ಕಳಪೆ ಪಡಿತರ ಸರಬರಾಜು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಕೆ.ಗೋಪಾಲಯ್ಯ

ದೊಡ್ಡಬಳ್ಳಾಪುರ: ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಪಡಿತರ ವಿತರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ.ಗೋಪಾಲಯ್ಯ ಅವರು ಹೇಳಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಗಟು ಗೋದಾಮುಗಳಿಗೆ ಸಾಗಿಸಿರುವ ಆಹಾರ ಧಾನ್ಯಗಳಲ್ಲಿ ಕಳಪೆ ಮಟ್ಟದ ಬೇಳೆ ಕಾಳುಗಳು ಸರಬರಾಜಾಗಿರುವ ದೂರುಗಳು ಬಂದಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಟಿಎಪಿಸಿಎಂಎಸ್ ಆಹಾರ ಧಾನ್ಯ ಸಗಟು ಗೋದಾಮಿಗೆ ಇಂದು ದಿಢೀರ್ ಭೇಟಿ ನೀಡಿ ಅಕ್ಕಿ, ಗೋಧಿ, ತೊಗರಿಬೇಳೆ ಮತ್ತು ಕಡಲೆಕಾಳುಗಳನ್ನು ಮೂಟೆಗಳನ್ನು ಬಿಚ್ಚಿ ಖುದ್ದು ಪರಿಶೀಲನೆ ನಡೆಸಿದರು. 

ಗ್ರಾಹಕರಿಗೆ ವಿತರಿಸಲು ದಾಸ್ತಾನು ಮಾಡಿದ್ದ ಕಡಲೆಕಾಳಿನ ಮೂಟೆಯಲ್ಲಿ ಕಸಕಡ್ಡಿ ಕಂಡುಬಂದಿದ್ದರಿಂದ ಗುಣಮಟ್ಟವಿಲ್ಲದ ಕಾಳುಗಳ ವಿತರಣೆಯನ್ನು ತಕ್ಷಣ  ಸ್ಥಗಿತಗೊಳಿಸುವಂತೆ ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಪೂರೈಕೆ ಇಲಾಖೆ ಉಪನಿರ್ದೇಶಕ ಆರ್.ಡಿ.ಸುಬ್ರಹ್ಮಣ್ಯ ಅವರಿಗೆ ಆದೇಶಿಸಿದರು ಹಾಗೂ ಪಡಿತರ ವಿತರಣೆಗೂ ಮುನ್ನ ಪರಿಶೀಲಿಸಬೇಕು ಹಾಗೂ ಕಡಲೆ ಕಾಳಿನಲ್ಲಿನ ಕಸಕಡ್ಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಗಟು ಗೋದಾಮುಗಳಿಗೆ ಸಾಗಿಸಿರುವ ಆಹಾರ ಧಾನ್ಯಗಳಲ್ಲಿ ಕಳಪೆ ಮಟ್ಟದ ಬೇಳೆ ಕಾಳುಗಳು ಸರಬರಾಜಾಗಿರುವ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಕಡೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು. 

ಕಳಪೆ ಪಡಿತರ ಸರಬರಾಜು ಮಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಹಾಗೆಯೇ ಗುಣಮಟ್ಟವಿಲ್ಲದ ಕಾಳುಗಳನ್ನು ಹಿಂಪಡೆದು ಗುಣಮಟ್ಟದ ಬೇಳೆ ಕಾಳು ಪೂರೈಸುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.

ಕಾಳು ಹೊರತುಪಡಿಸಿ ಉಳಿದೆಲ್ಲ ಪಡಿತರ ಗುಣಮಟ್ಟದ್ದಾಗಿದೆ. ಹೊಸಕೋಟೆ ಟಿಎಪಿಸಿಎಂಎಸ್ ಗೋದಾಮು ನಿರ್ವಹಣೆ ಉತ್ತಮವಾಗಿದೆ. ಇಲ್ಲಿನ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಯಡಿ ಮುಂಗಡ ಪಡಿತರ ವಿತರಣೆಯಾಗಿದೆ. ಎಪಿಎಲ್, ಬಿಪಿಎಲ್ ಕಾರ್ಡುದಾರರ ಜತೆಗೆ ಪಡಿತರ ಚೀಟಿ ಇಲ್ಲದ ವಲಸೆ ಕಾರ್ಮಿಕರಿಗೆ ಹಾಗೂ ಬಡವರಿಗೆ ಆಧಾರ್ ಕಾರ್ಡ್ ಮಾನದಂಡದಲ್ಲಿ ಪಡಿತರ ವಿತರಣೆಯಾಗುತ್ತಿದೆ.  ಎಲ್ಲಿಯೂ ಪಡಿತರ ವಿತರಣೆಯಲ್ಲಿ ಲೋಪವಾಗಬಾರದು ಎಂಬ ಕಾರಣಕ್ಕೆ ಖುದ್ದು ಪರಿಶೀಲನೆ ನಡೆಸುತ್ತಿರುವುದಾಗಿ ಸಚಿವರು ತಿಳಿಸಿದರು.

ಹೊಸಕೋಟೆ ತಹಶೀಲ್ದಾರ್ ಗೀತಾ, ಟಿಎಪಿಸಿಎಂಎಸ್ ನಿರ್ದೇಶಕ ಉಪ್ಪಾರಳ್ಳಿ ಮುನಿಯಪ್ಪ, ಬಾಬು ರೆಡ್ಡಿ, ಟಿಎಪಿಸಿಎಂಎಸ್ ಸಿಬ್ಬಂದಿ ಸೋಮಶೇಖರ್, ಗೋದಾಮು ಮೇಲ್ವಿಚಾರಕ ದೇವರಾಜ್ ಮತ್ತಿತರರು ಇದ್ದರು.

                   **********

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!