ಕಳಪೆ ಪಡಿತರ ಸರಬರಾಜು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಕೆ.ಗೋಪಾಲಯ್ಯ

ದೊಡ್ಡಬಳ್ಳಾಪುರ: ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಪಡಿತರ ವಿತರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹೇಳಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಗಟು ಗೋದಾಮುಗಳಿಗೆ ಸಾಗಿಸಿರುವ ಆಹಾರ ಧಾನ್ಯಗಳಲ್ಲಿ ಕಳಪೆ ಮಟ್ಟದ ಬೇಳೆ ಕಾಳುಗಳು ಸರಬರಾಜಾಗಿರುವ ದೂರುಗಳು ಬಂದಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಟಿಎಪಿಸಿಎಂಎಸ್ ಆಹಾರ ಧಾನ್ಯ ಸಗಟು ಗೋದಾಮಿಗೆ ಇಂದು ದಿಢೀರ್ ಭೇಟಿ ನೀಡಿ ಅಕ್ಕಿ, ಗೋಧಿ, ತೊಗರಿಬೇಳೆ ಮತ್ತು ಕಡಲೆಕಾಳುಗಳನ್ನು ಮೂಟೆಗಳನ್ನು ಬಿಚ್ಚಿ ಖುದ್ದು ಪರಿಶೀಲನೆ ನಡೆಸಿದರು. 

ಗ್ರಾಹಕರಿಗೆ ವಿತರಿಸಲು ದಾಸ್ತಾನು ಮಾಡಿದ್ದ ಕಡಲೆಕಾಳಿನ ಮೂಟೆಯಲ್ಲಿ ಕಸಕಡ್ಡಿ ಕಂಡುಬಂದಿದ್ದರಿಂದ ಗುಣಮಟ್ಟವಿಲ್ಲದ ಕಾಳುಗಳ ವಿತರಣೆಯನ್ನು ತಕ್ಷಣ  ಸ್ಥಗಿತಗೊಳಿಸುವಂತೆ ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಪೂರೈಕೆ ಇಲಾಖೆ ಉಪನಿರ್ದೇಶಕ ಆರ್.ಡಿ.ಸುಬ್ರಹ್ಮಣ್ಯ ಅವರಿಗೆ ಆದೇಶಿಸಿದರು ಹಾಗೂ ಪಡಿತರ ವಿತರಣೆಗೂ ಮುನ್ನ ಪರಿಶೀಲಿಸಬೇಕು ಹಾಗೂ ಕಡಲೆ ಕಾಳಿನಲ್ಲಿನ ಕಸಕಡ್ಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಗಟು ಗೋದಾಮುಗಳಿಗೆ ಸಾಗಿಸಿರುವ ಆಹಾರ ಧಾನ್ಯಗಳಲ್ಲಿ ಕಳಪೆ ಮಟ್ಟದ ಬೇಳೆ ಕಾಳುಗಳು ಸರಬರಾಜಾಗಿರುವ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಕಡೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು. 

ಕಳಪೆ ಪಡಿತರ ಸರಬರಾಜು ಮಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಹಾಗೆಯೇ ಗುಣಮಟ್ಟವಿಲ್ಲದ ಕಾಳುಗಳನ್ನು ಹಿಂಪಡೆದು ಗುಣಮಟ್ಟದ ಬೇಳೆ ಕಾಳು ಪೂರೈಸುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಕಾಳು ಹೊರತುಪಡಿಸಿ ಉಳಿದೆಲ್ಲ ಪಡಿತರ ಗುಣಮಟ್ಟದ್ದಾಗಿದೆ. ಹೊಸಕೋಟೆ ಟಿಎಪಿಸಿಎಂಎಸ್ ಗೋದಾಮು ನಿರ್ವಹಣೆ ಉತ್ತಮವಾಗಿದೆ. ಇಲ್ಲಿನ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಯಡಿ ಮುಂಗಡ ಪಡಿತರ ವಿತರಣೆಯಾಗಿದೆ. ಎಪಿಎಲ್, ಬಿಪಿಎಲ್ ಕಾರ್ಡುದಾರರ ಜತೆಗೆ ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರಿಗೆ ಹಾಗೂ ಬಡವರಿಗೆ ಆಧಾರ್ ಕಾರ್ಡ್ ಮಾನದಂಡದಲ್ಲಿ ಪಡಿತರ ವಿತರಣೆಯಾಗುತ್ತಿದೆ.  ಎಲ್ಲಿಯೂ ಪಡಿತರ ವಿತರಣೆಯಲ್ಲಿ ಲೋಪವಾಗಬಾರದು ಎಂಬ ಕಾರಣಕ್ಕೆ ಖುದ್ದು ಪರಿಶೀಲನೆ ನಡೆಸುತ್ತಿರುವುದಾಗಿ ಸಚಿವರು ತಿಳಿಸಿದರು.

ಹೊಸಕೋಟೆ ತಹಶೀಲ್ದಾರ್ ಗೀತಾ, ಟಿಎಪಿಸಿಎಂಎಸ್ ನಿರ್ದೇಶಕ ಉಪ್ಪಾರಳ್ಳಿ ಮುನಿಯಪ್ಪ, ಬಾಬು ರೆಡ್ಡಿ, ಟಿಎಪಿಸಿಎಂಎಸ್ ಸಿಬ್ಬಂದಿ ಸೋಮಶೇಖರ್, ಗೋದಾಮು ಮೇಲ್ವಿಚಾರಕ ದೇವರಾಜ್ ಮತ್ತಿತರರು ಇದ್ದರು.

                   **********

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!