಡಾಪ್ಟರಾ ಸ್ರುಜಿಪರ್ಡಾ) ಸೈನಿಕ ಹುಳ ಬಾದೆಯು ಮುಸುಕಿನಜೋಳ ಬೆಳೆಯಲ್ಲಿ ಕಂಡುಬಂದಿರುತ್ತದೆ.ರೈತರು ಕೀಟನಾಶಕ ಸಿಂಪಡಿಸದೆ ಬೆಳೆಯುವ ಬೆಳೆಗೂ ಸಹ ಔಷಧಿ ಸಿಂಪಡಿಸುವ ಸಂದಿಗ್ದ ಪರಿಸ್ಥಿತಿ ಒದಗಿ ಬಂದಿದೆ.ರೈತ ಕೆಳಗೆ ತಿಳಿಸಿರುವ ವಿಷಯಗಳ ಕಡೆಗೆ ಗಮನ ಹರಿಸಿ ಸೈನಿಕ ಹುಳುವನ್ನು ಹತೋಟಿಗೆ ತರಬೇಕೆಂದು ತಮ್ಮಲ್ಲಿ ಕೋರಿದ್ದಾರೆ.

ಸಾಂದರ್ಭಿಕ ಶಿಫಾರಸ್ಸಿನಲ್ಲಿ ಈ ಕೆಳಗಿನ ಹತೋಟಿ ಕ್ರಮಗಳನ್ನು ಕೈಗೊಳ್ಳಬಹುದು.

1.ಮಾಗಿ ಉಳುಮೆ ಮಾಡುವುದು ಅಥವಾ ಆಳವಾದ  ಉಳುಮೆ ಮಾಡುವುದರಿಂದ ಮೊಟ್ಟೆ ಅಥವಾ ತತ್ತಿಗಳನ್ನು ನಾಶಗೊಳಿಸಬಹುದು.

2.ಬೇವಿನ ಬೀಜದ ಕಷಾಯವನ್ನು ಶೇ.5 ರಂತೆ ಅಥವಾ ಬೇವಿನ ಮೂಲದ ಕೀಟನಾಶಕ ಅಜಡಿರೆಕ್ಟಿನ್ 1500ಪಿ.ಪಿ.ಎಂ. 5 ಮೀ. ಲೀ ಒಂದು ಲೀಟರ್ ನೀರಿಗೆ ಮಿಶ್ರಣ ಮಾಡಿ ಸುಳಿಯಲ್ಲಿ ಸಿಂಪರಣೆ ಮಾಡುವುದರಿಂದ ಮೊಟ್ಟೆ ಮತ್ತು ಮರಿಹುಳುಗಳನ್ನು ನಾಶಪಡಿಸಬಹುದು.

3.ಸ್ಪೈನೊಟರಮ್ 11.7 ಎಸ್.ಸಿ 0.5 ಮಿ.ಲೀ/ಲೀ. ನೀರಿಗೆ ಅಥವಾ ಕ್ಲೊರಾಂಟ್ರಿನೀಲಿಪ್ರೋಲ್ 18.5 ಎಸ್.ಸಿ 0.4 ಮಿ.ಲೀ ಅಥವಾ 0.4 ಗ್ರಾಂ ಎಮಾಮೆಕ್ಟಿನ್ ಬೆಂಜೋಯೇಟ್ 5 ಎಸ್.ಜಿ. ಯನ್ನು ಒಂದು ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು.

4.ಬೆಳೆದ ಹುಳುಗಳನ್ನು ಹತೋಟಿಯಲ್ಲಿಡಲು ವಿಷಪ್ರಾಷಣದ ಬಳಕೆ: 10ಕೆ.ಜಿ. ಗೋದಿ ತೌಡು ಅಥವಾ ಅಕ್ಕಿತೌಡು (ಬೂಸ) 2 ಕೆ.ಜಿ ಬೆಲ್ಲಕ್ಕೆ ಬೇಕಾಗುವಷ್ಟು ತಕ್ಕಮಟ್ಟಿಗೆ ನೀರನ್ನು ಬೆರೆಸಿಟ್ಟು ಮಾರನೇ ದಿನ 100 ಗ್ರಾಂ ಥೈಯೋಡಿಕಾರ್ಬ್ ಪ್ರತಿ ಕೆ.ಜಿ. ಭತ್ತದ ತೌಡಿಗೆ 10 ಗ್ರಾಂ ನಂತೆ ಕೀಟನಾಶಕ ಮಿಶ್ರಣಮಾಡಿ ಬೆಳೆಯ ಸುಳಿಯಲ್ಲಿ ಉದುರಿಸುವುದು.

                       *******************

ರಾಜಕೀಯ

BJP ಎಂಎಲ್‌ಎ ಲೋಕಾಗೆ ಲಾಕ್: ಬಿಜೆಪಿಯವರು ಬಹಳ ಪ್ರಾಮಾಣಿಕರಲ್ಲವೇ ಎಂದು ಸಿಎಂ, ಡಿಸಿಎಂ ಲೇವಡಿ

BJP ಎಂಎಲ್‌ಎ ಲೋಕಾಗೆ ಲಾಕ್: ಬಿಜೆಪಿಯವರು ಬಹಳ ಪ್ರಾಮಾಣಿಕರಲ್ಲವೇ ಎಂದು ಸಿಎಂ, ಡಿಸಿಎಂ

ಆಡಳಿತಾರೂಢ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದ ಬಿಜೆಪಿ (BJP), ಅದರ ಶಾಸಕನೇ ಕಮಿಷನ್ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವುದು ತೀವ್ರ ಮುಜುಗರಕ್ಕೆ ಎದುರಿಸುವಂತಾಗಿದೆ.

[ccc_my_favorite_select_button post_id="119653"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!